ED; ದಿಲ್ಲಿ ಲಿಕ್ಕರ್ ಕೇಸ್ ಡೀಲ್ಗೆ ಕೆಸಿಆರ್ ಪುತ್ರಿ ಕವಿತಾ ಸಂಚು
100 ಕೋಟಿ ಲಂಚ, ಕೇಜ್ರಿ, ಮನೀಷ್ ಜತೆ ಶಾಮೀಲು
Team Udayavani, Mar 19, 2024, 6:10 AM IST
ಹೊಸದಿಲ್ಲಿ: ಸದ್ಯ ರದ್ದಾಗಿರುವ ದಿಲ್ಲಿ ಅಬಕಾರಿ ನೀತಿ ಹಗರಣದಲ್ಲಿ ತೆಲಂ ಗಾಣದ ಮಾಜಿ ಸಿಎಂ ಕೆ.ಚಂದ್ರಶೇಖರ ರಾವ್ ಪುತ್ರಿ ಕೆ.ಕವಿತಾ ಅವರೇ ಸಂಚು ರೂಪಿಸಿದ್ದಾರೆ. ಜತೆಗೆ ಆಪ್ಮುಖ್ಯಸ್ಥ ಅರವಿಂದ ಕೇಜ್ರಿವಾಲ್, ಮನೀಶ್ ಸಿಸೋಡಿಯಾಗೆ 100 ಕೋಟಿ ರೂ. ನೀಡು ವಲ್ಲಿ ಪ್ರಮುಖ ಪಾತ್ರ ವಹಿಸಿ ದ್ದಾರೆ ಎಂದು ಜಾರಿ ನಿರ್ದೇ ಶನಾಲ ಯ (ಇ.ಡಿ.) ಸೋಮವಾರ ಹೇಳಿದೆ.
ಕವಿತಾ ಬಂಧನದ ಬಳಿಕ ಮೊದಲ ಬಾರಿ ಹೇಳಿಕೆ ನೀಡಿರುವ ಇ.ಡಿ., ಸಿಎಂ ಕೇಜ್ರಿವಾಲ್ ಹಾಗೂ ಮನೀಶ್ ಅವ ರನ್ನು ಕವಿತಾ ಸಂಚಿನಲ್ಲಿ ಭಾಗಿ ಮಾಡಿ ದ್ದರು. ಈ ಮೂಲಕ ತಮಗೆ ಬೇಕಾ ದವರಿಗೆ ಮದ್ಯ ಮಾರಾಟದ ಪರ ವಾನಿಗೆ ಕೊಡಿಸಿದ್ದಲ್ಲದೆ ಇದಕ್ಕೆ ಪ್ರತಿ ಯಾಗಿ ದಿಲ್ಲಿ ಸರಕಾರಕ್ಕೆ ನೀಡಲಾದ 100 ಕೋಟಿ ರೂ. ಲಂಚದಲ್ಲಿ ನೇರ ವಾಗಿ ಪಾತ್ರ ವಹಿಸಿದ್ದರು ಎಂದಿದೆ. ಈ ಮೊದಲು ಮಾತನಾಡಿದ್ದ ಕವಿತಾ, ನಾನು ತಪ್ಪು ಮಾಡಿಲ್ಲ ಎಂದಿದ್ದರು.
ಬಂಧನ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಕವಿತಾ
ದಿಲ್ಲಿ ಅಬಕಾರಿ ನೀತಿ ಪ್ರಕರಣ ದಲ್ಲಿ ತಮ್ಮ ಬಂಧನವನ್ನು ಪ್ರಶ್ನಿಸಿ ಕವಿತಾ ಸುಪ್ರೀಂ ಮೆಟ್ಟಿ ರೇಲಿದ್ದಾರೆ. ಸೋದರ ಕೆ.ಟಿ. ರಾಮ ರಾವ್ರನ್ನು ಭೇಟಿ ಮಾಡಿದ ಬಳಿಕ ಈ ಬೆಳವಣಿಗೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕವಿತಾರನ್ನು ಶುಕ್ರವಾರ ಬಂಧಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ