ಫೆ.1ರಂದೇ ಬಜೆಟ್ ಮಂಡನೆಗೆ ಚು.ಆಯೋಗ ಒಪ್ಪಿಗೆ; ಷರತ್ತು ಅನ್ವಯ?
Team Udayavani, Jan 11, 2017, 12:10 PM IST
ಹೊಸದಿಲ್ಲಿ : ಚುನಾವಣಾ ಆಯೋಗವು ಕೇಂದ್ರ ಸರಕಾರಕ್ಕೆ ಫೆ.1ರಂದೇ ಬಜೆಟ್ ಮಂಡಿಸುವುದಕ್ಕೆ ಒಪ್ಪಿಗೆ ನೀಡುವ ಸಾಧ್ಯತೆ ಇದೆ; ಆದರೆ ಕೆಲವೊಂದು ನಿರ್ಬಂಧಗಳೊಂದಿಗೆ.
ವಿಧಾನಸಭಾ ಚುನಾವಣೆಯನ್ನು ಕಾಣುವ ಐದು ರಾಜ್ಯಗಳಿಗೆ ಸಂಬಂಧಿಸಿದಂತೆ ಬಜೆಟ್ನಲ್ಲಿ ಯಾವುದೇ ನಿರ್ದಿಷ್ಟ ಯೋಜನೆಗಳನ್ನು ಪ್ರಕಟಿಸಕೂಡದೆಂಬುದು ಚುನಾವಣಾ ಆಯೋಗದ ಮುಖ್ಯ ನಿರ್ಬಂಧವಾಗಲಿದೆ.
ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳು ಸನ್ನಿಹಿತವಾಗಿರುವುದರಿಂದ ಕೇಂದ್ರ ಸರಕಾರ ಅದಕ್ಕೆ ಮುನ್ನ ಜನ ಮರುಳು ಬಜೆಟ್ ಮಂಡಿಸಿ ರಾಜಕೀಯ ಲಾಭ ಪಡೆಯುವ ಸಾಧ್ಯತೆ ಇರುವುದರಿಂದ ಚುನಾವಣೆಯ ಬಳಿಕವೇ ಬಜೆಟ್ ಮಂಡಿಸುವಂತೆ ತಾಕೀತು ಮಾಡಬೇಕೆಂದು ಪ್ರತಿಪಕ್ಷಗಳು ಚುನಾವಣಾ ಆಯೋಗವನ್ನು ಈ ಮೊದಲು ಆಗ್ರಹಿಸಿದ್ದವು.
ಫೆ.1ರಂದು ಬಜೆಟ್ ಮಂಡನೆಯಾದ ಮೂರು ದಿನಗಳ ತರುವಾಯ ಪಂಜಾಬ್ ಚುನಾವಣೆಗಳು ಬರುತ್ತವೆ. ಹಾಗಾಗಿ ಬಜೆಟ್ ಮಂಡನೆಗೆ ಯಾವುದೇ ಅಡ್ಡಿ ಇರಕೂಡದು ಎಂದು ವಿತ್ತ ಸಚಿವ ಅರುಣ್ ಜೇತ್ಲಿ ಹೇಳಿದ್ದರು.
‘ಐದು ರಾಜ್ಯಗಳೆಂದರೆ ಇಡಿಯ ದೇಶವಲ್ಲ; ಆದುದರಿಂದ ಕೇವಲ ಮೂರ್ಖರು ಮಾತ್ರವೇ ಬಜೆಟ್ ಮಂಡನೆಯನ್ನು ಮುಂದಕ್ಕೆ ಹಾಕಬೇಕೆಂದು ಹೇಳಿಯಾರು’ ಎಂದು ಜೇತ್ಲಿ ವಿಪಕ್ಷವನ್ನು ಲೇವಡಿ ಮಾಡಿದ್ದರು.
ಸಾಮಾನ್ಯವಾಗಿ ಪೆ.28ರಂದು ಕೇಂದ್ರ ಬಜೆಟ್ ಮಂಡಿಸುವುದು ವಾಡಿಕೆ; ಆದರೆ ಈ ಬಾರಿ ಅದನ್ನು ಫೆ.1ರಂದೇ ಮಂಡಿಸುವೆವು ಎಂದು ಜೇತ್ಲಿ ಈ ಹಿಂದೆ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್