Toll ಹೆಚ್ಚಳ ಜಾರಿಗೆ ಚುನಾವಣ ಆಯೋಗ ತಡೆ: ಸೂಚನೆಯೇನು?
ಚುನಾವಣೆ ಬಳಿಕ ಜಾರಿ ಮಾಡುವಂತೆ ಸೂಚನೆ
Team Udayavani, Apr 2, 2024, 6:20 AM IST
ಹೊಸದಿಲ್ಲಿ: ಲೋಕಸಭೆ ಚುನಾವಣೆ ಪ್ರಕ್ರಿಯೆ ಮುಗಿಯುವ ವರೆಗೆ ಟೋಲ್ ಶುಲ್ಕ ಪರಿಷ್ಕರಣೆಯನ್ನು ಜಾರಿಗೊಳಿಸದಂತೆ ಚುನಾವಣ ಆಯೋಗವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ ನೀಡಿದೆ. ಹೀಗಾಗಿ ಸೋಮವಾರದಿಂದಲೇ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಏರಿಕೆಯಾಗಲಿದೆ ಎಂಬ ಸುದ್ದಿಯಿಂದ ಕಂಗಾಲಾಗಿದ್ದ ಜನರಿಗೆ ಸ್ವಲ್ಪ ನೆಮ್ಮದಿ ಸಿಕ್ಕಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ)ವು ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಶುಲ್ಕವನ್ನು ಸರಾಸರಿ ಶೇ. 5 ಏರಿಕೆ ಮಾಡಿ, ಎ. 1ರಿಂದ ಜಾರಿ ಮಾಡಲು ಮುಂದಾಗಿತ್ತು. ಆದರೆ ಟೋಲ್ ಶುಲ್ಕ ಹೆಚ್ಚಳವನ್ನು ಮುಂದೂಡಿ ಚುನಾವಣೆಯ ಬಳಿಕವೇ ಜಾರಿ ಮಾಡು ವಂತೆ ಚುನಾವಣ ಆಯೋಗವು ಪ್ರಾಧಿಕಾರಕ್ಕೆ ಸೂಚಿಸಿದೆ.
ವಿದ್ಯುತ್ ದರ ಪರಿಷ್ಕರಣೆಯ ಜಾರಿಯನ್ನೂ ಮುಂದೂಡುವಂತೆ ಆಯೋಗ ಸೂಚಿಸಿದೆ. ರಾಜ್ಯ ವಿದ್ಯುತ್ ನಿಯಂತ್ರಣ ಆಯೋಗಗಳು ತಮ್ಮ ವಿದ್ಯುತ್ ದರ ಪರಿಷ್ಕರಣೆ ಕೈಗೊಳ್ಳಬಹುದು. ಆದರೆ ಪರಿಷ್ಕೃತ ದರಗಳು ಲೋಕಸಭೆ ಚುನಾವಣೆ ಮುಗಿದ ಅನಂತರವೇ ಜಾರಿಯಾಗಬೇಕು ಎಂದು ಚು. ಆಯೋಗ ಹೇಳಿದೆ.
ಆಯೋಗದ ಸೂಚನೆಯೇನು?
ಎ. 1ರಿಂದ ಟೋಲ್ ಶುಲ್ಕ ಸರಾಸರಿ ಶೇ. 5 ಹೆಚ್ಚಳಕ್ಕೆ ಮುಂದಾಗಿದ್ದ ಹೆದ್ದಾರಿ ಪ್ರಾಧಿಕಾರ
ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಂಡ ಬಳಿಕ ಹೊಸ ಶುಲ್ಕ ಜಾರಿಗೆ ಆಯೋಗ ಸೂಚನೆ
ದರ ಪರಿಷ್ಕರಣೆ ಬಗ್ಗೆ ಕೇಂದ್ರ ಸರಕಾರದಿಂದ ಸ್ಪಷ್ಟನೆ ಕೋರಿದ್ದ ಆಯೋಗ
ವಿವಿಧ ರಾಜ್ಯಗಳಲ್ಲಿ ವಿದ್ಯುತ್ ದರ
ಪರಿಷ್ಕರಣೆಗೂ ತಡೆ ನೀಡಿದ ಆಯೋಗ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು
ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ
MUST WATCH
ಹೊಸ ಸೇರ್ಪಡೆ
IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ
Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು
H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ