ಪಿಓಕೆಯಲ್ಲಿ ಭೂಕಂಪ: ಮೃತರ ಸಂಖ್ಯೆ 26ಕ್ಕೆ ಏರಿಕೆ, 300ಕ್ಕೂ ಅಧಿಕ ಮಂದಿಗೆ ಗಾಯ
Team Udayavani, Sep 25, 2019, 8:30 AM IST
ಇಸ್ಲಾಮಾಬಾದ್: ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ಥಾನದ ಹಲವು ಭಾಗಗಳಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ 26 ಜನರು ಬಲಿಯಾಗಿ 300 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನಡೆದಿದೆ.
ಮಂಗಳವಾರ ಸಂಜೆ ಸಂಭವಿಸಿದ ಭೂಕಂಪ ರಿಕ್ಟರ್ ಮಾಪಕದಲ್ಲಿ 5.8 ರ ತೀವ್ರತೆ ದಾಖಲಾಗಿತ್ತು. ಭೂಕಂಪದ ಕೇಂದ್ರ ಬಿಂದು ಶ್ರೀನಗರದಿಂದ 140 ಕಿಲೋಮೀಟರ್ ದೂರದಲ್ಲಿತ್ತು ಎಂದು ಎಂದು ಅಮೇರಿಕಾದ ಜಿಯಾಲಾಜಿಕಲ್ ಸರ್ವೆ ತಿಳಿಸಿದೆ.
ಭೂಕಂಪದ ತೀವ್ರತೆಯಿಂದ ಉತ್ತರ ಭಾರತದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ದಿಲ್ಲಿ-ಎನ್ ಸಿಆರ್ ಪ್ರದೇಶ, ಜಮ್ಮು-ಕಾಶ್ಮೀರ, ಪಂಜಾಬ್, ಹರ್ಯಾಣ, ಹಿಮಾಚಲ ಪ್ರದೇಶ ಮತ್ತು ರಾಜಸ್ಥಾನದಲ್ಲೂ ಭೂ ಕಂಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭೂಕಂಪದ ಪರಿಣಾಮವಾಗಿ ಅನೇಕ ಮನೆಗಳು ಕುಸಿದು ಬಿದ್ದಿದ್ದು, ರಸ್ತೆಗಳು ಬಿರುಕು ಬಿಟ್ಟಿವೆ. ಎಲ್ಲಾ ಆಸ್ಪತ್ರೆಗಳಲ್ಲೂ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ