ಹಿಂದೆಯೇ ಎಚ್ಚರಿಸಿತ್ತು ಆರ್‌ಬಿಐ !


Team Udayavani, Feb 21, 2018, 10:32 AM IST

2587411122.jpg

ಹೊಸದಿಲ್ಲಿ: ದೇಶವನ್ನೇ ಬೆಚ್ಚಿಬೀಳಿಸಿರುವ 11,400 ಕೋಟಿ ರೂ.ಗಳ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ಹಗರಣ ಬೆಳಕಿಗೆ ಬರುವ ಒಂದು ವರ್ಷ ಮುಂಚೆಯೇ ಬ್ಯಾಂಕುಗಳಿಗೆ 3 ಬಾರಿ ಭಾರತೀಯ ರಿಸರ್ವ್‌ ಬ್ಯಾಂಕ್‌(ಆರ್‌ಬಿಐ) ಎಚ್ಚರಿಕೆಯ ಸಂದೇಶ ರವಾನಿಸಿತ್ತು ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ.

ವ್ಯವಸ್ಥೆಯಲ್ಲಿರುವ ಲೋಪಗಳ ಬಗ್ಗೆ ಎಚ್ಚರಿಸಿ ಆರ್‌ಬಿಐ 2016ರ ಆಗಸ್ಟ್‌ನಲ್ಲಿ ಬ್ಯಾಂಕುಗಳಿಗೆ ಕಳುಹಿಸಿದ್ದ ಸುತ್ತೋಲೆಯ ಪ್ರತಿಯು ಮಾಧ್ಯಮಗಳಿಗೆ ಲಭ್ಯವಾಗಿದ್ದು, ಅನಧಿಕೃತವಾಗಿ ಹಣಕಾಸು ವರ್ಗಾವಣೆಗೆ ಸ್ವಿಫ್ಟ್ ಇಂಟರ್‌ಬ್ಯಾಂಕ್‌ ನೆಟ್‌ವರ್ಕ್‌ ಅನ್ನು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆಯಿದ್ದು, ಈ ಬಗ್ಗೆ ಎಚ್ಚರದಿಂದಿರಿ ಎಂದು ಸುತ್ತೋಲೆಯಲ್ಲಿ ಎಚ್ಚರಿಸಲಾಗಿತ್ತು. ಎಲ್ಲ ಬ್ಯಾಂಕುಗಳೂ ಸೈಬರ್‌ ಭದ್ರತಾ ನಿಯಮವನ್ನು ಅಳವಡಿಸಿಕೊಳ್ಳಬೇಕು ಎಂದೂ, ಸ್ವಿಫ್ಟ್ (ಸೊಸೈಟಿ ಫಾರ್‌ ವರ್ಲ್xವೈಡ್‌ ಇಂಟರ್‌ಬ್ಯಾಂಕ್‌ ಫೈನಾನ್ಶಿ ಯಲ್‌ ಟೆಲಿಕಮ್ಯೂನಿಕೇಷನ್ಸ್‌) ಮೂಲಸೌಕರ್ಯ ವನ್ನು ಸಮಗ್ರವಾಗಿ ಆಡಿಟ್‌ ಮಾಡುವಂತೆಯೂ ಸೂಚಿಸಲಾಗಿತ್ತು. ಪಿಎನ್‌ಬಿ ಹಗರಣಕ್ಕೆ ಆರ್‌ಬಿಐನ ಮೇಲ್ವಿಚಾರಣಾ ವೈಫ‌ಲ್ಯವೇ ಕಾರಣ ಎಂದು ಕೇಂದ್ರ ಸರಕಾರ ಆರೋಪ ಮಾಡಿದ ಬೆನ್ನಲ್ಲೇ ಈ ಸುತ್ತೋಲೆ ಬಹಿರಂಗವಾಗಿದೆ.

ಮತ್ತಷ್ಟು ಬಂಧನ: ಈ ನಡುವೆ, ನೀರವ್‌ ಮತ್ತು ಚೋಕ್ಸಿ ಕಂಪೆನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿಪುಲ್‌ ಅಂಬಾನಿ ಮತ್ತು ಇತರೆ ನಾಲ್ವರು ಅಧಿಕಾರಿಗಳನ್ನು ಮಂಗಳವಾರ ಸಿಬಿಐ ಬಂಧಿಸಿದೆ. ಪಿಎನ್‌ಬಿ ಕಾರ್ಯಕಾರಿ ನಿರ್ದೇಶಕ ಮತ್ತು 9 ಅಧಿಕಾರಿಗಳನ್ನು ಸಿಬಿಐ ವಿಚಾರಣೆಗೆ ಒಳಪಡಿಸಿದೆ. ಜತೆಗೆ, ಹೊಸ ಕಪ್ಪುಹಣ ನಿಗ್ರಹ ಕಾನೂನಿನ ಅನ್ವಯ ನೀರವ್‌ ವಿರುದ್ಧ ಐಟಿ ಇಲಾಖೆ ಆರೋಪ ದಾಖಲಿಸಿದೆ.

ರೇಟಿಂಗ್ಸ್‌ ಇಳಿಕೆ:  ಭಾರೀ ಹಗರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ರೇಟಿಂಗ್‌ ಏಜೆನ್ಸಿಗಳಾದ ಮೂಡೀಸ್‌ ಮತ್ತು ಫಿಚ್‌ ಮಂಗಳವಾರ ಪಿಎನ್‌ಬಿ ರೇಟಿಂಗ್ಸ್‌ ಅನ್ನು ಇಳಿಕೆ ಮಾಡಿದೆ.

ಇಂದು ಪಿಐಎಲ್‌ ವಿಚಾರಣೆ: ಪಿಎನ್‌ಬಿ ಹಗರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಬೇಕು, ನೀರವ್‌ ಮೋದಿಯನ್ನು 2 ತಿಂಗಳೊಳಗೆ ಭಾರತಕ್ಕೆ ವಾಪಸ್‌ ಕರೆತರಬೇಕು ಮತ್ತು ದೊಡ್ಡ ಮಟ್ಟದ ಸಾಲ ನೀಡಲು ಹೊಸ ಮಾರ್ಗಸೂಚಿ ರಚಿಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಒಪ್ಪಿದೆ. ಬುಧವಾರ ಅರ್ಜಿಯ ವಿಚಾರಣೆ ನಡೆಯಲಿದೆ. 

ಇದು 2ಜಿ, ಬೋಫೋರ್ಸ್‌ನಂಥ ಕೇಸು
ಪಿಎನ್‌ಬಿಗೆ ನೀರವ್‌ ಬರೆದ ಪತ್ರ ಬಹಿರಂಗವಾದ ಬೆನ್ನಲ್ಲೇ ಅವರ ಪರ ವಕೀಲ ವಿಜಯ್‌ ಅಗರ್ವಾಲ್‌ ಮಾಧ್ಯಮಗಳೊಂದಿಗೆ ಮಂಗಳವಾರ ಮಾತನಾಡಿದ್ದಾರೆ. “ನೀರವ್‌ ಮೋದಿ ಓಡಿಹೋದರು ಎಂದು ಎಲ್ಲರೂ ಹೇಳುತ್ತಿದ್ದಾರೆ. 5 ಸಾವಿರ ಕೋಟಿ ರೂ.ಗಳ ಆಸ್ತಿಯನ್ನು ಬಿಟ್ಟು ಯಾರಾದರೂ ಓಡಿ ಹೋಗುತ್ತಾರೆಯೇ? ನಾನು ಈ ಕೇಸನ್ನು ಸರಿಯಾಗಿ ಅಧ್ಯಯನ ಮಾಡಿದ್ದೇನೆ. ಇದು 2ಜಿ ಮತ್ತು ಬೋಫೋರ್ಸ್‌ ಹಗರಣದಂತೆಯೇ ಆಗಲಿದೆ. ಸಿಬಿಐ ಆರೋಪಗಳೆಲ್ಲ ಸುಳ್ಳು. ಮಾಧ್ಯಮಗಳಲ್ಲಿ ಮಾತ್ರವೇ ತನಿಖಾ ಸಂಸ್ಥೆಗಳು ಆರೋಪ ಮಾಡುತ್ತಿವೆ. ಆದರೆ, ಅವರಲ್ಲಿ ಒಂದೇ ಒಂದು ಸಾಕ್ಷ್ಯವೂ ಇಲ್ಲ. ಹೀಗಾಗಿ ನೀರವ್‌ ದೋಷಿ ಎಂದು ಸಾಬೀತಾಗುವುದಿಲ್ಲ,’ ಎಂದಿದ್ದಾರೆ.

ಗೀತಾಂಜಲಿಗೆ ಬೀಗ
ಹಗರಣ ಹಿನ್ನೆಲೆಯಲ್ಲಿ ಚೋಕ್ಸಿ ಒಡೆತನದ ಗೀತಾಂಜಲಿ ಜೆಮ್ಸ್‌ ಮಳಿಗೆ ಶಾಶ್ವತವಾಗಿ ಮುಚ್ಚುವ ಸುಳಿವು ಸಿಕ್ಕಿದೆ. ಮಂಗಳವಾರ ಸಂಸ್ಥೆಯು ತನ್ನ ಸಿಬಂದಿಗೆ ಈ ಕುರಿತು ಸೂಚನೆ ನೀಡಿದ್ದು, ಎಲ್ಲರೂ ತಮ್ಮ ಬಿಡುಗಡೆ ಪತ್ರ(ರಿಲೀವಿಂಗ್‌ ಲೆಟರ್‌)ವನ್ನು ಪಡೆದುಕೊಳ್ಳುವಂತೆ ಸೂಚಿಸಿದೆ ಎಂದು ಹೇಳಲಾಗಿದೆ.

14 ಬ್ಯಾಂಕ್‌ ಖಾತೆ ಜಪ್ತಿ
ಸಿಬಿಐ ಮತ್ತು ಇ.ಡಿ. ಬಳಿಕ ಇದೀಗ ಆದಾಯ ತೆರಿಗೆ ಇಲಾಖೆಯೂ ರೊಟೋಮ್ಯಾಕ್‌ ಗ್ರೂಪ್‌ ವಿರುದ್ಧ ಕ್ರಮ ಕೈಗೊಳ್ಳಲು ಆರಂಭಿಸಿದ್ದು, ಕಂಪೆನಿಗೆ ಸೇರಿದ 14 ಬ್ಯಾಂಕ್‌ ಖಾತೆಗಳನ್ನು ಜಪ್ತಿ ಮಾಡಿದೆ. ಉ.ಪ್ರದೇಶದ ಬೇರೆ ಬೇರೆ ಬ್ಯಾಂಕ್‌ಗಳ ಶಾಖೆಗಳಲ್ಲಿದ್ದ ಖಾತೆಗಳಿವು. ಏತನ್ಮಧ್ಯೆ, ಮೆಹುಲ್‌ ಚೋಕ್ಸಿ ಮತ್ತು ಗೀತಾಂಜಲಿ ಗ್ರೂಪ್‌ಗೆ ಸೇರಿದ 20 ಕಡೆ ಮಂಗಳವಾರ ಐಟಿ ಇಲಾಖೆ ದಾಳಿ ಮಾಡಿ, ಶೋಧ ಕಾರ್ಯ ನಡೆಸಿದೆ. 

ಸಿಂಘವಿ ಪತ್ನಿಗೆ ಐಟಿ ನೋಟಿಸ್‌
ನೀರವ್‌ ಮೋದಿ ಅವರ ಮಳಿಗೆಯಲ್ಲಿ 6 ಕೋಟಿ ರೂ.ಗಳ ಆಭರಣ ಖರೀದಿಗೆ ಸಂಬಂಧಿಸಿ ವಿವರಣೆ ನೀಡುವಂತೆ ಸೂಚಿಸಿ ಕಾಂಗ್ರೆಸ್‌ ನಾಯಕ ಅಭಿಷೇಕ್‌ ಸಿಂಘವಿ ಅವರ ಪತ್ನಿಗೆ ಐಟಿ ಇಲಾಖೆ ಮಂಗಳವಾರ ನೋಟಿಸ್‌ ಜಾರಿ ಮಾಡಿದೆ. ಕೆಲವು ವರ್ಷಗಳ ಹಿಂದೆ ಖರೀದಿಸಿದ ಈ ಆಭರಣಗಳಿಗೆ ಎಷ್ಟು ಮೊತ್ತವನ್ನು ನಗದು ರೂಪದಲ್ಲಿ ಮತ್ತೆ ಎಷ್ಟು ಮೊತ್ತವನ್ನು ಚೆಕ್‌ ರೂಪದಲ್ಲಿ ನೀಡಲಾಗಿತ್ತು ಎಂಬ ಬಗ್ಗೆ ಮಾಹಿತಿ ನೀಡುವಂತೆ ಅನಿತಾ ಸಿಂ Ì ಅವರಿಗೆ ಸೂಚಿಸಲಾಗಿದೆ. ಅನಿತಾ ಅವರು 1.5 ಕೋಟಿ ರೂ.ಗಳನ್ನು ಚೆಕ್‌ ಮೂಲಕವೂ, 4.8 ಕೋಟಿ ರೂ.ಗಳನ್ನು ನಗದು ರೂಪದಲ್ಲಿ ಪಾವತಿಸಿದ್ದಾರೆ ಎಂದು ಐಟಿ ಇಲಾಖೆ ಶಂಕಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಂ Ì, ನಾನು ವಿಪಕ್ಷಕ್ಕೆ ಸೇರಿರುವ ಕಾರಣ ಉದ್ದೇಶಪೂರ್ವಕವಾಗಿ ದೌರ್ಜನ್ಯ ಎಸಗಲು ಇಂಥ ಕೃತ್ಯ ಎಸಗಲಾಗುತ್ತಿದೆ ಎಂದು ಆರೋಪಿಸಿದ್ದಾರೆ. 

ಬ್ಯಾಂಕಿಂಗ್‌ ವ್ಯವಸ್ಥೆಗೆ ಮೋಸ ಮಾಡುವವರನ್ನು ಸರಕಾರ ಸುಮ್ಮನೆ ಬಿಡುವುದಿಲ್ಲ. ಅವರನ್ನು ಬೆನ್ನಟ್ಟಿ ಹಿಡಿಯಲಿದೆ. ಅಪರಾಧಿಗಳನ್ನು ಪತ್ತೆಹಚ್ಚುವಲ್ಲಿ ವಿಫ‌ಲವಾದ ಬ್ಯಾಂಕ್‌ ಆಡಳಿತ ಮಂಡಳಿಗಳು ತಮ್ಮ ಕರ್ತವ್ಯವನ್ನು ಮರೆತಂತಿದೆ. ಇಂಥ ವಂಚನೆ ನಡೆಯುತ್ತಿದ್ದಾಗ ಆಡಿಟರ್‌ಗಳು ಏನು ಮಾಡುತ್ತಿದ್ದರು?
 ಅರುಣ್‌ ಜೇಟ್ಲಿ , ವಿತ್ತ ಸಚಿವ

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.