ಚೆನ್ನೈ: ಚು.ಆ.ದಿಂದ 24 ಲಕ್ಷ ನಗದು ವಶ; 120 ಕೋಟಿ ಬಂದಿರುವ ಶಂಕೆ
Team Udayavani, Dec 18, 2017, 11:35 AM IST
ಚೆನ್ನೈ : ತಮಿಳು ನಾಡಿನ ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ನಿಧನದಿಂದ ತೆರವಾಗಿರುವ ಆರ್ ಕೆ ನಗರ ಕ್ಷೇತ್ರದ ಉಪಚುನಾವಣೆಗಾಗಿ ಮತದಾರರಿಗೆ ಹಣ ಹಂಚುವ ಉದ್ದೇಶದ ಸುಮಾರು 24 ಲಕ್ಷ ರೂ.ನಗದನ್ನು ಚುನಾವಣಾ ಆಯೋಗ ವಶಪಡಿಸಿಕೊಂಡಿದೆ.
ಚುನಾವಣಾ ವೀಕ್ಷಕ ಹಾಗೂ ವಿಶೇಷ ಅಧಿಕಾರಿಯಾಗಿರುವ ವಿಕ್ರಂ ಬಾತ್ರ ಅವರು ಈ ಬಗ್ಗೆ ಮುಚ್ಚಿದ ಬಾಗಿಲುಗಳ ಹಿಂದೆ ಸಭೆ ನಡೆಸಿದ್ದು ಎಲ್ಲ ರಾಜಕೀಯ ಪಕ್ಷಗಳು ಇತರ ಪಕ್ಷಗಳ ಮೇಲೆ ಗೂಬೆ ಕೂರಿಸುವ ಕೆಲಸವನ್ನು ಮಾಡುತ್ತಿವೆ.
ವಿಕ್ರಂ ಬಾತ್ರಾ ಅವರಾಗಲೀ ಮುಖ್ಯ ಚುನಾವಣಾಧಿಕಾರಿ ರಾಜೇಶ್ ಲಖೋನಿ ಅವರಾಗಲೀ ಈ ಬಗ್ಗೆ ಪ್ರತಿಕ್ರಿಯೆಗಾಗಿ ಮಾಧ್ಯಮಕ್ಕೆ ಅಲಭ್ಯರಾಗಿದ್ದಾರೆ.
ಈ ನಡುವೆ ಡಿಎಂಕೆ ನಾಯಕ ಎಂ ಕೆ ಸ್ಟಾಲಿನ್ ಅವರು ನಿನ್ನೆ ಭಾನುವಾರ ವಿಕ್ರಂ ಬಾತ್ರಾ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಎಐಎಡಿಎಂಕೆ ಮತ್ತು ಕೆಲವು ಹಿರಿಯ ಸಚಿವರು ಸುಮಾರು 120 ಕೋಟಿ ರೂ.ಗಳನ್ನು ಮತದಾರರಿಗೆ ಹಂಚಿದ್ದಾರೆ ಎಂದು ಆರೋಪಿಸಿದ್ದಾರೆ.
ಟಿಟಿವಿ ಬೆಂಬಲಿಗ ಮಹಿಳೆಯೋರ್ವರ ಬಳಿ ಇದ್ದ 20 ಲಕ್ಷ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದ್ದು ಆಕೆಯನ್ನು ರಿಮಾಂಡ್ಗೆ ಒಪ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ