ಬಂಗಾಳ ಕೊಲ್ಲಿಯಲ್ಲಿ ಭೂಕಂಪ; 5.1 ತೀವ್ರತೆ ದಾಖಲು
Team Udayavani, Aug 24, 2021, 9:45 PM IST
ಸಾಂದರ್ಭಿಕ ಚಿತ್ರ.
ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ಮಂಗಳವಾರ ಮಧ್ಯಾಹ್ನ ಭೂಕಂಪನ ಉಂಟಾಗಿದ್ದು, ತಮಿಳುನಾಡು ಮತ್ತು ಆಂಧ್ರಪ್ರದೇಶದ ಕೆಲ ನಗರಗಳಲ್ಲಿ ಅದರ ಅನುಭವ ಉಂಟಾಗಿದೆ.
ಚೆನ್ನೈ, ಕಾಕಿನಾಡ ಸೇರಿ ಅನೇಕ ನಗರಗಳಲ್ಲಿ ಭೂಮಿ ಕಂಪಿಸಿದೆ ಎಂದು ಹೇಳಲಾಗಿದೆ.
ಚೆನ್ನೈನಿಂದ 320 ಕಿ.ಮೀ ದೂರ ಹಾಗೂ ಆಂಧ್ರದ ಕಾಕಿನಾಡದಿಂದ 296 ಕಿಮೀ ದೂರದಲ್ಲಿ ಸಮುದ್ರ ಮಧ್ಯದಲ್ಲಿ 10 ಕಿ.ಮೀ ಆಳದಲ್ಲಿ ಭೂಮಿ ಕಂಪಿಸಿದೆ. ಮಧ್ಯಾಹ್ನ 12.35ರ ಸಮಯಕ್ಕೆ 5.1 ತೀವ್ರತೆಯಲ್ಲಿ ಕಂಪನ ಉಂಟಾಗಿದೆ.
ಇದನ್ನೂ ಓದಿ:100 ಬಿಲಿಯನ್ ಡಾಲರ್ ಬಂಡವಾಳ ಗಳಿಸಿದ ಇನ್ಫೋಸಿಸ್
ಅದರ ಪರಿಣಾಮ ಕಾಕಿನಾಡ, ರಜೋಲ್, ಪಾಲಕೊಲ್ಲು, ನರಸಪುರಂನ ಮನೆಗಳ ಸೀಲಿಂಗ್ ಫ್ಯಾನ್ ಅಲುಗಾಡಿದೆ. ವಸ್ತುಗಳು ಕೆಳಗೆ ಬಿದ್ದಿವೆ ಎಂದು ಸಾರ್ವಜನಿಕರು ಹೇಳಿದ್ದಾರೆ. ಈ ಅನುಭವ ಚೆನ್ನೈನಲ್ಲೂ ಆಗಿದೆ.
ಲಘುವಾಗಿ ಭೂಮಿ ಕಂಪಿಸಿದ್ದು, ಹೆಚ್ಚೇನೂ ಅಪಾಯ ಸಂಭವಿಸಿದ ವರದಿಯಾಗಿಲ್ಲ. ಹಾಗೆಯೇ ಈವರೆಗೂ ಸುನಾಮಿ ಮುನ್ನೆಚ್ಚರಿಕೆ ನೀಡಿಲ್ಲ. ಚೆನ್ನೈನಲ್ಲಿ ಸಮುದ್ರ ತೀರದ ಸ್ಥಳಗಳು, ತಿರುವನ್ಮಿಯೂರ್, ಅಲ್ವಾರ್ಪೇಟ್ ಮುಂತಾದೆಡೆ ಭೂಮಿ ನಡುಗಿದ ಅನುಭವವಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅನೇಕರು ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ