ಕಾಶ್ಮೀರವನ್ನು100% ಇಸ್ಲಾಮಿಕ್ ರಾಜ್ಯ ಮಾಡಲು ಪ್ರಯತ್ನ : ರಾಹುಲ್ ಕೌಲ್ ಕಳವಳ

ಹೆಕ್ಕಿ ಹೆಕ್ಕಿ ಕೊಲ್ಲಲಾಗುತ್ತಿದೆ, ಕಾಶ್ಮೀರಿ ಹಿಂದೂಗಳಿಗೆ ನ್ಯಾಯ ಸಿಗುವುದು ಯಾವಾಗ ?

Team Udayavani, Jun 16, 2022, 1:21 PM IST

1-dsf-df

ಪಣಜಿ: ಜಿಹಾದಿ ಭಯೋತ್ಪಾದಕರಿಂದ ತಮ್ಮದೇ ದೇಶದಲ್ಲಿ ನಿರಾಶ್ರಿತರಾಗಿ 32 ವರ್ಷಗಳು ಕಳೆದಿವೆ, ಆದರೆ ಇಂದಿಗೂ ಕಾಶ್ಮೀರಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ಅವರ ಭೀಕರ ಹತ್ಯೆಯ ಸರಣಿಯು ಮುಂದುವರಿದಿದೆ. ಹಿಂದೂಗಳನ್ನು ಅಕ್ಷರಶಃ ಹೆಕ್ಕಿಹೆಕ್ಕಿ ಕೊಲ್ಲಲಾಗುತ್ತಿದೆ ಯೂಥ್ ಫಾರ್ ಪನೂನ ಕಾಶ್ಮೀರ’ನ ರಾಷ್ಟ್ರೀಯ ಅಧ್ಯಕ್ಷರಾದ ರಾಹುಲ್ ಕೌಲ್ ಹೇಳಿದ್ದಾರೆ.

ಗೋವಾ ಪೊಂಡಾದ ಶ್ರೀ ರಾಮನಾಥಿಯಲ್ಲಿ ನಡೆಯುತ್ತಿರುವ ದಶಮ ಹಿಂದೂ ರಾಷ್ಟ್ರ ಅಧಿವೇಶನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಕೆಲವು ತಿಂಗಳುಗಳಲ್ಲಿ ಕಾಶ್ಮೀರದಲ್ಲಿ 10 ಹಿಂದೂಗಳ ಹತ್ಯೆಯಾಗಿದೆ. ಇದರಿಂದಾಗಿ ಇಂದಿಗೂ ಹಿಂದೂಗಳು ಜೀವ ಮತ್ತು ಧರ್ಮದ ರಕ್ಷಣೆಗಾಗಿ ಕಾಶ್ಮೀರದಿಂದ ಪಲಾಯನ ಮಾಡಬೇಕಾಗುತ್ತಿದೆ. ಭಾರತದಲ್ಲಿ ಸಂವಿಧಾನ ಮತ್ತು ಕಾನೂನಿನ ರಾಜ್ಯವಿದ್ದರೂ ಇದು ಏಕೆ ನಿಲ್ಲಲಿಲ್ಲ ? ಕಲಮ್ 370 ರದ್ದಾದರೂ ಕಾಶ್ಮೀರವನ್ನು ಹಿಂದೂರಹಿತ ಮಾಡಿ ಶೇ. 100 ಇಸ್ಲಾಮಿಕ್ ರಾಜ್ಯ ಮಾಡಲು ಪ್ರಯತ್ನಿಸಲಾಗುತ್ತಿದೆ. ಕಾಶ್ಮೀರಿ ಹಿಂದೂಗಳ ಹತ್ಯೆಯು ಅವರ ನರಮೇಧವಾಗಿದೆ ಎಂಬುದು ಸರಕಾರ ಒಪ್ಪಿಕೊಳ್ಳಬೇಕು. ಹಿಂದೂಗಳು ಕಾಶ್ಮೀರಕ್ಕೆ ಮರಳುವುದು ಎಂದರೆ ಕೆಲವು ಲಕ್ಷ ಜನರ ಮರಳುವಿಕೆ ಅಲ್ಲ, ಆದರೆ ಭಾರತದ, ಭಾರತಪ್ರೇಮಿಗಳ ಮರಳುವಿಕೆಯಾಗಿದೆ. 32 ವರ್ಷಗಳ ನಂತರವೂ ಕಾಶ್ಮೀರಿ ಹಿಂದೂಗಳ ಹತ್ಯಾಸರಣಿ ಮತ್ತು ಸ್ಥಳಾಂತರ ಮುಂದುವರಿದರೆ, ಕಾಶ್ಮೀರಿ ಹಿಂದೂಗಳಿಗೆ ನ್ಯಾಯ ಸಿಗುವುದು ಯಾವಾಗ ? ಎಂದು ಕೇಂದ್ರ ಸರಕಾರವನ್ನು ಪ್ರಶ್ನಿಸಿದ್ದಾರೆ.

ಯೂಥ ಫಾರ್ ಪನೂನ್ ಕಾಶ್ಮೀರ್ ಇದರ ರಾಷ್ಟ್ರೀಯ ಉಪಾಧ್ಯಕ್ಷ  ರೋಹಿತ ಭಟ್  ಮಾತನಾಡಿ, ಕಾಶ್ಮೀರದಲ್ಲಿ ಹಿಂದೂಗಳನ್ನು ಹತ್ಯೆ ಮಾಡುತ್ತಿರುವ ಭಯೋತ್ಪಾದಕರ ವಿರುದ್ಧ ಸರಕಾರ ಕಠಿಣ ಸೇನಾ ಕಾರ್ಯಾಚರಣೆ ಕೈಗೊಳ್ಳಬೇಕು. ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್‍ನಂತಹ ಇತರ ಪ್ರತ್ಯೇಕತಾವಾದಿ ಮತ್ತು ಭಯೋತ್ಪಾದಕ ಸಂಘಟನೆಗಳನ್ನು ನಿಷೇಧಿಸಬೇಕು ಮತ್ತು ಅವುಗಳನ್ನು ಬುಡಸಮೇತ ಕಿತ್ತೊಗೆಯಬೇಕು. 7 ಲಕ್ಷ ನಿರಾಶ್ರಿತ ಕಾಶ್ಮೀರಿ ಹಿಂದೂಗಳು ಕಾಶ್ಮೀರಕ್ಕೆ ಮರಳಲು, ಝೇಲಂ ನದಿಯ ಪೂರ್ವ ಮತ್ತು ಉತ್ತರ ದಿಕ್ಕಿನಲ್ಲಿರುವ ಕಾಶ್ಮೀರ ಕಣಿವೆಯಲ್ಲಿ ಹಿಂದೂಗಳಿಗಾಗಿ ಪ್ರತ್ಯೇಕವಾದ ಕೇಂದ್ರಾಡಳಿತ ಪ್ರದೇಶ – ಪನೂನ್ ಕಾಶ್ಮೀರ ರಚಿಸಬೇಕು. ವಿಶ್ವಸಂಸ್ಥೆಯ ನರಮೇಧ ಕಾಯಿದೆಗೆ ಅನುಗುಣವಾಗಿ ಭಾರತ ಸರಕಾರವು ಕ್ರಮ ಕೈಗೊಳ್ಳಬೇಕು. ಕಾಶ್ಮೀರಿ ನರಮೇಧ ಮತ್ತು ದೌರ್ಜನ್ಯ ತಡೆ ಕಾಯಿದೆ 2020 ಅನ್ನು ಸಂಸತ್ತು ಅಂಗೀಕರಿಸಬೇಕು ಎಂದು ಹೇಳಿದರು.

ಈ ವೇಳೆ ತಮಿಳುನಾಡಿನ ಹಿಂದು ಮಕ್ಕಳ ಕತ್ಛಿಯ ಸಂಸ್ಥಾಪಕ ಅಧ್ಯಕ್ಷ  ಅರ್ಜುನ ಸಂಪಥ ಮಾತನಾಡುತ್ತಾ, ಪ್ರತಿಯೊಬ್ಬ ಕಾಶ್ಮೀರಿ ಹಿಂದೂಗಳಿಗೂ ಸಶಸ್ತ್ರ ರಕ್ಷಣೆ ನೀಡಬೇಕು. ಕೇಂದ್ರ ಸರಕಾರ ಕೂಡಲೇ ಪಾಕ್ ಆಕ್ರಮಿತ ಕಾಶ್ಮೀರವನ್ನು ತನ್ನ ಹಿಡಿತಕ್ಕೆ ತೆಗೆದುಕೊಂಡು ಭಾರತಕ್ಕೆ ಸೇರಿಸಬೇಕು ಎಂದು ಹೇಳಿದರು. ಈ ವೇಳೆ ಸಮಿತಿಯ  ರಮೇಶ ಶಿಂದೆ ಇವರು ಮಾತನಾಡುತ್ತಾ, ಕಾಶ್ಮೀರಿ ಹಿಂದೂಗಳು ಮತ್ತೊಮ್ಮೆ ತಮ್ಮ ದೇಶಕ್ಕೆ ಸ್ಥಳಾಂತರಗೊಳ್ಳುವ ಮುಜುಗರದ ಪ್ರಮೇಯ ಬಂದಿರುವುದು ಇದು ಭಯೋತ್ಪಾದಕರು ಮತ್ತು ಪ್ರತ್ಯೇಕತಾವಾದಿಗಳಿಂದ ಕೇಂದ್ರ ಸರಕಾರಕ್ಕೆ ಒಡ್ಡಿರುವ ಸವಾಲಾಗಿದೆ. ಇಂದು ಭಾರತದಲ್ಲಿ ಇಂತಹ ಕಾಶ್ಮೀರ ಸೃಷ್ಟಿಯಾಗದೇ ಇರಲು, ಹಿಂದೂಗಳು ಸರ್ವಧರ್ಮಸಮಭಾವ ಮತ್ತು ಸೆಕ್ಯುಲರವಾದ ಎಂಬ ಭ್ರಮೆಯ ಕಲ್ಪನೆಯಿಂದ ಹೊರಬಂದು ಹಿಂದೂ ಸಮಾಜವನ್ನು ರಕ್ಷಿಸಲು ತಮ್ಮನ್ನು ತಾವು ಸಿದ್ಧಪಡಿಸಬೇಕು ಎಂದರು.

ವ್ಯಾಸಪೀಠದ ಮೇಲೆ ಯೂಥ ಫಾರ್ ಪನೂನ್  ಕಾಶ್ಮೀರದ ರಾಷ್ಟ್ರೀಯ ಉಪಾಧ್ಯಕ್ಷ  ರೋಹಿತ ಭಟ್, ತಮಿಳುನಾಡಿನ ಹಿಂದೂ ಮಕ್ಕಳ ಕತ್ಛಿಯ ಸಂಸ್ಥಾಪಕ ಅಧ್ಯಕ್ಷ ಅರ್ಜುನ ಸಂಪಥ ಮತ್ತು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ರಮೇಶ ಶಿಂದೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.