ಸಂಜೆ 5 ಗಂಟೆಗೆ ಚುಣಾವಣಾ ಆಯೋಗ ಸುದ್ದಿಗೋಷ್ಠಿ:ದಿನಾಂಕ ಘೋಷಣೆ ಸಾಧ್ಯತೆ
Team Udayavani, Mar 10, 2019, 6:41 AM IST
ಹೊದದಿಲ್ಲಿ: 17ನೇ ಲೋಕಸಭಾ ಚುಣಾವಣೆಯ ದಿನಾಂಕಗಳು ಇಂದು ಘೋಷಣೆಯಾಗುವ ಸಾಧ್ಯತೆಯಿದೆ. ಭಾರತೀಯ ಚುಣಾವಣಾ ಆಯೋಗ ರವಿವಾರ ಸಂಜೆ ಐದು ಗಂಟೆಗೆ ಮಹತ್ವದ ಪತ್ರಿಕಾಗೋಷ್ಠಿ ಕರೆದಿದ್ದು, ಹಾಗಾಗಿ ಇಂದು ಚುಣಾವಣಾ ವೇಳಾಪಟ್ಟಿ ಘೋಷಣೆಯಾಗುವ ಸಾಧ್ಯತೆ ನಿಚ್ಚಳವಾಗಿದೆ.
ಚುಣಾವಣಾ ಆಯೋಗ ಶನಿವಾರ ಸಭೆ ಸೇರಿ ಚುಣಾವಣಾ ಸಿದ್ದತೆಗಳ ಬಗ್ಗೆ ವರದಿ ಪಡೆದಿತ್ತು. ಪ್ರಸ್ತುತ ಸರಕಾರದ ಕಾರ್ಯಾವಧಿ ಜೂನ್ ಮೂರಕ್ಕೆ ಮುಗಿಯುವುದರಿಂದ ಅದರ ಒಳಗಾಗಿ ಹೊಸ ಸರಕಾರ ರಚಿಸಬೇಕಾದ ಅನಿವಾರ್ಯತೆಯಿದೆ.
ಲೋಕಸಭಾ ಚುಣಾವಣೆಯ ಜೊತೆಗೆ ಆಂಧ್ರ ಪ್ರದೇಶ, ಒಡಿಶಾ, ಸಿಕ್ಕಿಂ, ಅರುಣಾಚಲ ಪ್ರದೇಶ ರಾಜ್ಯಗಳ ವಿಧಾನ ಸಭಾ ಚುಣಾವಣೆ ನಡೆಯುವ ಸಾಧ್ಯತೆಯಿದೆ. ಇದರೊಂದಿಗೆ ರಾಷ್ಟ್ರಪತಿ ಆಳ್ವಿಕೆಯಿರುವ ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಮೇಯಲ್ಲಿ ರಾಷ್ಟ್ರಪತಿ ಆಳ್ವಿಕೆ ಮುಕ್ತಾಯವಾಗುವುದರಿಂದ ಅಲ್ಲಿ ಕೂಡಾ ಚುಣಾವಣೆ ನಡೆಯುವ ಸಾಧ್ಯತೆಯಿದೆ.
ಆದರೆ ಭದ್ರತಾ ಕಾರಣಗಳಿಂದ ಜಮ್ಮು ಕಾಶ್ಮೀರದಲ್ಲಿ ಏಕಕಾಲಕ್ಕೆ ಲೋಕಸಭಾ ಮತ್ತು ವಿಧಾನಸಭೆ ಚುಣಾವಣೆ ನಡೆಯುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ.
543 ಲೋಕಸಭಾ ಕ್ಷೇತ್ರಗಳಿಗೆ ಈ ವರ್ಷ ಎಂಟರಿಂದ ಒಂಬತ್ತು ಹಂತಗಳಲ್ಲಿ ಚುಣಾವಣೆ ನಡೆಯುವ ಸಾಧ್ಯತೆ ಇದೆ. ರವಿವಾರ ಸಂಜೆ ಐದು ಗಂಟೆಗೆ ನಡೆಯುವ ಪತ್ರಿಕಾಗೋಷ್ಠಿಯಲ್ಲಿ ಎಲ್ಲದಕ್ಕೂ ಉತ್ತರ ಸಿಗಲಿದೆ.
2014ರ ಚುಣಾವಣೆ ಎಪ್ರಿಲ್ ಏಳರಿಂದ ಮೇ 12ರ ವರೆಗೆ ಒಟ್ಟು ಒಂಬತ್ತು ಹಂತಗಳಲ್ಲಿ ನಡೆದಿತ್ತು. ಮತ ಎಣಿಕೆ ಮೇ 16ರಂದು ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್