ಮಿಜೋರಾಂನಲ್ಲಿ ಕಂಪಿಸಿದ ಭೂಮಿ
Team Udayavani, Jun 23, 2020, 6:47 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಐಜ್ವಾಲ್/ಹೊಸದಿಲ್ಲಿ: ಈಶಾನ್ಯ ರಾಜ್ಯ ಮಿಜೋರಾಂನಲ್ಲಿ ಸೋಮವಾರ ಬೆಳಗ್ಗಿನ ಜಾವ ಭೂಕಂಪ ಸಂಭವಿಸಿದೆ.
ರಿಕ್ಟರ್ಮಾಪಕದಲ್ಲಿ ಅದರ ಪ್ರಮಾಣ 5.3ರಷ್ಟು ದಾಖಲಾಗಿದೆ.
ಜೀವ ಹಾನಿ ಉಂಟಾಗದೇ ಇದ್ದರೂ, ರಸ್ತೆ, ಮನೆಗಳು ಬಿರುಕುಬಿಟ್ಟಿವೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಮುಖ್ಯ ಮಂತ್ರಿ ಝೊರಾ ಮ್ತಾಂಗಾ ಜತೆ ಮಾತುಕತೆ ನಡೆಸಿ, ಅಗತ್ಯ ನೆರವು ನೀಡುವುದಾಗಿ ತಿಳಿಸಿದ್ದಾರೆ.
ಸೋಮವಾರ ಬೆಳಗ್ಗೆ 4.10ರ ಸುಮಾರಿಗೆ ಭೂಕಂಪ ಉಂಟಾಗಿದೆ. ಭಾರತ ಮತ್ತು ಮ್ಯಾನ್ಮಾರ್ ಗಡಿಭಾಗದ ಜಿಲ್ಲೆ ಛಂಪೈನ ಝೊಖಾವ್ತಾರ್ನಲ್ಲಿ ಕಂಪನದ ಕೇಂದ್ರ ಬಿಂದು ದಾಖಲಾಗಿದೆ ಎಂದು ಕೇಂದ್ರ ಭೂ ವಿಜ್ಞಾನ ಸಚಿವಾಲಯದ ರಾಷ್ಟ್ರೀಯ ಭೂಕಂಪಶಾಸ್ತ್ರ ಮಾಪನ ಸಂಸ್ಥೆ ತಿಳಿಸಿದೆ.
ರಾಜಧಾನಿ ಐಜ್ವಾಲ್, ಛಂಪೈ ಸೇರಿದಂತೆ ಹಲವೆಡೆ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ. ಇದರಿಂದಾಗಿ ರಾಜ್ಯದ ಹಲವು ಭಾಗಗಳಲ್ಲಿ ಮನೆಗಳು, ರಸ್ತೆಗಳು ಬಿರುಕು ಬಿಟ್ಟಿವೆ ಎಂದು ರಾಜ್ಯ ಸರಕಾರ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಮುಖ್ಯಮಂತ್ರಿ ಝೊರಾಮ್ತಾಂಗ ಜತೆಗೆ ಮಾತುಕತೆ ನಡೆಸಿ ಕೇಂದ್ರ ಸರಕಾರದಿಂದ ಅಗತ್ಯವಿರುವ ನೆರವು ನೀಡುವ ವಾಗ್ಧಾನ ಮಾಡಿದ್ದಾರೆ. ನಾಗಾಲ್ಯಾಂಡ್ನಲ್ಲಿಯೂ ರಿಕ್ಟರ್ಮಾಪಕದಲ್ಲಿ 2.8ರಷ್ಟು ದಾಖಲಾ ಗಿರುವ ಅಲ್ಪ ಪ್ರಮಾಣ ಭೂಕಂಪ ಸಂಭವಿಸಿದೆ.
ಅದರ ಕೇಂದ್ರ ಸ್ಥಾನ ಕೊಹಿಮಾದಿಂದ 44 ಕಿಮೀ ದೂರದಲ್ಲಿ ದಾಖಲಾಗಿದೆ. ರವಿವಾರ ಮೇಘಾಲಯ ಮತ್ತು ಮಣಿಪುರಗಳಲ್ಲಿ ರಿಕ್ಟರ್ ಮಾಪಕದಲ್ಲಿ 5.1ರಷ್ಟು ದಾಖಲಾಗಿರುವ ಭೂಕಂಪ ಸಂಭವಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ