ಹಳಿ ತಪ್ಪಿದ ಮಹಾಕೌಶಲ್ ಎಕ್ಸ್ಪ್ರೆಸ್ ರೈಲು:22 ಪ್ರಯಾಣಿಕರಿಗೆ ಗಾಯ
Team Udayavani, Mar 30, 2017, 8:43 AM IST
ಹೊಸದಿಲ್ಲಿ: ಉತ್ತರ ಪ್ರದೇಶದ ಮಹೋಬಾದ ಕುಲಾಪಹರ್ ಎಂಬಲ್ಲಿ ಮಹಾಕೌಶಲ್ ಎಕ್ಸ್ಪ್ರೆಸ್ ರೈಲು ಗುರುವಾರ ನಸುಕಿನ 2.07 ರ ವೇಳೆ ಹಳಿ ತಪ್ಪಿದ್ದು, ಅವಘಡದಲ್ಲಿ 22 ಪ್ರಯಾಣಿಕರು ಗಾಯಗೊಂಡಿರುವುದಾಗಿ ವರದಿಯಾಗಿದೆ.
ರೈಲಿನ ಎಸಿ ಬೋಗಿ ಗಳು ಸೇರಿ 8 ಬೋಗಿಗಳು ಹಳಿ ತಪ್ಪಿದ್ದು ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯ ಆರೋಗ್ಯ ಸಚಿವ ಸಿದ್ಧಾರ್ಥ್ ನಾಥ್ ಸಿಂಗ್ ಅವರಿಗೆ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಳ್ಳುವಂತೆ ಹೇಳಿದ್ದಾರೆ. ರೈಲ್ವೇ ಅಧಿಕಾರಿಗಳು, ಜಿಲ್ಲಾ ಮ್ಯಾಜಿಸ್ಟ್ರೇಟ್ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಕ್ಕೆ ಮಾರ್ಗದರ್ಶನ ನೀಡುತ್ತಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್