ಉಪಾಹಾರಕ್ಕೂ ಒತ್ತು: ಹೊಸ ಶಿಕ್ಷಣ ನೀತಿಯಲ್ಲಿ ಉಲ್ಲೇಖ
Team Udayavani, Aug 3, 2020, 6:50 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಕಲಿಯುವ ಮಕ್ಕಳಿಗೆ ಪೌಷ್ಟಿಕಾಂಶ ಸಮೃದ್ಧ ಆಹಾರವನ್ನು ಒದಗಿಸಿದರೆ ಉತ್ತಮ ಎಂಬುದು ಹೊಸ ಶಿಕ್ಷಣ ನೀತಿಯ ಪ್ರಮುಖ ಅಂಶಗಳಲ್ಲಿ ಒಂದು.
ಸದ್ಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿದೆ.
ಇದರ ಜತೆಗೆ ಬೆಳಗ್ಗಿನ ಉಪಾಹಾರವನ್ನೂ ನೀಡಿದರೆ ಕಲಿಕಾ ಸಾಮರ್ಥ್ಯ ಹೆಚ್ಚುತ್ತದೆ ಎಂದು ಶಿಕ್ಷಣ ನೀತಿಯ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಉಪಾಹಾರವೇಕೆ?
ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಬೆಳಗ್ಗಿನ ಉಪಾಹಾರ ಕೊಟ್ಟರೆ ಮಕ್ಕಳು ಪಾಠವನ್ನು ಚೆನ್ನಾಗಿ ಅರ್ಥೈಸಿಕೊಳ್ಳುತ್ತಾರೆ. ಬಿಸಿಯೂಟಕ್ಕೆ ಪೂರಕವಾಗಿ ಇದನ್ನೂ ನೀಡಬಹುದು ಎಂದು ವರದಿ ಅಭಿಪ್ರಾಯಪಟ್ಟಿದೆ.
ಪೌಷ್ಟಿಕಾಂಶಯುಕ್ತ ಆಹಾರದ ಮಹತ್ವದ ಬಗ್ಗೆಯೂ ಈ ವರದಿಯಲ್ಲಿ ಉಲ್ಲೇಖೀಸಲಾಗಿದೆ. ಮಕ್ಕಳು ಅನಾರೋಗ್ಯಕ್ಕೀಡಾಗಿದ್ದರೆ, ಪೌಷ್ಟಿಕಾಂಶ ಕೊರತೆಯಿಂದ ಬಳಲುತ್ತಿದ್ದರೆ ಅವರ ಕಲಿಕೆ ಸಾಮರ್ಥ್ಯ ಕಡಿಮೆ ಇರುತ್ತದೆ. ಹೀಗಾಗಿ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರ ಅಗತ್ಯ. ಜತೆಗೆ ಶಾಲಾ ಕಲಿಕೆಯಲ್ಲಿ ತರಬೇತಾದ ಸಾಮಾಜಿಕ ಕಾರ್ಯಕರ್ತರು, ಆಪ್ತಸಮಾಲೋಚಕರು ಮತ್ತು ಸಮುದಾಯವೂ ಒಳಗೊಳ್ಳುವಂತೆ ಮಾಡ ಬೇಕು ಎಂದು ವರದಿ ತಿಳಿಸಿದೆ.
ನೆಲಗಡಲೆ, ಕಡಲೆ ನೀಡಿ
ಬೆಳಗ್ಗೆ ಬಿಸಿ ಉಪಾಹಾರ ನೀಡಲು ಸಾಧ್ಯವಾಗದಿದ್ದಲ್ಲಿ ನೆಲಗಡಲೆ ಅಥವಾ ಕಡಲೆ ನೀಡಬಹುದು. ಬೆಲ್ಲ ಯಾ ಸ್ಥಳೀಯ ಹಣ್ಣುಗಳನ್ನು ಮಿಶ್ರ ಮಾಡಿ ನೀಡಬಹುದು ಎಂದು ವರದಿ ತಿಳಿಸಿದೆ. ಮಕ್ಕಳ ಆರೋಗ್ಯ ಪರೀಕ್ಷಿಸಬೇಕು. ಅವರು ಉತ್ತಮ ರೋಗ ನಿರೋಧಕ ಶಕ್ತಿ ಹೊಂದಿರಬೇಕು, ಹೆಲ್ತ್ ಕಾರ್ಡ್ ನೀಡಿ ಆರೋಗ್ಯದ ಮೇಲೆ ನಿಗಾ ಇರಿಸ ಬೇಕು ಎಂದೂ ವರದಿ ಹೇಳಿದೆ.
ಪೂರ್ವ ಪ್ರಾಥಮಿಕಕ್ಕೂ ಬಿಸಿಯೂಟ ಕೊಡಿ
ಸದ್ಯ ಬಿಸಿಯೂಟ 1ರಿಂದ 8ನೇ ತರಗತಿವರೆಗೆ ಮಾತ್ರ ಇದೆ. ಮುಂದೆ 5 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೂ ಒದಗಿಸಲು ವರದಿ ಶಿಫಾರಸು ನೀಡಿದೆ. ಈ ವಯೋಹಂತ ಮಹತ್ವದ್ದಾಗಿದ್ದು, ಮಧ್ಯಾಹ್ನದ ಬಿಸಿಯೂಟವನ್ನು ಇಲ್ಲಿಗೂ ವಿಸ್ತರಣೆ ಮಾಡಬಹುದಾಗಿದೆ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?