ಕಾರ್ತಿ ಚಿದಂಬರಂ ವಿರುದ್ಧ ಲುಕೌಟ್ ನೋಟಿಸ್
Team Udayavani, Aug 5, 2017, 8:00 AM IST
ಹೊಸದಿಲ್ಲಿ: ಭ್ರಷ್ಟಾಚಾರ, ವಿದೇಶಿ ವಿನಿಮಯ ನಿಯಮ ಉಲ್ಲಂಘನೆ ಆರೋಪ ಹೊತ್ತಿರುವ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ವಿರುದ್ಧ ತನಿಖಾ ದಳಗಳು ಲುಕೌಟ್ ನೋಟಿಸ್ ಜಾರಿ ಮಾಡಿವೆ. ವಿದೇಶ ಪ್ರವಾಸವನ್ನು ನಿಯಂತ್ರಿಸುವ ಸಂಬಂಧ ಇದನ್ನು ಜಾರಿ ಮಾಡಲಾಗಿದೆ. ಇದರ ವಿರುದ್ಧ ಕಾರ್ತಿ ಅವರು ಮದ್ರಾಸು ಹೈಕೋರ್ಟ್ ಮೊರೆ ಹೋಗಿದ್ದು, ಲುಕೌಟ್ ನೋಟಿಸ್ಗೆ ತಡೆ ತರುವಂತೆ ಕೋರಿದ್ದಾರೆ.
ಭ್ರಷ್ಟಾಚಾರ ಪ್ರಕರಣಗಳ ಕುರಿತ ವಿಚಾರಣೆ ತಪ್ಪಿಸಲು ಕಾರ್ತಿ ಅವರು ವಿದೇಶಕ್ಕೆ ಪರಾರಿಯಾಗಬಹುದು ಎಂಬ ಭೀತಿಯಿಂದ ತನಿಖಾ ದಳಗಳು ಲುಕೌಟ್ ನೋಟಿಸ್ ಜಾರಿ ಮಾಡಿವೆ. ನೋಟಿಸ್ ಪ್ರಕಾರ ಕಾರ್ತಿ ಸಿಬಿಐ ಮತ್ತು ಇ.ಡಿ.ಗಳಿಗೆ ತಮ್ಮ ಪ್ರಯಾಣದ ಬಗ್ಗೆ ತಿಳಿಸಬೇಕು. ಅವುಗಳು ಅನುಮತಿಸಿದರೆ ಮಾತ್ರ ವಿದೇಶ ಪ್ರವಾಸ ಸಾಧ್ಯ. ಐಎನ್ಎಕ್ಸ್ ಮೀಡಿಯಾಕ್ಕೆ ವಿದೇಶಿ ಹೂಡಿಕೆಗೆ ಅನುವು ಮಾಡಿಕೊಟ್ಟಿದ್ದಕ್ಕೆ 3.5 ಕೋಟಿ ರೂ. ಕಿಕ್ಬ್ಯಾಕ್ ಪಡೆದಿದ್ದಾಗಿ ಹೇಳಲಾಗಿತ್ತು. 4.5 ಕೋಟಿ ರೂ. ವಿದೇಶಿ ಹೂಡಿಕೆಗೆ ಅನುಮತಿ ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ