ಆರ್ಥಿಕ ಸಮೀಕ್ಷೆಯ ಥಾಲಿನಾಮಿಕ್ಸ್: ದೇಶದಲ್ಲಿ ನಾನ್ ವೆಜ್ ಥಾಲಿಗಿಂತ ವೆಜ್ ಥಾಲಿ ದರ ಕಡಿಮೆ!


Team Udayavani, Jan 31, 2020, 10:06 PM IST

Thali-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಲೋಕಸಭೆಯಲ್ಲಿ ಮಂಡಿಸಿದ ಆರ್ಥಿಕ ಸಮೀಕ್ಷೆಯು ದೇಶದಲ್ಲಿನ ಆರ್ಥಿಕ ಪರಿಸ್ಥಿತಿಯು ಆಹಾರ ಪದಾರ್ಥಗಳ ಬೆಲೆಗಳ ಮೇಲೆ ಯಾವ ರೀತಿಯ ಪ್ರಭಾವವನ್ನು ಬೀರಿದೆ ಎಂಬ ಅಂಶದ ಮೇಲೆ ಬೆಳಕನ್ನು ಚೆಲ್ಲುವ ಪ್ರಯತ್ನವನ್ನು ಮಾಡಿದೆ.

ಈ ಸಮೀಕ್ಷೆಯಲ್ಲಿ ಬಹಿರಂಗಗೊಂಡಿರುವಂತೆ ಸಸ್ಯಾಹಾರಿ ಥಾಲಿಗಳ ಬೆಲೆಯು 2015-16ರಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿರುವುದು ಹಾಗೂ 2019ರಲ್ಲಿ ಸ್ವಲ್ಪ ಮಟ್ಟಿನ ಏರಿಕೆ ಕಂಡಿರುವುದು ದಾಖಲಾಗಿದೆ. ಸಸ್ಯಾಹಾರಿ ಥಾಲಿಗಳ ಕೈಗೆಟಗುವಿಕೆ 2006-07 ಮತ್ತು 2019-20ರ ನಡುವೆ 29% ಸುಧಾರಣೆಗೊಂಡಿರುವುದು ಈ ಸಮೀಕ್ಷೆಯಲ್ಲಿ ಬಹಿರಂಗಗೊಂಡಿದೆ. ಇದೇ ಸಂದರ್ಭದಲ್ಲಿ ಮಾಂಸಾಹಾರಿ ಥಾಲಿ ಕೈಗೆಟಗುವಿಕೆ 18% ಸುಧಾರಣೆಕಂಡಿದೆ.

ಸಾಮಾನ್ಯ ಕೈಗಾರಿಕಾ ಉದ್ಯೋಗಿಯೊಬ್ಬನ ವಾರ್ಷಿಕ ಆದಾಯವನ್ನು ಪರಿಗಣಿಸಿ ನಡೆಸಿರುವ ಈ ಸಮೀಕ್ಷೆಯ ಪ್ರಕಾರ ಸಸ್ಯಾಹಾರಿ ಥಾಲಿ ಖರೀದಿ ಸಾಮರ್ಥ್ಯವು 2006-07 ಮತ್ತು 2019-20ರ ನಡುವೆ 29% ಸುಧಾರಣೆ ಕಂಡಿದ್ದರೆ, ಮಾಂಸಾಹಾರಿ ಥಾಲಿ ಖರೀದಿ ಸಾಮರ್ಥ್ಯವು 18% ಸುಧಾರಣೆ ಕಂಡಿದೆ.

25 ರಾಜ್ಯಗಳ ಸುಮಾರು 80 ಕೇಂದ್ರಗಳಲ್ಲಿನ ಗ್ರಾಹಕ ದರ ಸೂಚ್ಯಂಕ ಮಾಹಿತಿಗಳನ್ನು ಈ ಸಮೀಕ್ಷೆಯು ವಿಶ್ಲೇಷಣೆಗೊಳಪಡಿಸಿ ಥಾಲಿಗಳ ದರ ನಿರ್ಣಯಕ್ಕೆ ಅದು ಬಂದಿದೆ. ಇತ್ತೀಚಿನ ವರ್ಷಗಳಲ್ಲಿ ಜನಸಾಮಾನ್ಯರು ಸೇವಿಸುವ ಆಹಾರ ಪದಾರ್ಥಗಳ ಅಂಶವನ್ನು ಮೂಲವಾಗಿಟ್ಟುಕೊಂಡು ನಡೆಸಿರುವ ಪ್ರಥಮ ಸಮೀಕ್ಷೆ ಇದಾಗಿದೆ.

ಜನಸಾಮಾನ್ಯರು ತಾವು ಸೇವಿಸುವ ಆಹಾರಕ್ಕೆ ಎಷ್ಟು ದರವನ್ನು ನೀಡುತ್ತಾರೆ ಎಂಬುದನ್ನು ಕಂಡುಕೊಳ್ಳುವ ಪ್ರಯತ್ನ ಇದಾಗಿದೆ ಎಂದು ಈ ಸಮೀಕ್ಷೆಯ ರೂವಾರಿ ಮುಖ್ಯ ಆರ್ಥಿಕ ಸಲಹೆಗಾರ ಕೆ. ಸುಬ್ರಮಣಿಯಣ್ ಅವರು ಅಭಿಪ್ರಾಯಪಟ್ಟಿದ್ದಾರೆ.

ಆರ್ಥಿಕತೆಯು ಜನಸಾಮಾನ್ಯರ ಜೀವನದ ಮೇಲೆ ಹಲವು ರೀತಿಯಲ್ಲಿ ಪ್ರಭಾವವನ್ನು ಬೀರುತ್ತದೆ ಆದರೆ ಇದು ಬಹಳಷ್ಟು ಸಂದರ್ಭಗಳಲ್ಲಿ ಗಮನಕ್ಕೆ ಬಂದಿರುವುದಿಲ್ಲ. ಹಾಗಾಗಿ ಜನಸಾಮಾನ್ಯರು ಪ್ರತೀದಿನ ಅನುಭವಿಸುವ ವಿಷಯಗಳಿಗೆ ಆರ್ಥಿಕತೆಯನ್ನು ಅನ್ವಯಿಸುವು ಉತ್ತಮ ವಿಧಾನವಾಗಿದ್ದು, ತಾನು ಸೇವಿಸುವ ಆಹಾರ ಎಷ್ಟು ಅಗ್ಗದಲ್ಲಿ ಅವರಿಗೆ ದೊರೆಯುತ್ತದೆ ಎಂಬುದನ್ನು ಕಂಡುಕೊಳ್ಳುವುದೂ ಸಹ ಆರ್ಥಿಕತೆಯನ್ನು ಅಳೆಯುವ ಉತ್ತಮ ವಿಧಾನವಾಗಿದೆ ಎಂದು ಸಮೀಕ್ಷೆಯ ಪ್ರಾರಂಭದಲ್ಲಿ ಹೇಳಲಾಗಿದೆ. ಇದನ್ನೇ ಅದು ಥಾಲಿನಾಮಿಕ್ಸ್ ಎಂದು ಕರೆದಿದೆ.

ಐದು ಜನರಿರುವ ಒಂದು ಕುಟುಂಬವು ವರ್ಷ ಒಂದರಲ್ಲಿ 10,887 ಆಹಾರಕ್ಕೆ ವ್ಯಯಿಸುವ ಸಾಮರ್ಥ್ಯವನ್ನು ಹೊಂದಿದ್ದರೆ ಅದೇ ಮಾಂಸಾಹಾರಿ ಕುಟುಂಬವು ವರ್ಷಕ್ಕೆ 11787 ರೂಪಾಯಿಗಳನ್ನು ವ್ಯಯಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಈ ಸಮೀಕ್ಷೆಯು ಅಭಿಪ್ರಾಯಪಟ್ಟಿದೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.