ಹಿಮಾಚಲ ಪ್ರದೇಶದಲ್ಲಿ ಭೂಕಂಪನ: ರಿಕ್ಟರ್ ಮಾಪನದಲ್ಲಿ 4.1 ತೀವ್ರತೆ ದಾಖಲು
Team Udayavani, Nov 17, 2022, 8:27 AM IST
ಹಿಮಾಚಲ ಪ್ರದೇಶ : ಹಿಮಾಚಲ ಪ್ರದೇಶದ ಮಂಡಿಯಲ್ಲಿ 4.1 ತೀವ್ರತೆಯ ಭೂಕಂಪನದ ಅನುಭವವಾಗಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ ಕೇಂದ್ರ ಬಿಂದುವು ಮಂಡಿಯಿಂದ ಕೆಲವು ಕಿಲೋಮೀಟರ್ಗಳಷ್ಟು ದೂರದಲ್ಲಿರುವ ಜೋಗಿಂದರ್ನಗರದಲ್ಲಿ ಐದು ಕಿಲೋಮೀಟರ್ ಭೂಮಿಯ ಆಳದಲ್ಲಿದೆ ಸಂಭವಿಸಿದೆ ಎಂದು ಹೇಳಲಾಗಿದೆ.
ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.1ರಷ್ಟಿದ್ದು, ಪಂಜಾಬ್ ವರೆಗೂ ಭೂಕಂಪನದ ಅನುಭವವಾಗಿದೆ ಎನ್ನಲಾಗಿದೆ.
ಕುಲು, ಭುಂತರ್ ಮತ್ತು ಮನಾಲಿಯಲ್ಲಿಯೂ ಕಂಪನದ ಅನುಭವವಾಗಿದೆ ಎಂದು ಹೇಳಲಾಗಿದೆ. ರಾತ್ರಿ 9.32ಕ್ಕೆ ಭೂಕಂಪನದ ಅನುಭವವಾಗಿದ್ದು, ಮೂರರಿಂದ ಐದು ಸೆಕೆಂಡ್ಗಳ ಕಾಲ ಭೂಕಂಪನ ಸಂಭವಿಸಿದೆ. ಅನೇಕ ಜನರು ಗಾಬರಿಯಿಂದ ಮನೆಯಿಂದ ಹೊರಬಂದು ಬಯಲು ಪ್ರದೇಶಗಳಿಗೆ ಓಡಿ ಬಂದಿದ್ದಾರೆ. ಆದರೆ, ಭೂಕಂಪದಿಂದ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಡಿಸಿ ಮಂಡಿ ಅರಿಂದಮ್ ಚೌಧರಿ ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ದೇಶದ ಹಲವು ಭಾಗಗಳಲ್ಲಿ ಭೂಕಂಪನದ ಅನುಭವವಾಗಿದೆ. ಯುಪಿ, ಉತ್ತರಾಖಂಡ, ದೆಹಲಿ-ಎನ್ಸಿಆರ್ ಮತ್ತು ಮಧ್ಯಪ್ರದೇಶದಲ್ಲಿ ಭೂಮಿ ಕಂಪಿಸಿತು. ನವೆಂಬರ್ 12 ರ ಶನಿವಾರದಂದು ದೆಹಲಿ-ಎನ್ಸಿಆರ್ನಲ್ಲಿ ಭೂಕಂಪ ಸಂಭವಿಸಿದೆ. ಉತ್ತರಾಖಂಡದಲ್ಲೂ ಇದರ ಕಂಪನದ ಅನುಭವವಾಗಿದೆ.
An earthquake of magnitude 4.1 occurred 27km North-North-West of Mandi, Himachal Pradesh, at around 9.32pm, today. The depth of the earthquake was 5 km below the ground: National Center for Seismology pic.twitter.com/DPYFQuHYuM
ANI (@ANI) November 16, 2022
ಇದನ್ನೂ ಓದಿ : ಇರಾನ್ನ ಬೀಚ್ ಮಾರ್ಕೆಟ್ನಲ್ಲಿ ಗುಂಡಿನ ದಾಳಿ, 5 ಸಾವು, ಹಲವರಿಗೆ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!
ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ
ರಾಘವ್ ಛಡ್ಡಾ-ಪರಿಣಿತಿ ಛೋಪ್ರಾ ಶೀಘ್ರವೇ ಎಂಗೇಜ್
ಉದ್ಯೋಗ ಖಾತ್ರಿ ಕೂಲಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ನಿರ್ಧಾರ
ರಾಷ್ಟ್ರೀಯ ಸ್ಮಾರಕವಾಗಿ ರಾಮ ಸೇತು: ಸುಪ್ರೀಂಗೆ ಮತ್ತೊಂದು ಅರ್ಜಿ
MUST WATCH
ಹೊಸ ಸೇರ್ಪಡೆ
“ನೀವು ಯಾರನ್ನಾದರೂ ಡೇಟ್ ಮಾಡಿ”.. ಸಮಂತಾಗೆ ಅಭಿಮಾನಿಯ ಮನವಿ; ನಟಿಯ ಪ್ರತಿಕ್ರಿಯೆ ವೈರಲ್
ಚಿಕ್ಕಮಗಳೂರು: ಕಾರಿನಲ್ಲಿ ಮದ್ಯದ ಬಾಟಲ್, ಸಿ.ಟಿ.ರವಿ ಕ್ಯಾಲೆಂಡರ್, ಲಾಂಗ್ ಪತ್ತೆ
4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!
ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ
ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ