ದೇಶದ ಜಿಡಿಪಿ ಶೇ. 20.1ಕ್ಕೆ ಜಿಗಿತ


Team Udayavani, Sep 1, 2021, 7:30 AM IST

ದೇಶದ ಜಿಡಿಪಿ ಶೇ. 20.1ಕ್ಕೆ ಜಿಗಿತ

ಹೊಸದಿಲ್ಲಿ / ಮುಂಬಯಿ: ಸೋಂಕಿನ ಹೊಡೆತಕ್ಕೆ ತತ್ತರಿಸಿದ್ದ ದೇಶದ ಅರ್ಥ ವ್ಯವಸ್ಥೆ ನಾಗಾಲೋಟದಲ್ಲಿ ಚೇತರಿಕೆ ಕಾಣುತ್ತಿದೆ. ಹಾಲಿ ವಿತ್ತ  ವರ್ಷದ ಮೊದಲ ತ್ತೈಮಾಸಿಕದಲ್ಲಿ ಒಟ್ಟು ದೇಶಿಯ ಉತ್ಪಾದನೆ (ಜಿಡಿಪಿ) ದಾಖಲೆಯ ಶೇ. 20.1ಕ್ಕೆ ಜಿಗಿದಿರುವುದು ಮತ್ತು ಮಂಗಳವಾರ ಬಾಂಬೆ ಷೇರುಪೇಟೆಯಲ್ಲಿ ಸಂವೇದಿ ಸೂಚ್ಯಂಕ 57 ಸಾವಿರಕ್ಕೆ ಏರಿಕೆಯಾಗಿರುವುದು ಇದಕ್ಕೆ ಸಾಕ್ಷಿ.

ಅಮೆರಿಕದ ಡಾಲರ್‌ ಎದುರು ಭಾರತೀಯ ರೂಪಾಯಿ 20 ಪೈಸೆ ಏರಿಕೆ ಕಂಡಿರು ವುದು ಕೂಡ ಸೋಂಕಿನ ನಡುವೆ ಭಾರತದ ಅರ್ಥವ್ಯವಸ್ಥೆ ಚೇತರಿಕೆಯತ್ತ ಸಾಗುತ್ತಿದೆ ಎಂಬುದಕ್ಕೆ ನಿದರ್ಶನ ಎಂದು ಅಂತಾ ರಾಷ್ಟ್ರೀಯ ರೇಟಿಂಗ್ಸ್‌ ಸಂಸ್ಥೆ ಮೂಡೀಸ್‌ ತನ್ನ ವರದಿಯಲ್ಲಿ ಧನಾತ್ಮಕವಾಗಿ ಚಿತ್ರಿಸಿದೆ.

ಪ್ರಸಕ್ತ ವಿತ್ತೀಯ ವರ್ಷದಲ್ಲಿ ಜೂನ್‌ಗೆ ಮುಕ್ತಾಯವಾಗಿರುವ ಮೊದಲ ತ್ತೈಮಾಸಿಕ ದಲ್ಲಿ ಜಿಡಿಪಿ ಕಳೆದ ವಿತ್ತೀಯ ವರ್ಷದ ಇದೇ ಅವಧಿಗಿಂತ ಶೇ. 20.1ರಷ್ಟು ಏರಿಕೆ ಕಂಡಿದೆ. ಕೇಂದ್ರ ಸರಕಾರದ ರಾಷ್ಟ್ರೀಯ ಸಾಂಖೀÂಕ ಸಂಸ್ಥೆ (ಎನ್‌ಎಸ್‌ಒ) ಈ ಮಾಹಿತಿ ಬಿಡುಗಡೆ ಮಾಡಿದೆ.

2020-21ನೇ ವಿತ್ತೀಯ ವರ್ಷದ ಮೂರನೇ ಮತ್ತು ನಾಲ್ಕನೇ ತ್ತೈಮಾಸಿಕದಲ್ಲಿ ಜಿಡಿಪಿ ಶೇ. 0.5, ಶೇ. 1.6ರಷ್ಟು ಏರಿಕೆಯಾಗಿತ್ತು. ಸತತ ಮೂರನೇ ಬಾರಿಗೆ ಇಂಥ ಏರಿಕೆಯನ್ನು ದೇಶದ ಅರ್ಥ ವ್ಯವಸ್ಥೆ ಕಾಣುತ್ತಿದೆ. ಕಳೆದ ವಿತ್ತೀಯ ವರ್ಷದ ಇದೇ ಅವಧಿಯಲ್ಲಿ ಜಿಡಿಪಿ ಶೇ. -24.4ಕ್ಕೆ ಕುಸಿದಿತ್ತು.

ರೂಪಾಯಿ ಏರಿಕೆ:

ಮಂಗಳವಾರ ಅಮೆರಿಕದ ಡಾಲರ್‌ ಎದುರು ಭಾರತೀಯ ಕರೆನ್ಸಿ ರೂಪಾಯಿಯ ಮೌಲ್ಯ 29 ಪೈಸೆ ಏರಿಕೆ ಯಾಗಿದೆ. ಹೀಗಾಗಿ ದಿನಾಂತ್ಯಕ್ಕೆ ಅದು 73 ರೂ.ಗಳಿಗೆ ಮುಕ್ತಾಯವಾಗಿದೆ. 12 ವಾರ ಗಳಿಗೆ ಹೋಲಿಸಿದರೆ ಇದು ಗರಿಷ್ಠ ಏರಿಕೆ.

ಬಿಎಸ್‌ಇ, ನಿಫ್ಟಿ ದಾಖಲೆ :

ಬಾಂಬೆ ಷೇರು ಪೇಟೆಯಲ್ಲಿ ಹೂಡಿಕೆದಾರರಿಗೆ ಸತತ 2ನೇ ದಿನವೂ ಸಂತಸ ಲಭಿಸಿದೆ. ದಿನದ ವಹಿವಾಟಿನಲ್ಲಿ ಬಿಎಸ್‌ಇ ಸೂಚ್ಯಂಕ 662.63 ಪಾಯಿಂಟ್‌ ಏರಿಕೆಯಾಗಿತ್ತು. ಮಧ್ಯಾಂತರದಲ್ಲಿ 57,625.26 ಪಾಯಿಂಟ್‌ಗಳಿಗೆ ಏರಿ 57,552.39ರಲ್ಲಿ ಸೂಚ್ಯಂಕ ಮುಕ್ತಾಯವಾಯಿತು. ಇದರಿಂದ ಬಿಎಸ್‌ಇಯ ಮಾರುಕಟ್ಟೆ ಮೌಲ್ಯ 2,50,02,084.01 ಕೋಟಿ ರೂ.ಗೆ ಜಿಗಿದಿದೆ.

ಸತತ ಏಳನೇ ದಿನವೂ ನಿಫ್ಟಿ ಸೂಚ್ಯಂಕ 201.15 ಪಾಯಿಂಟ್‌ ಏರಿಕೆಯಾಗಿದೆ. ಮಧ್ಯಾಂತರದಲ್ಲಿ 17,153.50ರ ವರೆಗೆ ಏರಿಕೆಯಾಗಿ ದಿನಾಂತ್ಯಕ್ಕೆ 17, 153.50ರಲ್ಲಿ ಮುಕ್ತಾಯವಾಯಿತು. ಸತತ 19 ದಿನಗಳ ಅವಧಿಯಲ್ಲಿ ನಿಫ್ಟಿ ಸೂಚ್ಯಂಕ 1 ಸಾವಿರ ಪಾಯಿಂಟ್‌ಗಳಷ್ಟು ಏರಿಕೆಯಾಗಿದೆ.

ವಲಯಗಳ ಕೊಡುಗೆ :

  • ನಿರ್ಮಾಣ ವಲಯ  – ಶೇ. 68.3
  • ಕೃಷಿ ವಲಯ  – ಶೇ. 4.5
  • ಗಣಿಗಾರಿಕೆ – ಶೇ. 18.6
  • ವ್ಯಾಪಾರ, ಹೊಟೇಲ್‌, ಸಾರಿಗೆ, ಸಂಪರ್ಕ, ಸೇವಾ ವಲಯ  – ಶೇ.34.3
  • ವಿದ್ಯುತ್‌, ಗ್ಯಾಸ್‌, ನೀರು ಪೂರೈಕೆ, ಇತರ ವಲಯ – ಶೇ. 14.3
  • ರಿಯಲ್‌ ಎಸ್ಟೇಟ್‌, ಹಣಕಾಸು, ವೃತ್ತಿ ಪರ ಸೇವೆ – ಶೇ. 3.7
  • ಸಾರ್ವಜನಿಕ ಆಡಳಿತ, ರಕ್ಷಣೆ, ಇತರ ಸೇವೆ – ಶೇ. 5.8

ಟಾಪ್ ನ್ಯೂಸ್

Hubli; ನೇಹಾ ಪ್ರಕಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Hubli; ನೇಹಾ ಪ್ರಕಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.