ದೂರದಲ್ಲಿದ್ದುಕೊಂಡೇ ಮತ ಚಲಾಯಿಸಿ!


Team Udayavani, Dec 30, 2022, 6:40 AM IST

tdy-10

ನವದೆಹಲಿ: ಚುನಾವಣಾ ಹಬ್ಬದಲ್ಲಿ ಮತದಾರರ ಭಾಗೀದಾರಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ  ಭಾರತದ ಚುನಾವಣಾ ಆಯೋಗ (ಇಸಿಐ) ಮಹತ್ವದ  ಹೆಜ್ಜೆಯಿಟ್ಟಿದೆ.

ದೇಶೀಯ ವಲಸೆ ಮತದಾರರು ದೂರದಲ್ಲೇ ಇದ್ದು ಹಕ್ಕು ಚಲಾಯಿಸಲು ಅವಕಾಶ ಕಲ್ಪಿಸುವಂಥ ರಿಮೋಟ್‌ ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷೀನ್‌(ಆರ್‌ವಿಎಂ)ನ ಮಾದರಿಯನ್ನು ಆಯೋಗ ಅಭಿವೃದ್ಧಿಪಡಿಸಿದೆ. ಜ.16ರಂದು ಇದರ ಪ್ರಾತ್ಯಕ್ಷಿಕೆ ನಡೆಯಲಿದ್ದು, ಅದಕ್ಕೆ ರಾಜಕೀಯ ನೇತಾರರನ್ನು ಆಹ್ವಾನಿಸಲಾಗಿದೆ.

ಸಂಬಂಧಪಟ್ಟವರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಇದನ್ನು ಅನುಷ್ಠಾನ ಮಾಡಲಾಗುತ್ತದೆ. ಅದು ಸಾಧ್ಯವಾದರೆ, ವಲಸೆ ಮತದಾರರು ಪ್ರತಿ ಚುನಾವಣೆ ವೇಳೆ ತಮ್ಮ ಹುಟ್ಟೂರಿಗೆ ತೆರಳಿಯೇ ಹಕ್ಕು ಚಲಾವಣೆ ಮಾಡಬೇಕಾಗಿಲ್ಲ. ತಾವಿರುವ ಸ್ಥಳದಿಂದಲೇ ಅವರು ಮತ ಚಲಾಯಿಸಬಹುದು.

ಪ್ರಸ್ತುತ ಇರುವಂಥ ವಿದ್ಯುನ್ಮಾನ ಮತಯಂತ್ರಗಳ ಆಧಾರದಲ್ಲೇ ಆರ್‌ವಿಎಂಗಳನ್ನು ಅಭಿವೃದ್ಧಿಪಡಿಸಲಾಗಿದ್ದು, ಇದನ್ನು ಇಂಟರ್ನೆಟ್‌ಗೆ ಸಂಪರ್ಕಿಸುವುದಿಲ್ಲ. ಆರ್‌ವಿಎಂ ಮಾದರಿಯ ಪ್ರಾತ್ಯಕ್ಷಿಕೆ ಮತ್ತು ಸಂಬಂಧಪಟ್ಟವರಿಂದ ಅಭಿಪ್ರಾಯಗಳನ್ನು ಪಡೆದ ಬಳಿಕ, “ದೂರದಲ್ಲಿದ್ದುಕೊಂಡೇ ಮತ ಚಲಾಯಿಸುವ’ ವ್ಯವಸ್ಥೆಯನ್ನು ಆಯೋಗ ಜಾರಿ ಮಾಡಲಿದೆ.

ಮುಂದಿನ ಪ್ರಕ್ರಿಯೆ?:

ಪ್ರಜಾಪ್ರಾತಿನಿಧ್ಯ ಕಾಯ್ದೆ, 1950 ಮತ್ತು 1951, ಚುನಾವಣೆ ನಡೆಸುವ ನಿಯಮಗಳು, 1961 ಮತ್ತು ಚುನಾವಣೆ ನೋಂದಣಿ ನಿಯಮಗಳು, 1960ಗೆ ತಿದ್ದುಪಡಿ ತಂದ ಬಳಿಕವೇ ಆರ್‌ವಿಎಂ ಅನ್ನು ಜಾರಿ ಮಾಡಲು ಸಾಧ್ಯ.

ಯಾರಿಗೆ ಅನುಕೂಲ?:

ದೂರದೂರಿಗೆ ಹೋಗಿ ಕೆಲಸ ಮಾಡುವ ಕಾರ್ಮಿಕರು, ಪದೇ ಪದೆ ವಾಸ ಬದಲಾಯಿಸುವ ಅನಿವಾರ್ಯತೆಗೆ ಸಿಲುಕಿದವರು, ಹುಟ್ಟೂರಿನ ಮತಪಟ್ಟಿಯಿಂದ ತಮ್ಮ ಹೆಸರು ಡಿಲೀಟ್‌ ಮಾಡಲು ಆಗದೇ ಇರುವವರಿಗೆ ಇದು ಅನುಕೂಲ ಕಲ್ಪಿಸಲಿದೆ.

ಇದೊಂದು ಅತ್ಯುತ್ತಮ ನಡೆ. ವಲಸೆ ಕಾರ್ಮಿಕರಿಗೆ ಹಕ್ಕು ಚಲಾವಣೆ ಸಮಸ್ಯೆಯು ದೀರ್ಘಾವಧಿಯಿಂದ ಇತ್ತು. ಅದಕ್ಕೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿರಲಿಲ್ಲ. ಈಗ ಚುನಾವಣಾ ಆಯೋಗ ಎಲೆಕ್ಟ್ರಾನಿಕ್‌ ಪರಿಹಾರವನ್ನೇ ಕಂಡುಹಿಡಿದಿದ್ದು, ಅದನ್ನು ಪ್ರಜಾಸತ್ತಾತ್ಮಕವಾಗಿ ಕಾರ್ಯರೂಪಕ್ಕೆ ತರುತ್ತಿರುವುದು ಶ್ಲಾಘನೀಯ. ಎಸ್‌.ವೈ.ಖುರೇಷಿ, ಮಾಜಿ ಮುಖ್ಯ ಚುನಾವಣಾ ಆಯುಕ್ತ

 

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.