“ಆಶ್ವಾಸನೆ’ಗಳ ಈಡೇರಿಕೆ: ವೆಚ್ಚ ವಿವರ ಕಡ್ಡಾಯ? ಚುನಾವಣ ಆಯೋಗದಿಂದ ಈ ಚಿಂತನೆ


Team Udayavani, Oct 6, 2022, 7:20 AM IST

“ಆಶ್ವಾಸನೆ’ಗಳ ಪೂರೈಕೆಗೆ ಬೇಕಾದ ವೆಚ್ಚ, ಸಂಪನ್ಮೂಲಗಳ ವಿವರ ಕಡ್ಡಾಯ?

ನವದೆಹಲಿ: ಇನ್ನು ಮುಂದೆ ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಗೆ ಮುನ್ನ ಮತದಾರರಿಗೆ ನೀಡುವಂಥ ಆಶ್ವಾಸನೆಗಳನ್ನು ಪೂರೈಸಲು ತಗಲುವ ವೆಚ್ಚದ ವಿವರ ಹಾಗೂ ಅದಕ್ಕಾಗಿ ತಮ್ಮಲ್ಲಿರುವ ವಿತ್ತೀಯ ಸಂಪನ್ಮೂಲಗಳೆಷ್ಟು ಎಂಬ ಮಾಹಿತಿಯನ್ನು ಎಲ್ಲ ರಾಜಕೀಯ ಪಕ್ಷಗಳೂ ನೀಡಬೇಕು.

ರಾಜಕೀಯ ಪಕ್ಷಗಳು ನೀಡುವ “ಸುಳ್ಳು ಆಶ್ವಾಸನೆ’ಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಚುನಾವಣಾ ಆಯೋಗವು ಇಂಥದ್ದೊಂದು ನಿಯಮವನ್ನು ಜಾರಿ ಮಾಡಲು ಮುಂದಾಗಿದೆ.

ರಾಜಕೀಯ ಪಕ್ಷಗಳು ಘೋಷಿಸುವ “ಉಚಿತ ಕೊಡುಗೆ’ಗಳ ಬಗ್ಗೆ ಚರ್ಚೆಯಾಗುತ್ತಿರುವಂತೆಯೇ ಆಯೋಗವು ಇಂಥದ್ದೊಂದು ಚಿಂತನೆ ಮಾಡಿದೆ. ಈಗಾಗಲೇ ಎಲ್ಲ ರಾಜಕೀಯ ಪಕ್ಷಗಳಿಗೂ ಪತ್ರ ಬರೆದಿರುವ ಆಯೋಗ, ತನ್ನ ಈ ಚಿಂತನೆಯನ್ನು ವಿವರಿಸಿ, ಅ.19ರೊಳಗೆ ಪ್ರಸ್ತಾವಿತ ಬದಲಾವಣೆಗಳ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ. ಅದರಂತೆ, ಪಕ್ಷಗಳು ತಮ್ಮ ಪ್ರಣಾಳಿಕೆಗಳಲ್ಲಿ ಹಾಗೂ ಇತರೆಡೆ ನೀಡುವ ಆಶ್ವಾಸನೆಗಳು ಅರ್ಥವ್ಯವಸ್ಥೆಯ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಮತ್ತು ಅವುಗಳಿಗೆ ಹಣಕಾಸನ್ನು ಹೇಗೆ ಹೊಂದಿಸಲಾಗುತ್ತದೆ ಎಂಬ ವಿವರವನ್ನು ನೀಡಬೇಕಾಗುತ್ತದೆ.

ರಾಜಕೀಯ ಪಕ್ಷಗಳು ಜನರಿಗೆ ನೀಡುವ ಆಶ್ವಾಸನೆಯನ್ನು ತಡೆಯಲು ಸಾಧ್ಯವಿಲ್ಲ. ಹಾಗೆಯೇ ತಮಗೆ ಬೇಕಾದ ಪಕ್ಷವನ್ನು ಆಯ್ಕೆ ಮಾಡಿಕೊಳ್ಳುವಾಗ ಮತದಾರರಿಗೆ ಕೂಡ ಈ ಬಗ್ಗೆ ಮಾಹಿತಿಯಿರುವುದು ಮುಖ್ಯವಾಗುತ್ತದೆ.

ಹೀಗಾಗಿ, ಎಲ್ಲ ಪಕ್ಷಗಳು, ರಾಜ್ಯ ಅಥವಾ ಕೇಂದ್ರ ಸರ್ಕಾರಗಳು ತಮ್ಮಲ್ಲಿರುವ ಸಂಪನ್ಮೂಲಗಳು ಹಾಗೂ ಆಶ್ವಾಸನೆ ಈಡೇರಿಕೆಗಾಗಿ ಅವುಗಳ ಬಳಕೆ ಬಗ್ಗೆ ವಿಸ್ತೃತ ವಿವರ ನೀಡಿದರೆ, ಮತದಾರರು ಎಲ್ಲ ಪಕ್ಷಗಳನ್ನೂ ಹೋಲಿಕೆ ಮಾಡಿಕೊಂಡು, ಆಶ್ವಾಸನೆಗಳು ನಿಜಕ್ಕೂ ಈಡೇರಲಿವೆಯೇ ಎಂಬುದನ್ನು ನಿರ್ಧರಿಸಲು ಸಾಧ್ಯವಾಗುತ್ತದೆ ಎನ್ನುವುದು ಚುನಾವಣಾ ಆಯೋಗದ ಆಲೋಚನೆಯಾಗಿದೆ.

ಅದರಂತೆ, ಪ್ರತಿ ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಕೇಂದ್ರ ಹಣಕಾಸು ಕಾರ್ಯದರ್ಶಿಯು ಎಲ್ಲಿ, ಯಾವಾಗ ಚುನಾವಣೆ ನಡೆದರೂ, ತೆರಿಗೆ ಮತ್ತು ವೆಚ್ಚದ ವಿವರಗಳನ್ನು ನಿರ್ದಿಷ್ಟ ನಮೂನೆಯಲ್ಲಿ ಸಲ್ಲಿಸಬೇಕು ಎಂದೂ ಆಯೋಗ ಪ್ರಸ್ತಾಪಿಸಿದೆ. ಇದಕ್ಕಾಗಿ ಮಾದರಿ ನೀತಿ ಸಂಹಿತೆಗೆ ತಿದ್ದುಪಡಿ ತಂದು, ಇದಕ್ಕೆ ಹೆಚ್ಚುವರಿಯಾಗಿ ಒಂದು ಅರ್ಜಿಯನ್ನು ಸೇರ್ಪಡೆ ಮಾಡಲು ನಿರ್ಧರಿಸಿದೆ.

ಏನೇನು ಮಾಹಿತಿ ಇರಬೇಕು?
ರಾಜಕೀಯ ಪಕ್ಷವು ರೈತರ ಕೃಷಿ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದರೆ, ಅದು ಎಲ್ಲ ರೈತರಿಗೂ ಸಿಗುತ್ತದೆಯೇ? ಅಥವಾ ಕೇವಲ ಸಣ್ಣ ಮತ್ತು ಮಧ್ಯಮ ರೈತರಿಗಷ್ಟೇ ಸಿಗುತ್ತದೆಯೇ?, ಅವುಗಳಿಗೆ ಹಣಕಾಸನ್ನು ಹೇಗೆ ಹೊಂದಾಣಿಕೆ ಮಾಡಲಾಗುತ್ತದೆ? ಈ ಯೋಜನೆ ಜಾರಿಗೆ ತಂದರೆ ಉಂಟಾಗುವ ಆರ್ಥಿಕ ಪರಿಣಾಮಗಳೇನು? ಎಂಬೆಲ್ಲ ಮಾಹಿತಿಯನ್ನು ನೀಡಬೇಕಾಗುತ್ತದೆ.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.