ವಾದ್ರಾ ಮತ್ತಿತರರ ವಿರುದ್ಧ ಜಾರಿ ನಿರ್ದೇಶನಾಲಯದ ಹೊಸ ಕೇಸು
Team Udayavani, Jan 7, 2019, 10:07 AM IST
ಹೊಸದಿಲ್ಲಿ : ಹರಿಯಾಣ ಗುರ್ಗಾಂವ್ ನಲ್ಲಿ 2008ರಲ್ಲಿ ನಡೆದಿರುವ ಭೂ ಅಕ್ರಮ ಮತ್ತು ಶಂಕಿತ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಮತ್ತು ಇತರ ಕೆಲವರ ವಿರುದ್ಧ ಕೇಸು ದಾಖಲಿಸಿದೆ ಎಂದು ಅಧಿಕಾರಿಗಳು ಇಂದು ಸೋಮವಾರ ತಿಳಿಸಿದ್ದಾರೆ.
ಅನುಷ್ಠಾನ ಮಾಹಿತಿ ವರದಿ ಎಂದು ಕರೆಯಲ್ಪಡುವ ಕ್ರಿಮಿನಲ್ ಎಫ್ಐಆರ್ ಅನ್ನು ದಾಖಲಿಸಿರುವ ಜಾರಿ ನಿರ್ದೇಶನಾಲಯ ಕಳೆದ ವರ್ಷ ವಾದ್ರಾ ಜತೆ ನಂಟು ಹೊಂದಿದ್ದ ಮೂವರ ವಿರುದ್ಧ ದಾಳಿ ಕಾರ್ಯಾಚರಣೆ ನಡೆಸಿತ್ತು.
ಕೆಲವೊಂದು ಶಂಕಿತ ರಕ್ಷಣಾ ವಹಿವಾಟುಗಳಲ್ಲಿ ಕಮಿಷನ್ ಸ್ವೀಕರಿಸಲಾದ ಸಂಬಂಧ ಜಾರಿ ನಿರ್ದೇಶನಾಲಯ ಶಂಕಿತರ ವಿರುದ್ಧ ಶೋಧ ಕಾರ್ಯಾಚರಣೆ ನಡೆಸಿತ್ತು. ಹರಿಯಾಣ ಪೊಲೀಸರು ಕಳೆದ ವರ್ಷ ಸೆಪ್ಟಂಬರ್ನಲ್ಲಿ ದಾಖಲಿಸಿದ್ದ ಎಫ್ಐಆರ್ ಆಧರಿಸಿ ಜಾರಿ ನಿರ್ದೇಶನಾಯ ಈ ಹೊಸ ಆಪಾದನೆಗಳನ್ನು ಮಾಡಿ ಕೇಸು ದಾಖಲಿಸಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?