ಕಚ್ಚಾವಸ್ತುಗಳು ದುಬಾರಿ: ಜನವರಿಯಿಂದ ಮಾರುತಿ ಸುಜುಕಿ ವಾಹನಗಳ ಬೆಲೆ ಹೆಚ್ಚಳ ಸಾಧ್ಯತೆ!
Team Udayavani, Dec 10, 2020, 4:36 PM IST
ಹೊಸದಿಲ್ಲಿ: ದೇಶದ ಕಾರು ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿರುವ ಮಾರುತಿ ಸುಜುಕಿ ತನ್ನ ಎಲ್ಲ ವಿಧದ ಕಾರುಗಳ ದರವನ್ನು ಜನವರಿಯಿಂದ ಹೆಚ್ಚಿಸಲಿದೆ. ಕಚ್ಚಾ ವಸ್ತುಗಳ ಬೆಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಸ್ಥೆಯು ಈ ನಿರ್ಧಾರಕ್ಕೆ ಬಂದಿದೆ. ಕಳೆದ ಒಂದು ವರ್ಷದಿಂದ ಕಚ್ಚಾ ವಸ್ತುಗಳ ಬೆಲೆ ನಿರಂತರವಾಗಿ ಹೆಚ್ಚುತ್ತಿದೆ.
ಕಚ್ಚಾ ವಸ್ತುಗಳ ಬೆಲೆ ಹೆಚ್ಚುತ್ತಿರುವ ಕಾರಣ ಕಾರು ತಯಾರಿಕೆಗೆ ಸಂಸ್ಥೆ ಹೆಚ್ಚು ಖರ್ಚು ಮಾಡಬೇಕಾಗಿದೆ. ಹೀಗಾಗಿ ಇದು ಕಾರುಗಳ ಬೆಲೆಯ ಮೇಲೆ ಪರಿಣಾಮ ಬೀರುತ್ತಿದೆ. ಹೆಚ್ಚುತ್ತಿರುವ ಇನ್ಪುಟ್ ವೆಚ್ಚದಿಂದಾಗಿ ಕಾರಿನ ದರವನ್ನು ಹೆಚ್ಚಳ ಮಾಡಬೇಕಾಗಿದ್ದು ಈ ವೆಚ್ಚವನ್ನು ಗ್ರಾಹಕರು ಭರಿಸಬೇಕು ಎಂದು ಸಂಸ್ಥೆ ಹೇಳಿದೆ.
ಪ್ರಸ್ತುತ ಮಾರುತಿ ಸುಜುಕಿ ಆಲ್ಟೋದಂತಹ ಸಣ್ಣ ಕಾರುಗಳು ಸೇರಿದಂತೆ ಅನಂತರದ ದೊಡ್ಡ ಕಾರುಗಳ ದರಗಳು ಹೆಚ್ಚಾಗಲಿವೆ. ಕೋವಿಡ್ -19ರ ಬಳಿಕ ಕಾರು ಕಂಪನಿಗಳು ಚೇತರಿಸಿಕೊಳ್ಳುತ್ತಿರುವ ಸಮಯದಲ್ಲಿ ಕಂಪನಿಯು ಈ ನಿರ್ಧಾರಕ್ಕೆ ಬಂದಿದೆ. ದೇಶೀಯ ಕಾರುಗಳ ಮಾರಾಟವು ನವೆಂಬರ್ನಲ್ಲಿ ಶೇ. 2.4ರಷ್ಟು ಕುಸಿದಿದೆ. ಇದು ಈ ವರ್ಷ ಒಟ್ಟು 1.35 ಲಕ್ಷ ಕಾರುಗಳನ್ನು ಮಾರಾಟ ಮಾಡಿತ್ತು. ಆದರೆ ಕಳೆದ ವರ್ಷ ಇದೇ ಅವಧಿಯಲ್ಲಿ 1.39 ಲಕ್ಷ ಕಾರುಗಳನ್ನು ಮಾರಾಟ ಮಾಡಿದೆ.
ಹಬ್ಬದ ಋತುವಿನ ಬಳಿಕ ಕಾರುಗಳ ಮಾರಾಟ ನಿರೀಕ್ಷಿತ ಮಟ್ಟ ತಲುಪಿಲ್ಲ ಎಂದು ಭಾರತದ ಅತಿದೊಡ್ಡ ಕಾರು ತಯಾರಕ ಸಂಸ್ಥೆ ಮಾರುತಿ ಸುಜುಕಿ ಇಂಡಿಯಾ ಹೇಳಿದೆ. ಮುಂದಿನ ದಿನಗಳಲ್ಲಿ ಆರ್ಥಿಕತೆಯು ಸುಧಾರಿಸಿದಂತೆ ಮತ್ತು ಬೆಳವಣಿಗೆಯ ವೇಗ ಹೆಚ್ಚಾದಂತೆ, ಕಾರುಗಳ ಮಾರಾಟವೂ ಸುಧಾರಿಸಲಿ ಎಂಬ ಆಶಾವಾದ ಇದೆ ಎಂದು ಸಂಸ್ಥೆ ಹೇಳಿದೆ.
ಡಿಸೆಂಬರ್ ತಿಂಗಳಿನಲ್ಲಿ ವಾಹನ ಮಾರಾಟ ವಲಯ ಚೇತರಿಯಾಗುವ ಸಾಧ್ಯತೆ ಇದೆ. ಫೆಡರೇಶನ್ ಆಫ್ ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಷನ್ ಪ್ರಕಾರ ಪ್ರಯಾಣಿಕರ ವಾಹನ ಚಿಲ್ಲರೆ ಮಾರಾಟವು ಈ ವರ್ಷದ ನವೆಂಬರ್ನಲ್ಲಿ ಶೇ. 4.17 ರಷ್ಟು ಹೆಚ್ಚಳ ಕಂಡಿದ್ದು, 2.91 ಲಕ್ಷ ತಲುಪಿದೆ. 2019 ರ ನವೆಂಬರ್ನಲ್ಲಿ 2 ಲಕ್ಷ 79 ಸಾವಿರ 365 ಯುನಿಟ್ಗಳು ಮಾರಾಟವಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ