ಫಿನ್‌ಟೆಕ್‌ಗಳ 800 ಕೋಟಿ ಅವ್ಯವಹಾರ ಬಯಲು: ಕೋವಿಡ್ ಅವಧಿಯಲ್ಲಿ 4 ಸಾ.ಕೋ. ರೂ. ಸಾಲ ವಿತರಣೆ


Team Udayavani, Aug 25, 2022, 7:20 AM IST

thumb 2 money

ಮುಂಬಯಿ: ಹಣಕಾಸು ತಂತ್ರಜ್ಞಾನ (ಫಿನ್‌ಟೆಕ್‌) ಕ್ಷೇತ್ರದ 365 ಕಂಪೆನಿಗಳು ಮತ್ತು ಅವುಗಳಿಗೆ ನಿಕಟವರ್ತಿಗಳಾಗಿರುವ ಕೆಲವು ಬ್ಯಾಂಕೇತರ ವಿತ್ತೀಯ ಸಂಸ್ಥೆಗಳು (ಎನ್‌ಬಿಎಫ್ಸಿ) 800 ಕೋಟಿ ರೂ.ಗಳಿಗಿಂತಲೂ ಅಧಿಕ ಮೊತ್ತದ ವಂಚನೆ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ.

ಜಾರಿ ನಿರ್ದೇಶನಾಲಯ (ಇ.ಡಿ) ಈ ಬಗ್ಗೆ ದೀರ್ಘ‌ ಕಾಲದ ತನಿಖೆ ನಡೆಸಿ, ಅಕ್ರಮ ನಡೆಸಿದ್ದರ ಬಗ್ಗೆ ಖಚಿತ ಪಡಿಸಿಕೊಂಡಿದೆ. ಕೊರೊನಾ ಸೋಂಕಿನ ಸಮಸ್ಯೆ ಹೆಚ್ಚಾಗಿದ್ದ ಮತ್ತು ಲಾಕ್‌ಡೌನ್‌ ಅವಧಿಯಲ್ಲಿ ಉದ್ಯೋಗ ನಷ್ಟ ಸಂಭವಿಸಿದ್ದ ವೇಳೆ ಈ ಅಕ್ರಮ ನಡೆದಿದೆ. ದೇಶದಲ್ಲಿ ಚೀನಾ ಲೋನ್‌ ಆ್ಯಪ್‌ ಹಾವಳಿಯ ನಡುವೆಯೇ ಹೊಸ ರೀತಿಯ ಆರ್ಥಿಕ ಅಕ್ರಮಗಳು ನಡೆದಿದೆ.

ಹಣಕಾಸು ತಂತ್ರಜ್ಞಾನ ಕ್ಷೇತ್ರದ ಕಂಪೆನಿಗಳು 4 ಸಾವಿರ ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಸಾಲವನ್ನೂ ವಿತರಿಸಿದ್ದವು. ಇಂಥ ಪಿನ್‌ಟೆಕ್‌ ಕಂಪೆನಿಗಳು ಮೂಲತಃ ಚೀನಾ ಹೂಡಿಕೆಯಿಂದ ಬೆಂಬಲಿತವಾಗಿದ್ದವು ಎಂದು ಇ.ಡಿ. ತನಿಖೆಯಿಂದ ಬೆಳಕಿಗೆ ಬಂದಿದೆ. ಅದಕ್ಕಾಗಿ ಅವುಗಳಿಗೆ ಶೇ.0.5ರಿಂದ ಶೇ.1ರ ವರೆಗೆ ಲಾಭಾಂಶವನ್ನೂ ನೀಡಲಾಗುತ್ತಿತ್ತು.

700 ಕೋಟಿ ರೂ. ವಾಪಸ್‌: ನೀಡಲಾಗಿದ್ದ ಸಾಲದ ಮೊತ್ತದ ಪೈಕಿ 700 ಕೋಟಿ ರೂ.ಮೊತ್ತವನ್ನು ಈ ಕಂಪೆನಿಗಳು ವಸೂಲು ಮಾಡಿಕೊಂಡಿವೆ. ಬಡ್ಡಿಯ ಮೊತ್ತ, ಪರಿಷ್ಕರಣಾ ಶುಲ್ಕದ ಹೆಸರಿನಲ್ಲಿ ಈ ಮೊತ್ತ ವಾಪಸಾಗಿದೆ. ಜತೆಗೆ ಈ ವಹಿವಾಟು ನಡೆಸಲು ಆರ್‌ಬಿಐನಿಂದ ಪರವಾನಗಿಯನ್ನು ಪಡೆದೇ ಇರಲಿಲ್ಲ. ಫಿನ್‌ಟೆಕ್‌ ಕಂಪೆನಿಗಳು ಮತ್ತು ಎನ್‌ಬಿಎಫ್ಸಿಗಳು ಜತೆಗೂಡಿ ಸಾಲ ನೀಡುತ್ತಿದ್ದವು. ಮೊಬೈಲ್‌ ಆ್ಯಪ್‌ ಮೂಲಕ ನೀಡಲಾಗುತ್ತಿದ್ದ ಸಾಲಕ್ಕೆ ಎನ್‌ಬಿಎಫ್ಸಿಗಳು ಶೇ.0.5 ಬಡ್ಡಿ ವಿಧಿಸುತ್ತಿದ್ದವು. ಹಣ ನೀಡುವ ಮತ್ತು ವಸೂಲು ಜಾಲದಲ್ಲಿ ಕೆಲವೊಂದು ಆನ್‌ಲೈನ್‌ ಪಾವತಿ ಕಂಪೆನಿಗಳೂ ಭಾಗಿಯಾಗಿರುವ ಸಾಧ್ಯತೆ ಇದೆ ಎಂದು ಇ.ಡಿ. ತನಿಖೆಯಿಂದ ಗೊತ್ತಾಗಿದೆ.

ಈ ಉದ್ದೇಶ ದಿಂದಲೇ ಕೆಲವೊಂದು ಕಂಪೆನಿಗಳ ಮುಖ್ಯಸ್ಥರನ್ನು ಫೆಬ್ರವರಿಯಲ್ಲಿ ಇ,ಡಿ.ಕರೆಯಿಸಿಕೊಂಡು ಹೇಳಿಕೆ ದಾಖಲು ಮಾಡಿ ಕೊಂಡಿತ್ತು ಎಂದು “ದ ಇಕನಾಮಿಕ್‌ ಟೈಮ್ಸ್‌’ ವರದಿ ಮಾಡಿದೆ.

ಟಾಪ್ ನ್ಯೂಸ್

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.