ಪಕ್ಷದ ಆಡಳಿತ ನಿಯಂತ್ರಿಸುವ ಅಧಿಕಾರ ನನಗಿಲ್ಲ :ಸುಪ್ರೀಂಗೆ ಕೇಂದ್ರ ಚುನಾವಣಾ ಆಯೋಗ ಸ್ಪಷ್ಟನೆ
Team Udayavani, Apr 9, 2022, 10:00 PM IST
ನವದೆಹಲಿ: “ಚುನಾವಣೆಗೂ ಮುನ್ನ ಅಥವಾ ಚುನಾವಣೆಯ ನಂತರ ಯಾವುದೇ ರಾಜಕೀಯ ಪಕ್ಷ ನೀಡಿರುವ ಆಶ್ವಾಸನೆಗಳನ್ನು ಆ ಪಕ್ಷ ಅಧಿಕಾರಕ್ಕೆ ಬಂದಾಗ ಈಡೇರಿಸಲು ಮುಂದಾದರೆ ಅದನ್ನು ತಡೆಯುವ ಅಧಿಕಾರ ತನಗಿಲ್ಲ’ ಎಂದು ಕೇಂದ್ರ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಈ ಕುರಿತಂತೆ ಸುಪ್ರೀಂ ಕೋರ್ಟ್ಗೆ ಅಫಿಡವಿಟ್ ಸಲ್ಲಿಸಿರುವ ಆಯೋಗ, “ಯಾವುದೇ ರಾಜ್ಯದ ರಾಜಕೀಯ ಪಕ್ಷವು ಅಧಿಕಾರಕ್ಕೆ ಬಂದ ನಂತರ ತನ್ನ ಚುನಾವಣಾ ಆಶ್ವಾಸನೆಗಳಿಗೆ ಅನುಗುಣವಾಗಿ ಕೈಗೊಳ್ಳುವ ಕೆಲವು ಆರ್ಥಿಕ ನಿರ್ಧಾರಗಳನ್ನು ತಡೆಯುವ ಅಧಿಕಾರ ತನಗಿಲ್ಲ. ಆಯೋಗದ ಅಧಿಕಾರಕ್ಕೆ ಕುರಿತಾಗಿ ಸದ್ಯಕ್ಕಿರುವ ನಿಯಮಗಳಿಗೆ ತಿದ್ದುಪಡಿ ತಂದರೆ ಮಾತ್ರ ಆಯೋಗಕ್ಕೆ ಇಂಥ ಅಧಿಕಾರ ಸಿಗಲು ಸಾಧ್ಯ’ ಎಂದು ಹೇಳಿದೆ.
ಅಲ್ಲದೆ, ರಾಜಕೀಯ ಪಕ್ಷವು ಜಾರಿಗೊಳಿಸಲು ಮುಂದಾಗುವ ತನ್ನ ಆಶ್ವಾಸನೆಗಳು ಆಯಾ ರಾಜ್ಯದ ಹಣಕಾಸು ಪರಿಸ್ಥಿತಿಯ ಮೇಲೆ ಯಾವ ರೀತಿಯ ಪರಿಣಾಮ ಬೀರಬಹುದು ಎಂಬ ಬಗ್ಗೆ ಆ ರಾಜ್ಯದ ಮತದಾರರೇ ಅರ್ಥೈಸಬೇಕು ಎಂದು ಆಯೋಗ ತಿಳಿಸಿದೆ.
ಇದನ್ನೂ ಓದಿ :ವಿಜಯಪುರ : ಸಿಡಿಲು ಬಡಿದು ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತ ಸ್ಥಳದಲ್ಲೇ ಸಾವು
“ದೇಶದ ಚುನಾವಣಾ ಪ್ರಕ್ರಿಯೆಗಳಲ್ಲಿ ಸುಧಾರಣೆ ತರುವ ಆಶಯದಿಂದ 2016ರಲ್ಲಿ 47 ಶಿಫಾರಸುಗಳನ್ನು ಕೇಂದ್ರ ಚುನಾವಣಾ ಆಯೋಗ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದೆ. ಅದರಲ್ಲಿ ಸಾರ್ವಜನಿಕರ ಹಣವನ್ನು ಮತದಾರರಿಗೆ ಯಾವುದೇ ಸಾಮಗ್ರಿಗಳ ಹಂಚಿಕೆ ಅಥವಾ ಸವಲತ್ತುಗಳನ್ನು ಮಾಡಿಕೊಡಲು ಬಳಸಿಕೊಂಡರೆ ಅಂಥ ಪಕ್ಷವನ್ನು ನಿಷೇಧಗೊಳಿಸುವ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಅಂದರೆ, ನಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಇಲ್ಲ’ ಎಂದು ಆಯೋಗ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್