1962ರಲ್ಲೇ ಚೀನಾ ಭೂಮಿ ಕಬಳಿಸಿತ್ತು; ರಾಹುಲ್ ಗಾಂಧಿ ಆರೋಪಕ್ಕೆ ಜೈಶಂಕರ್ ತಿರುಗೇಟು
Team Udayavani, Jan 29, 2023, 8:26 AM IST
ಹೊಸದಿಲ್ಲಿ: ಗಡಿ ಭಾಗದಲ್ಲಿ ಚೀನಾಗೆ ಪ್ರಧಾನಿ ಮೋದಿಯವರು ಭೂಮಿ ಬಿಟ್ಟುಕೊಟ್ಟಿದ್ದಾರೆಂಬ ರಾಹುಲ್ ಗಾಂಧಿ ಮಾತಿಗೆ ತಿರುಗೇಟು ನೀಡಿರುವ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಜೈಶಂಕರ್, “ ಆ ಭೂಮಿಯನ್ನು 1962ರಲ್ಲೇ ಚೀನಾ ಕಬಳಿಸಿತ್ತು” ಎಂದಿದ್ದಾರೆ.
“ಕೆಲವರು ಕೇವಲ ರಾಜಕೀಯ ಕಾರಣಗಳಿಗೋಸ್ಕರ ಚೀನಾ ವಿಚಾರದಲ್ಲಿ ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಚೀನಾ ಗಡಿ ಸಮಸ್ಯೆ ಇತ್ತೀಚೆಗೆ ಆರಂಭವಾಗಿದ್ದು ಎಂಬಂತೆ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಜೈಶಂಕರ್ ಹೇಳಿದರು.
“ಪ್ರಧಾನಿ ನರೇಂದ್ರ ಮೋದಿ ಅವರು 100 ಚದರ ಕಿಲೋಮೀಟರ್ ಭಾರತೀಯ ಭೂಪ್ರದೇಶವನ್ನು ಚೀನಾಕ್ಕೆ ಹೋರಾಟವಿಲ್ಲದೆ ನೀಡಿದ್ದಾರೆ ಮತ್ತು ಅದನ್ನು ಹೇಗೆ ಹಿಂಪಡೆಯುತ್ತಾರೆ ಎಂದು ಕಳೆದ ವರ್ಷ ರಾಹುಲ್ ಗಾಂಧಿ ಸರ್ಕಾರವನ್ನು ಕೇಳಿದರು. ಅಲ್ಲದೆ ಇತ್ತೀಚೆಗೆ ನಟ – ರಾಜಕಾರಣಿ ಕಮಲ್ ಹಾಸನ್ ಅವರೊಂದಿಗಿನ ಸಂವಾದದಲ್ಲಿಯೂ ರಾಹುಲ್ ಮತ್ತೊಮ್ಮೆ “ಚೀನಾವು 2,000 ಚದರ ಮೀಟರ್ ತೆಗೆದುಕೊಂಡಿದೆ, ಆದರೆ ನಮ್ಮ ಪ್ರಧಾನಿ ಮೋದಿ ಏನನ್ನೂ ಹೇಳಲಿಲ್ಲ” ಎಂದು ಹೇಳಿದ್ದಾರೆ.
ಇದನ್ನೂ ಓದಿ:ಅಂಡರ್-19 ವನಿತಾ ಟಿ20 ವಿಶ್ವಕಪ್ ಫೈನಲ್: ಗೆದ್ದು ಬನ್ನಿ ಹುಡುಗಿಯರೇ…
ಇದಕ್ಕೆ ಜೈಶಂಕರ್ ತಿರುಗೇಟು ನೀಡಿದ್ದು, “ಕೆಲವೊಮ್ಮೆ ಅವರು 1962ರಲ್ಲಿ ಚೀನಾ ಆಕ್ರಮಿಸಿದ ಜಾಗದ ಬಗ್ಗೆ ಮಾತನಾಡುತ್ತಾರೆ. ಆದರೆ ಅವರು ಸತ್ಯ ಹೇಳುವುದಿಲ್ಲ. ಆ ಘಟನೆ ನಿನ್ನೆ ಆದಂತೆ ಭಾವನೆ ಬರುವಂತೆ ಅವರು ಮಾತನಾಡುತ್ತಾರೆ” ಎಂದಿದ್ದಾರೆ.
ಕೆಲವೊಮ್ಮೆ ಅಂತಹ ಜನರು (ರಾಜಕೀಯ ಪಕ್ಷಗಳ ನಾಯಕರು) ಉದ್ದೇಶಪೂರ್ವಕವಾಗಿ ಚೀನಾದ ಬಗ್ಗೆ ತಪ್ಪು ಸುದ್ದಿ ಅಥವಾ ಮಾಹಿತಿಯನ್ನು ಹರಡುತ್ತಾರೆ ಎಂದು ಜೈಶಂಕರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ