ರೈಲ್ವೇ ಹೊಟೇಲ್ ಹಗರಣ: ಲಾಲು, ಕುಟುಂಬದವರ ವಿರುದ್ಧ ED ಕೇಸ್
Team Udayavani, Jul 27, 2017, 4:23 PM IST
ರಾಂಚಿ : ರೈಲ್ವೆ ಹೊಟೇಲ್ ಅಲಾಟ್ಮೆಂಟ್ ಭ್ರಷ್ಟಾಚಾರ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಇಂದು ಗುರುವಾರ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಹಣ ದುರುಪಯೋಗದ ಕೇಸನ್ನು ದಾಖಲಿಸಿಕೊಂಡಿದ್ದು ಇದು ಆರ್ಜೆಡಿಗೆ ಒದಗಿರುವ ಭಾರೀ ದೊಡ್ಡ ಹೊಡೆತವೆಂದು ತಿಳಿಯಲಾಗಿದೆ.
ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರದ ಆಡಳಿತೆಯ ವೇಳೆ ನಡೆದಿರುವ ಭ್ರಷ್ಟಾಚಾರದ ಪ್ರಕರಣ ಇದಾಗಿದೆ ಎಂದು ಪಿಟಿಐ ಹೇಳಿದೆ.
ಬಿಹಾರದಲ್ಲಿನ ಮಹಾ ಘಟ ಬಂಧನದ ಸರಕಾರದಲ್ಲಿ ಮುಖ್ಯಮಂತ್ರಿ ಹುದ್ದೆಗೆ ನಿನ್ನೆ ಬುಧವಾರ ಹಠಾತ್ ರಾಜೀನಾಮೆ ನೀಡಿ ಇಂದು ಗುರುವಾರ ಜೆಡಿಯು-ಬಿಜೆಪಿ ಮೈತ್ರಿಕೂಟದ ನೂತನ ಸರಕಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿದ ದಿನವೇ ಲಾಲು ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಜಾರಿ ನಿರ್ದೇಶನಾಲಯ ಭ್ರಷ್ಟಾಚಾರದ ಕೇಸನ್ನು ದಾಖಲಿಸಿಕೊಂಡಿರುವುದು ಕಾಕತಾಳೀಯವಾಗಿದೆ.
“ನನ್ನ ಹಾಗೂ ನನ್ನ ಕುಟುಂಬ ಸದಸ್ಯರ ವಿರುದ್ಧ ಭ್ರಷ್ಟಾಚಾರ ಕೇಸುಗಳನ್ನು ದಾಖಲಿಸುವಂತೆ ಮಾಡುವಲ್ಲಿ ಮತ್ತು ಸ್ವಂತ ಲಾಭದಾಸೆಗಾಗಿ ನಿತೀಶ್ ಕುಮಾರ್ ಅವರು ಬಿಜೆಪಿ ಜತೆ ಕೈಜೋಡಿಸಿದ್ದಾರೆ ಎಂದು ಕೋಪೋದ್ರಿಕ್ತ ಲಾಲು ಪ್ರಸಾದ್ ಯಾದವ್ ಗುಡುಗಿದ್ದಾರೆ.
“ನಿತೀಶ್ ಕುಮಾರ್ ಅವರು ಬಿಹಾರದ ಜನರಿಗೆ ದ್ರೋಹ ಬಗೆದಿದ್ದರೆ. ಸಿಬಿಐ ನನ್ನ ಮತ್ತು ನನ್ನ ಕುಟುಂಬ ಸದಸ್ಯರ ವಿರುದ್ಧ ಭ್ರಷ್ಟಾಚಾರದ ಕೇಸುಗಳನ್ನು ಹಾಕುವುದಕ್ಕೆ ನಿತೀಶ್ ಬಿಜೆಪಿ ಜತೆ ಸೇರಿಕೊಂಡಿದ್ದಾರೆ’ ಎಂದು ಲಾಲು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
MUST WATCH
ಹೊಸ ಸೇರ್ಪಡೆ
ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ