ಕೋವಿಡ್ 19 ಭೀತಿ: ರಾಜ್ಯಸಭಾ ಚುನಾವಣೆ ಮುಂದೂಡಿಕೆ, 37 ಸ್ಥಾನಕ್ಕೆ ಅವಿರೋಧ ಆಯ್ಕೆ
ದೇಶದ 7 ರಾಜ್ಯಗಳಲ್ಲಿ ಒಟ್ಟು 18 ಸ್ಥಾನಗಳಿಗೆ ಚುನಾವಣೆ ನಡೆಯಬೇಕಾಗಿದೆ.
Team Udayavani, Mar 24, 2020, 5:04 PM IST
ನವದೆಹಲಿ: ಕೋವಿಡ್ 19 ಮಹಾಮಾರಿ ಭೀತಿಯ ಹಿನ್ನೆಲೆಯಲ್ಲಿ ಮಾರ್ಚ್ 26ರಂದು ನಿಗದಿಯಾಗಿದ್ದ ರಾಜ್ಯಸಭಾ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಅನಿರ್ದಿಷ್ಟಾವಧಿಗೆ ಮುಂದೂಡಿರುವುದಾಗಿ ಘೋಷಿಸಿದೆ.
ಫೆ.25ರಂದು ಒಟ್ಟು 55 ರಾಜ್ಯಸಭಾ ಸ್ಥಾನಗಳಿಗೆ ಮಾ.26ರಂದು ಚುನಾವಣೆ ನಡೆಸುವುದಾಗಿ ಘೋಷಿಸಿದ್ದು, ಅಂದು ಸಂಜೆಯೇ ಫಲಿತಾಂಶ ಪ್ರಕಟಿಸುವುದಾಗಿ ತಿಳಿಸಿತ್ತು.
ಮಾರ್ಚ್ 18ರಂದು ನಾಮಪತ್ರ ಹಿಂಪಡೆಯಲು ನಿಗದಿಪಡಿಸಿದ್ದ ಕೊನೆಯ ದಿನಾಂಕದ ನಂತರ ರಾಜ್ಯಸಭೆಯ 37 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿತ್ತು. ಆ ನಿಟ್ಟಿನಲ್ಲಿ ಕೇವಲ 18 ಸ್ಥಾನಗಳಿಗಷ್ಟೇ ಚುನಾವಣೆ ನಡೆಯಲು ಬಾಕಿ ಉಳಿದಂತಾಗಿದೆ ಎಂದು ವರದಿ ವಿವರಿಸಿದೆ.
ದೇಶದ 7 ರಾಜ್ಯಗಳಲ್ಲಿ ಒಟ್ಟು 18 ಸ್ಥಾನಗಳಿಗೆ ಚುನಾವಣೆ ನಡೆಯಬೇಕಾಗಿದೆ. ಗುಜರಾತ್ ನಲ್ಲಿ 04 ಸ್ಥಾನ, ಆಂಧ್ರಪ್ರದೇಶ 04 ಸ್ಥಾನ, ರಾಜಸ್ಥಾನ್ 03, ಮಧ್ಯಪ್ರದೇಶ 03, ಜಾರ್ಖಂಡ್ 02 ಹಾಗೂ ಮಣಿಪುರ 01, ಮೇಘಾಲಯ 01 ಸ್ಥಾನಗಳಿಗೆ ಚುನಾವಣೆ ನಡೆಯಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ