ಸಿಯಾಚಿನ್ ಹಿಮಪಾತಕ್ಕೆ 4 ಯೋಧರು ಮತ್ತು ಇಬ್ಬರು ನಾಗರಿಕರು ಸಾವು
Team Udayavani, Nov 18, 2019, 10:25 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದೆಹಲಿ: ವಿಶ್ವದ ಅತೀ ಎತ್ತರದ ಸೇನಾನೆಲೆ ಸಿಯಾಚಿನ್ ನಲ್ಲಿ ಭಾರೀ ಹಿಮಪಾತವಾಗುತ್ತಿದೆ. ಇದರ ಪರಿಣಾಮ ಈ ಭಾಗದಲ್ಲಿದ್ದ ಭಾರತೀಯ ಸೇನಾನೆಲೆ ಅಪಾಯಕ್ಕೊಳಗಾಗಿದೆ ಮತ್ತು ಸುಮಾರು ಎಂಟು ಜನ ಭಾರತೀಯ ಯೋಧರು ಈ ಹಿಮಪಾತದಲ್ಲಿ ಸಿಲುಕಿದ್ದಾರೆ ಹಾಗೂ ಇವರಲ್ಲಿ ನಾಲ್ವರು ಯೋಧರು ಮತ್ತು ಇಬ್ಬರು ನಾಗರಿಕರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸೋಮವಾರ 3.30ರ ಸುಮಾರಿಗೆ ಈ ಘಟನೆ ನಡೆದಿರುವ ಕುರಿತು ಮಾಹಿತಿ ಲಭಿಸಿದೆ.
ಸಮುದ್ರ ಮಟ್ಟದಿಂದ ಸುಮಾರು 18,000 ಅಡಿ ಎತ್ತರದಲ್ಲಿರುವ ಉತ್ತರ ಗ್ಲೇಸಿಯರ್ ಭಾಗದಲ್ಲಿ ಭಾರೀ ಪ್ರಮಾಣದ ಹಿಮಪಾತ ಸಂಭವಿಸಿರುವುದಾಗಿ ಸೇನಾ ಮೂಲಗಳಿಂದ ತಿಳಿದುಬಂದಿದೆ. ಭಾರೀ ಹಿಮದಲ್ಲಿ ಸಿಲುಕಿಕೊಂಡಿರುವ ಯೋಧರ ರಕ್ಷಣೆಗಾಗಿ ತುರ್ತು ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.
ಭಾರತೀಯ ಸೇನೆಯ ಎಂಟು ಜನ ಯೋಧರು ತಮ್ಮ ದೈನಂದಿನ ಗಸ್ತು ತಿರುಗಾಟದಲ್ಲಿದ್ದ ಸಂದರ್ಭದಲ್ಲಿ ಹಿಮಪಾತ ಉಂಟಾದ ಕಾರಣ ಹಿಮದ ಅಡಿಯಲ್ಲಿ ಸಿಲುಕಿಕೊಂಡರು ಎಂಬ ಮಾಹಿತಿ ಸೇನಾ ಮೂಲಗಳಿಂದ ಲಭ್ಯವಾಗಿದೆ.
2016ರ ಫೆಬ್ರವರಿ ತಿಂಗಳಿನಲ್ಲಿ ಇದೇ ಸಿಯಾಚಿನ್ ಗ್ಲೇಸಿಯರ್ ಭಾಗದಲ್ಲಿ ದೊಡ್ಡ ಹಿಮ ಬಂಡೆಯೊಂದು ಉರುಳಿದ ಪರಿಣಾಮ ಸುಮಾರು 10 ಜನ ಭಾರತೀಯ ಯೋಧರು 35 ಅಡಿ ಹಿಮದಲ್ಲಿ ಸಿಲುಕಿಕೊಂಡಿದ್ದರು. ಇವರ ರಕ್ಷಣೆಗಾಗಿ 150 ಮಂದಿಯ ವಿಶೇಷ ತಂಡವೊಂದು ಸತತ ಕಾರ್ಯಾಚರಣೆಗೆ ಇಳಿದಿತ್ತು.
ಈ ಸಂದರ್ಭದಲ್ಲಿ ಕರ್ನಾಟಕದವರಾಗಿದ್ದ ಲ್ಯಾನ್ಸ್ ನಾಯಕ್ ಹನುಮಂತಪ್ಪ ಅವರು ದಪ್ಪ ಹಿಮಗಡ್ಡೆಯ ಅಡಿಯಲ್ಲಿ ಜೀವಂತ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣವೇ ಅವರನ್ನು ರಕ್ಷಣಾ ತಂಡ ಹಿಮದಡಿಯಿಂದ ಮೆಲೆತ್ತಿ ಆಸ್ಪತ್ರೆಗೆ ದಾಖಲಿಸಿತ್ತು. ಆದರೆ ಮೂರು ದಿನಗಳ ಬಳಿಕ ಲ್ಯಾನ್ಸ್ ನಾಯಕ್ ಹನುಮಂತಪ್ಪ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಮತ್ತು ಆ ಹಿಮಪಾತದಲ್ಲಿ ಜೀವಂತ ಸಿಕ್ಕಿದ್ದ ಏಕೈಕ ಯೋಧ ಅವರಾಗಿದ್ದರು.
BREAKING: Very sad news. Four Army personnel and 2 civilian porters dead in the avalanche in Siachen. Remaining receiving treatment, critical. Statement from the Army: pic.twitter.com/BN2Vry3q8e
— Shiv Aroor (@ShivAroor) November 18, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ