Rajkot; ಸಾಮೂಹಿಕ ಅತ್ಯಾಚಾರಗೈದು 8 ವರ್ಷದ ಬಾಲಕಿಯ ಬರ್ಬರ ಹತ್ಯೆ
ಪೊದೆಯಲ್ಲಿ ಹೇಯ ಕೃತ್ಯವೆಸಗಿ ಕಲ್ಲಿನಿಂದ ತಲೆಗೆ ಜಜ್ಜಿದ ಕಾಮಾಂಧ ರಾಕ್ಷಸರು
Team Udayavani, Oct 9, 2023, 9:04 PM IST
ರಾಜ್ ಕೋಟ್(ಗುಜರಾತ್) : ನಗರದಲ್ಲಿ ಎಂಟು ವರ್ಷದ ಬಾಲಕಿಯನ್ನು ಮೂವರು ಕಾಮುಕರು ಅಪಹರಿಸಿ, ಸಾಮೂಹಿಕವಾಗಿ ಅತ್ಯಾಚಾರ ಎಸಗಿ ಕಲ್ಲಿನಿಂದ ಹೊಡೆದು ಬರ್ಬರವಾಗಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಬಾಲಕಿಯ ತಂದೆಗೆ ಪರಿಚಿತರೇ ಆಗಿರುವ ಮೂವರು ಆರೋಪಿಗಳನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾಣೆಯಾದ ಒಂದು ದಿನದ ನಂತರ ಅಕ್ಟೋಬರ್ 7 ರಂದು ನಗರದ ರೈಲ್ವೆ ನಿಲ್ದಾಣದ ಹಿಂಭಾಗದ ಪ್ರತ್ಯೇಕ ಸ್ಥಳದಲ್ಲಿ ಮಗುವಿನ ಶವ ಪತ್ತೆಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳು ಮತ್ತು ಗುಪ್ತಚರ ಇನ್ಪುಟ್ಗಳ ಆಧಾರದ ಮೇಲೆ ನಗರ ಅಪರಾಧ ವಿಭಾಗವು ಆರೋಪಿಗಳ ಮೇಲೆ ಶೋಧ ಕಾರ್ಯ ನಡೆಸಿ ಬಂಧಿಸಿತು. ಬಂಧಿತ ಮೂವರು ಸಂತ್ರಸ್ತೆಯ ತಂದೆಗೆ ಪರಿಚಿತರು ಎಂದು ಹೆಚ್ಚುವರಿ ಪೊಲೀಸ್ ಕಮಿಷನರ್ ವಿಧಿ ಚೌಧರಿ ತಿಳಿಸಿದ್ದಾರೆ.
“ಆರೋಪಿಗಳು ಬಾಲಕಿಯ ತಲೆಗೆ ಕಲ್ಲಿನಿಂದ ಹೊಡೆದು ಅತ್ಯಾಚಾರ ಮತ್ತು ಕೊಲೆ ಮಾಡಿದ್ದಾರೆ. ಆರೋಪಿಗಳು ಬಾಲಕಿಯಯ ತಂದೆಗೆ ತಿಳಿಯುತ್ತದೆ ಎಂಬ ಕಾರಣಕ್ಕೆ, ತಮ್ಮ ಕುಕೃತ್ಯದ ಬಗ್ಗೆ ಹೇಳಬಹುದೆಂದು ಅಂಜಿ ಕೊಂದಿದ್ದಾರೆ ಎಂದು ಚೌಧರಿ ಸುದ್ದಿಗಾರರಿಗೆ ತಿಳಿಸಿದರು.
ಶವ ಪತ್ತೆಯಾದ ನಂತರ ಇಬ್ಬರು ಆರೋಪಿಗಳು ಬಂಧನದ ಭೀತಿಯಿಂದ ನಗರದಿಂದ ಪರಾರಿಯಾಗಿದ್ದರು. ಸಿಟಿ ಕ್ರೈಂ ಬ್ರಾಂಚ್ ಬಿಡುಗಡೆ ಮಾಡಿದ ಬಿಡುಗಡೆಯ ಪ್ರಕಾರ, ಸಂತ್ರಸ್ತೆ ತನ್ನ ಮನೆಯಿಂದ ನಾಪತ್ತೆಯಾದ ರಾತ್ರಿ ಆರೋಪಿಗಳಲ್ಲಿ ಒಬ್ಬನೊಂದಿಗೆ ನಡೆದುಕೊಂಡು ಹೋಗುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಗಳು ತೋರಿಸಿವೆ. ಆಕೆಯನ್ನು ಆರೋಪಿಗಳು ಆಮಿಷವೊಡ್ಡಿ ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಅಲ್ಲಿ ಇತರರು ಸೇರಿಕೊಂಡು ಪೊದೆಯೊಳಗೆ ಕರೆದೊಯ್ದು ಅತ್ಯಾಚಾರವೆಸಗಿ, ದೊಡ್ಡ ಕಲ್ಲನ್ನು ಬಳಸಿ ಹತ್ಯೆದಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
MUST WATCH
ಹೊಸ ಸೇರ್ಪಡೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು