Economy; ಆಟೋ, ಫಾರ್ಮಾ, ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಹೊಸ ಉದ್ಯೋಗಗಳು: ಪ್ರಧಾನಿ

ರೋಜ್‌ಗಾರ್ ಮೇಳ..51,000 ನೇಮಕಾತಿ...;''ಇದೆಲ್ಲ ಗಿಮಿಕ್'' ಎಂದು ಟೀಕಿಸಿದ ಕಾಂಗ್ರೆಸ್

Team Udayavani, Aug 28, 2023, 5:11 PM IST

PM Mod

ಹೊಸದಿಲ್ಲಿ: ಭಾರತದ ಆರ್ಥಿಕತೆಯು ಕ್ಷಿಪ್ರ ಬೆಳವಣಿಗೆಯ ಹಾದಿಯಲ್ಲಿದ್ದು, ಯುವಜನರಿಗೆ ಉದ್ಯೋಗಕ್ಕಾಗಿ ದೊಡ್ಡ ಅವಕಾಶಗಳನ್ನು ಸೃಷ್ಟಿಸಲು ಕಾರಣವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.

ದೇಶದಾದ್ಯಂತ 45 ಸ್ಥಳಗಳಲ್ಲಿ ಕೇಂದ್ರೀಯ ಅರೆಸೇನಾ ಪಡೆಗಳು, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಮತ್ತು ದೆಹಲಿ ಪೋಲೀಸ್‌ಗೆ ಹೊಸದಾಗಿ ನೇಮಕಗೊಂಡಿರುವವರ ನೇಮಕಾತಿ ಪತ್ರಗಳನ್ನು ವಿತರಿಸುವ ರೋಜ್‌ಗಾರ್ ಮೇಳವನ್ನು ಉದ್ದೇಶಿಸಿ ಮೋದಿ ವರ್ಚುವಲ್ ಆಗಿ ಮಾತನಾಡಿದರು.

ಭದ್ರತಾ ಸಂಸ್ಥೆಗಳಿಗೆ 51,000 ನೇಮಕಾತಿ ಪತ್ರಗಳನ್ನು ವಿತರಿಸಿ ಮಾತನಾಡಿ, ಆಟೋಮೊಬೈಲ್, ಫಾರ್ಮಾ, ಪ್ರವಾಸೋದ್ಯಮ ಮತ್ತು ಆಹಾರ ಸಂಸ್ಕರಣಾ ಕ್ಷೇತ್ರಗಳು ತ್ವರಿತ ಗತಿಯಲ್ಲಿ ಬೆಳೆಯುವ ನಿರೀಕ್ಷೆಯಿದೆ ಮತ್ತು ಯುವಕರಿಗೆ ಉದ್ಯೋಗಾವಕಾಶಗಳನ್ನು ತೆರೆಯುವ ನಿರೀಕ್ಷೆಯಿದೆ ಎಂದರು.

ಭಾರತವು ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಹೊರಹೊಮ್ಮಿದೆ ಮತ್ತು ಈ ದಶಕದಲ್ಲಿ ಶೀಘ್ರದಲ್ಲೇ ವಿಶ್ವದ ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಗಲಿದೆ ಮತ್ತು ಸಾಮಾನ್ಯ ಜನರಿಗೆ ಪ್ರಯೋಜನಗಳನ್ನು ತರಲಿದೆ. ಯಾವುದೇ ಆರ್ಥಿಕತೆ ಬೆಳೆಯಲು, ಪ್ರತಿಯೊಂದು ಕ್ಷೇತ್ರವೂ ಅಭಿವೃದ್ಧಿ ಹೊಂದುವುದು ಕಡ್ಡಾಯವಾಗಿದೆ. ಆಹಾರ ಕ್ಷೇತ್ರದಿಂದ ಫಾರ್ಮಾಸ್ಯುಟಿಕಲ್‌ಗಳವರೆಗೆ, ಬಾಹ್ಯಾಕಾಶದಿಂದ ಸ್ಟಾರ್ಟ್‌ಅಪ್‌ಗಳವರೆಗೆ, ಪ್ರತಿಯೊಂದು ಕ್ಷೇತ್ರ ಬೆಳೆದಾಗ ಆರ್ಥಿಕತೆಯು ಮುಂದುವರಿಯುತ್ತದೆ, ”ಎಂದರು.

ಇದೆಲ್ಲ ಗಿಮಿಕ್ ಕಾಂಗ್ರೆಸ್

ರೋಜ್‌ಗಾರ್ ಮೇಳದ ಕುರಿತು ಪ್ರಧಾನಿ ಮೋದಿ ಅವರ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಕಾಂಗ್ರೆಸ್ ಇದೆಲ್ಲ ಗಿಮಿಕ್ ಎಂದಿದೆ. ಉದ್ಯೋಗಾವಕಾಶಗಳ ಕೊರತೆ ಇದ್ದು ಪ್ರಧಾನಿ ಚುನಾವಣಾ ವರ್ಷದ ಬಿಸಿ ಅನುಭವಿಸುತ್ತಿರುವ ಕಾರಣ ಮತ್ತು ತಮ್ಮ ಇಮೇಜ್ ಉಳಿಸಲು ರೋಜ್‌ಗಾರ್ ಮೇಳಗಳನ್ನು ನಡೆಸುತ್ತಿದ್ದಾರೆ ಎಂದಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರೋಜ್‌ಗಾರ್ ಮೇಳವನ್ನು “EMI- ಖಾಲಿ ಕುಶಲ ಕಂತುಗಳು” ಎಂದು ಟೀಕಿಸಿದ್ದಾರೆ.

“ವರ್ಷಕ್ಕೆ ಎರಡು ಕೋಟಿ ಉದ್ಯೋಗಗಳ ಭರವಸೆ ನೀಡುವ ಮೂಲಕ ಮೋದಿ ಜಿ ನಮ್ಮ ಯುವಕರಿಗೆ EMI ಗಳ ರೂಪದಲ್ಲಿ ಕೆಲವು ಸಾವಿರ ನೇಮಕಾತಿ ಪತ್ರಗಳನ್ನು ಮಾತ್ರ ವಿತರಿಸುತ್ತಿದ್ದಾರೆ. ಯುವಜನರ ಭವಿಷ್ಯದ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದಿದ್ದರೆ, ನೀವು ಈ PR ಸ್ಟಂಟ್‌ನಲ್ಲಿ ಭಾಗವಹಿಸುವ ಮೂಲಕ ಅವರ ಆಕಾಂಕ್ಷೆಗಳೊಂದಿಗೆ ಆಟವಾಡುತ್ತಿರಲಿಲ್ಲ. ದೇಶದ ಯುವಕರು ಬಿಜೆಪಿಯ ಸುಳ್ಳುಗಳು, ಗಿಮಿಕ್‌ಗಳು ಮತ್ತು ದ್ರೋಹವನ್ನು ಗುರುತಿಸಿದ್ದು, ಅವರು ಖಂಡಿತವಾಗಿಯೂ 2024 ರಲ್ಲಿ ಮೋದಿ ಸರ್ಕಾರಕ್ಕೆ ದಾರಿ ತೋರಿಸುತ್ತಾರೆ ಎಂದು ಎಕ್ಸ್‌ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ರೋಜ್ ಗಾರ್ ಮೇಳಗಳನ್ನು “ದೊಡ್ಡ ಜುಮ್ಲಾಗಳು” ಎಂದು ಕರೆದಿದ್ದು, ಪ್ರತಿ ವರ್ಷ ಎರಡು ಕೋಟಿ ಉದ್ಯೋಗಗಳನ್ನು ಸೃಷ್ಟಿಸುವ ಭರವಸೆಯನ್ನು ಈಡೇರಿಸುವಲ್ಲಿ ಪ್ರಧಾನಿ ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.