ದಕ್ಷಿಣ ಏಷ್ಯಾ ಆರ್ಥಿಕತೆಗೆ ಕೋವಿಡ್ ಪ್ರಹಾರ
Team Udayavani, Apr 15, 2020, 12:30 PM IST
ಹೊಸದಿಲ್ಲಿ: ಕೋವಿಡ್ ಇಡೀ ಜಗತ್ತಿನ ಆರ್ಥಿಕತೆಯನ್ನು ಅಸ್ತವ್ಯಸ್ತಗೊಳಿಸಿದೆ. ಅದರಲ್ಲೂ ಬಡ ದೇಶಗಳ ಆರ್ಥಿಕ ವ್ಯವಸ್ಥೆಯನ್ನು ಬುಡಮೇಲು ಮಾಡಿದೆ. ದಕ್ಷಿಣ ಏಷ್ಯಾದ ದೇಶಗಳೂ ಅತ್ಯಂತ ಕಠಿನ ದಿನಗಳನ್ನು ಕಾಣಲಿವೆ ಎಂದು ವಿಶ್ವಬ್ಯಾಂಕ್ ವರದಿಯೊಂದು ಹೇಳಿದೆ.
ಭಾರತ, ಬಾಂಗ್ಲಾದೇಶ, ಶ್ರೀಲಂಕ, ಪಾಕಿಸ್ಥಾನ ಈ ಮುಂತಾದ ದೇಶಗಳು ದಕ್ಷಿಣ ಏಷ್ಯಾದಲ್ಲಿ ಬರುತ್ತವೆ. ಈ ಪೈಕಿ 130 ಕೋಟಿ ಜನಸಂಖ್ಯೆಯನ್ನು ಹೊಂದಿರುವ ಭಾರತವೇ ದಕ್ಷಿಣ ಏಷ್ಯಾದಲ್ಲಿ ದೊಡ್ಡ ಆರ್ಥಿಕ ಶಕ್ತಿ. 180 ಕೋಟಿ ಜನರು ದಕ್ಷಿಣ ಏಷ್ಯಾದಲ್ಲಿ ವಾಸವಾಗಿದ್ದಾರೆ ಮತ್ತು ಕೆಲವು ಅತಿ ಜನನಿಬಿಡ ನಗರಗಳು ಈ ದೇಶಗಳಲ್ಲಿವೆ. ಕೋವಿಡ್ ಪಶ್ಚಾತ್ ಪರಿಣಾಮ ಈ ದೇಶಗಳ ಮೇಲೆ ಹೆಚ್ಚಿರಲಿದೆ. ಪ್ರವಾಸೋದ್ಯಮ ಬಹುತೇಕ ನೆಲಕಚ್ಚಿದೆ. ಪೂರೈಕೆ ಸರಪಣಿ ಅಸ್ತವ್ಯಸ್ತಗೊಂಡಿದೆ. ಜವುಳಿ ಬೇಡಿಕೆ ಪಾತಾಳಕ್ಕಿಳಿದಿದೆ. ಬಳಕೆದಾರರ ಮತ್ತು ಹೂಡಿಕೆದಾರರ ವಿಶ್ವಾಸಾರ್ಹತೆ ಕುಸಿದಿದೆ. ಈ ಪರಿಸ್ಥಿತಿಯಿಂದ ಚೇತರಿಸಿಕೊಳ್ಳಲು ಈ ದೇಶಗಳಿಗೆ ದಶಕಗಳೇ ಬೇಕಾಗಬಹುದು. ಇದರ ಪರಿಣಾಮವಾಗಿ ಬಡತನ ಹೆಚ್ಚಲಿದೆ ಎನ್ನಲಾಗಿದೆ.
ಕುಸಿದ ಆರ್ಥಿಕ ಮುಂಗಾಣ್ಕೆ
ದಕ್ಷಿಣ ಏಷ್ಯಾದ ಆರ್ಥಿಕ ಅಭಿವೃದ್ಧಿಯ ಮುಂಗಾಣ್ಕೆಯನ್ನು ವಿಶ್ವಬ್ಯಾಂಕ್ ಪರಿಷ್ಕರಿಸಿದೆ. ಶೇ. 2.8 ಇದ್ದ ಅಭಿವೃದ್ಧಿ ಮುಂಗಾಣ್ಕೆ ದರ ಶೇ. 1.8ಕೆ ಕುಸಿದಿದೆ. ವೈರಸ್ ಹಾವಳಿಗಿಂತ ಮುಂಚೆ ವಿಶ್ವಬ್ಯಾಂಕ್ ದಕ್ಷಿಣ ಏಷ್ಯಾ ಶೇ. 6.3 ದರದಲ್ಲಿ ಅಭಿವೃದ್ಧಿ ಸಾಧಿಸಲಿದೆ ಎಂದು ಅಂದಾಜಿಸಿತ್ತು. ಸಣ್ಣ ದ್ವೀಪಗಳ ಗುಚ್ಚವಾಗಿರುವ ಮಾಲ್ದೀವ್ಸ್ನ ಆರ್ಥಿಕತೆ ಇನ್ನಿಲ್ಲದಂತೆ ನೆಲಕಚ್ಚಲಿದೆ.
ಪ್ರವಾಸೋದ್ಯಮ ಈ ದೇಶದ ಪ್ರಮುಖ ಆದಾಯ ಮೂಲ. ಈಗ ಪ್ರವಾಸೋದ್ಯಮ ಬಹುತೇಕ ಸ್ತಬ್ಧಗೊಂಡಿದ್ದು, ಅಲ್ಲಿಯ ಆರ್ಥಿಕತೆ ಶೇ. 13ರಷ್ಟು ಕುಸಿತ ಕಾಣಲಿದೆ ಎಂದು ಅಂದಾಜಿಸಿದೆ. ಭಾರತದ ಅಭಿವೃದ್ಧಿ ದರ ಹಾಲಿ ಹಣಕಾಸು ವರ್ಷದಲ್ಲಿ ಶೇ.5ರಿಂದ ಶೇ.1.3ಕ್ಕಿಳಿಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು