ಹಬ್ಬದ ವೇಳೆ ನಿರೀಕ್ಷಿತ ಮಟ್ಟದ ವ್ಯಾಪಾರ ವಹಿವಾಟು ನಡೆದಿಲ್ಲ : ವರದಿ
Team Udayavani, Nov 7, 2019, 9:02 PM IST
ಹಬ್ಬದ ಸೀಸನ್ ಬಂತೆದರೆ ಮಳಿಗೆಗಳಲ್ಲಿ ಆಕರ್ಷಕ ಡಿಸ್ಕೌಂಟ್ನ ಫಲಕಗಳು ರಾರಾಜಿಸುತ್ತಾ ಇರುತ್ತವೆ ಆದರೆ ಈ ಬಾರಿ ಗ್ರಾಹಕರ ಅಪೇಕ್ಷೆಗೂ ಮೀರಿ ಆಫರ್ ನೀಡಿದರೂ ನಿರೀಕ್ಷಿತ ಮಟ್ಟದಲ್ಲಿ ವ್ಯಾಪಾರ ವಹಿವಾಟು ನಡೆದಿಲ್ಲ ಎಂದು ವರದಿಯೊಂದು ತಿಳಿಸಿದೆ.
ನೀರಸ ಪ್ರತಿಕ್ರಿಯೆ
ದೀಪಾವಳಿ ಎಂದಾಕ್ಷಣ ಮಾರುಕಟ್ಟೆ ಸುತ್ತಾಟ, ಖರೀದಿ ಸ್ವಲ್ಪ ಹೆಚ್ಚಾಗಿಯೇ ಇರುತ್ತದೆ ಎನ್ನುವುದು ಎಲ್ಲರ ಅಭಿಪ್ರಾಯ. ಆದರೆ ಅಧಿಕ ಮಟ್ಟದಲ್ಲಿ ಗ್ರಾಹಕರನ್ನು ಎದುರು ನೋಡುತ್ತಿದ್ದ ವ್ಯಾಪಾರಿಗಳಿಗೆ ನಿರಾಸೆಯಾಗಿದ್ದು, ಮಾರುಕಟ್ಟೆಯಲ್ಲಿ ನೀರಸ ಪ್ರತಿಕ್ರಿಯೆ ಕಂಡುಬಂದಿದೆ ಎಂದು ಬ್ಯಾಂಕ್ ಆಫ್ ಅಮೆರಿಕ ಮೆರಿಲ್ ಲಿಂಚ್ ವರದಿ ಹೇಳಿದೆ.
120 ಮಳಿಗೆಗಳು
ಒಟ್ಟು 120 ಚಿಲ್ಲರೆ ಅಂಗಡಿ ಮುಂಗಟ್ಟುಗಳನ್ನು ಸಮೀಕ್ಷೆಗೆ ಒಳಪಡಿಸಿದ್ದು, ಶೇ.90 ರಷ್ಟು ವ್ಯಾಪಾರಿಗಳು ಕಳೆದ ವರ್ಷದ ಆದಾಯಕ್ಕಿಂತ, ಈ ವರ್ಷದ ಆದಾಯದ ಮಟ್ಟ ಕಡಿಮೆ ಇದೆ ಎಂದು ಹೇಳಿದ್ದಾರೆ.
ಬೇಡಿಕೆ ಕ್ಷೀಣಿಸುತ್ತಿದೆ
ಆರ್ಥಿಕ ಕ್ಷೇತ್ರದಲ್ಲಿ ಕುಸಿತ ಕಂಡುಬರುತ್ತಿದ್ದು, ಬೇಡಿಕೆ ಕ್ಷೀಣಿಸುತ್ತಿದೆ ಎಂದು ಆರ್ಥಿಕ ವಿಶ್ಲೇಷಕರು ಹೇಳಿದ್ದು, ಅಕ್ಟೋಬರ್ ತಿಂಗಳಿನಲ್ಲಿ ಉತ್ಪಾದನೆ ಮತ್ತು ಸೇವೆಗಳ ಚಟುವಟಿಕೆ ಕಡಿತವಾಗಿದೆ ಎಂದು ವರದಿ ತಿಳಿಸಿದೆ.
ವರ್ಷದಿಂದ ವರ್ಷಕ್ಕೆ ಆದಾಯ ಕಡಿಮೆ
ಸುಮಾರು ಶೇ.70 ರಷ್ಟು ಚಿಲ್ಲರೆ ವ್ಯಾಪಾರಿಗಳು ವರ್ಷದಿಂದ ವರ್ಷಕ್ಕೆ ಆದಾಯ ಕಡಿಮೆ ಎಂಬ ಅಭಿಪ್ರಾಯವನ್ನು ಹೊರಹಾಕಿದ್ದು, ಶೇ.30 ರಷ್ಟು ತೃಪ್ತಿದಾಯಕ ಎಂದು ಹೇಳಿದ್ದಾರೆ.
ಆನ್ಲೈನ್ ಶಾಪಿಂಗ್ ಮಾರಕ
ಹೆಚ್ಚುತ್ತಿರುವ ಆನ್ಲೈನ್ ಶಾಪಿಂಗ್ ಚಿಲ್ಲರೆ ವ್ಯಾಪಾರಿ ಮಾರುಕಟ್ಟೆಗಳ ಮೇಲೆ ಪರಿಣಾಮ ಬೀರಿದ್ದು, ಜನರು ದೊಡ್ಡ ದೊಡ್ಡ ಮಾಲ್ ಹಾಗೂ ಬ್ರಾಂಡೆಡ್ ಮಳಿಗೆಗಳ ಮೊರೆ ಹೋಗುತ್ತಿದ್ದಾರೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ