ಮಕ್ಕಳ ಜತೆ ಮಕ್ಕಳಾಗಿ ಪಾಠ ಮಾಡುವ “ಈ” ಶಿಕ್ಷಕನ ವೀಡಿಯೋ ವೈರಲ್..!


Team Udayavani, Aug 26, 2019, 12:03 PM IST

news-tdy-2

ಭುವನೇಶ್ವರ: ಶಿಕ್ಷಕರು ಶಿಸ್ತಿನ ಸಿಪಾಯಿಯಂತೆ ಪಾಠ ಮಾಡಿದರೆ, ತುಟಿಕ್ ಪಿಟಿಕ್ ಎನ್ನದೆ ವಿದ್ಯಾರ್ಥಿಗಳು ಪಾಠವನ್ನು ಕೇಳುತ್ತಾರೆ. ಕೆಲವೊಮ್ಮೆ ಮಾತು ಕೇಳಿದರೆ  ಶಿಕ್ಷೆಯನ್ನು ಕೊಡುವ ಶಿಕ್ಷಕರ ಮುಂದೆ ತಲೆ ತಗ್ಗಿಸಿ ಕೂರುವ ಪ್ರಸಂಗ ಬರುತ್ತದೆ . ನಮ್ಮ ವಿದ್ಯಾರ್ಥಿ ಜೀವನದಲ್ಲಿ ಅಚ್ಚುಮೆಚ್ಚಿನ ಶಿಕ್ಷಕರು ನೆನಪಲಿ ಉಳಿಯುವ ಜೊತೆ ನಮಗೆ ಅತಿ ಹೆಚ್ಚು ಶಿಕ್ಷೆ ಕೊಟ್ಟ ಶಿಕ್ಷಕರು ನೆನಪಿರುತ್ತಾರೆ.

ಇಲ್ಲೊಬ್ಬ ಶಿಕ್ಷಕರು ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು ಪಾಠ ಮಾಡುತ್ತಾರೆ. ಡ್ಯಾನ್ಸ್ ಮಾಡುತ್ತಾ ಪಾಠ ಮಾಡುತ್ತಾರೆ. ಪ್ರತಿ ಪಾಠವನ್ನು ಪದ್ಯ ರೂಪದಲ್ಲಿ ಹಾಡುತ್ತಾರೆ. ಹೌದು ಒಡಿಸ್ಸಾದ ಕೋರಪುತ್ ಜಿಲ್ಲೆಯ ಲ್ಯಾಮ್ ಪುತ್ ಹಿರಿಯ ಪ್ರಾಥಮಿಕ ಶಾಲೆಯ ಉಸ್ತುವಾರಿ ಮುಖ್ಯೋಪಾಧ್ಯಾಯರಾದ ಪ್ರಫುಲಾ ಕುಮಾರ್ ಪಾಥಿ ಎನ್ನುವ ಶಿಕ್ಷಕ ಮಕ್ಕಳೊಂದಿಗೆ ಈ ರೀತಿಯಾಗಿ  ಬೆರೆತು ಪಾಠ ಮಾಡುತ್ತಾರೆ. ಪ್ರತಿದಿನ ಪಾಠ ಮಾಡಲು ಬರುವ ಶಿಕ್ಷಕ ಪಾಥಿ ಪುಸ್ತಕದಲ್ಲಿರುವ ಪಠ್ಯವನ್ನು ಹಾಡಿನ ರೂಪದಲ್ಲಿ ಸರಳವಾಗಿ ಮಕ್ಕಳಿಗೆ ಹೇಳುವುದರ ಜೊತೆ, ಸೊಂಟ ಬಳುಕಿಸಿ, ನೃತ್ಯ ಮಾಡಿ, ನಟನೆ ಮಾಡಿ ಮಕ್ಕಳನ್ನು ನಗಿಸಿ, ತಾವು ನಕ್ಕು ಪಾಠ ಮಾಡುತ್ತಾರೆ.ಇವರು ಪದ್ಯ ರೂಪದಲ್ಲಿ ಗದ್ಯವನ್ನು ಹೇಳುವ ಮಾರ್ಗ ಮಕ್ಕಳಿಗೆ ನೆನಪಿಟ್ಟು ಕೊಳ್ಳುವುದು ಸುಲಭವಾಗುತ್ತದೆ ಎನ್ನುತ್ತಾರೆ ಪ್ರಫುಲ್.

56 ವರ್ಷದ ಕುಮಾರ್ ಪಾಥಿ ಈ ರೀತಿ ವಿಭಿನ್ನವಾಗಿ ಪಾಠವನ್ನು ಹೇಳಲು ಆರಂಭಿಸಿದ್ದು 2008 ರಲ್ಲಿ. ಆಗ ಕುಮಾರ್ ಸರ್ವ ಶಿಕ್ಷಣ ಅಭಿಯಾನದ ಸಂಪನ್ಮೂಲ ವ್ಯಕ್ತಿ ಆಗಿದ್ದರಂತೆ. “ನಾನು ಮಕ್ಕಳಿಗೆ ಹಾಡು ಮತ್ತು ನೃತ್ಯದ ಮೂಲಕ ಸ್ವಲ್ಪ ಹಾಸ್ಯವನ್ನು ಬೆರೆಸಿ ಪಾಠವನ್ನು ಹೇಳುತ್ತೇನೆ. ಇದರಿಂದಾಗಿ ಮಕ್ಕಳು ಹೆಚ್ಚು ಆತ್ಮೀಯರಾಗಿ ಹಾಗೂ ಆಸಕ್ತರಾಗಿ ಪಾಠವನ್ನು ಕೇಳುತ್ತಾರೆ, ನಾನು ಪಾಠಕ್ಕಾಗಿ ತಯಾರಿಯನ್ನು ನಡೆಸಿಕೊಂಡು ಬರುತ್ತೇನೆ,ಮಾನಸಿಕವಾಗಿ ಚುರುಕಾಗಿ ಇರುತ್ತೇನೆ,ಮಧ್ಯಾಹ್ನದ ಊಟದ ನಂತರ ಕೆಲವು ಮಕ್ಕಳು ನಿದ್ದೆಯಲ್ಲಿರುತ್ತಾರೆ. ಆಗ ನಾನು ಮಾಡಿದ ಹಾಗೆ ವಿದ್ಯಾರ್ಥಿಗಳು ಡ್ಯಾನ್ಸ್ ಮಾಡಿದ್ರೆ ನಿದ್ದೆಯಿಂದ ತಪ್ಪಿಸಬಹುದು”  ಎನ್ನುತ್ತಾರೆ ಪ್ರಫುಲಾ ಕುಮಾರ್.

ಪ್ರಫುಲಾ ಕುಮಾರ್ ಪಾಥಿ ತಮ್ಮ ಪಠ್ಯ ಶೈಲಿಯನ್ನು ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ. ಈಗ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಎಲ್ಲೆಡಯೂ ಸರಳ ಮತ್ತು ಆತ್ಮೀಯರಾಗಿ ಮಕ್ಕಳೊಂದಿಗೆ ಬೆರೆಯುವ ಪ್ರಫುಲಾ ಕುಮಾರ್ ಪಾಥಿಯ ಪಠ್ಯ ಶೈಲಿಯ ಕುರಿತು ಜನ ಮೆಚ್ಚುಗೆಯನ್ನು ಕೊಡುತ್ತಿದ್ದಾರೆ. ಅಂದ ಹಾಗೆ ಪಾಥಿಯನ್ನು ಒಡಿಸ್ಸಾದಲ್ಲಿ “ಡ್ಯಾನ್ಸಿಂಗ್ ಟೀಚರ್ ಆಫ್ ಕೋರಪತ್ ” ಎಂದು ಗುರುತಿಸುತ್ತಾರೆ.

 

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.