
ಮತಸಮರ: ಗುಜರಾತ್ ನಲ್ಲಿ ಬಿಜೆಪಿ ಮುನ್ನಡೆ, ಹಿಮಾಚಲದಲ್ಲಿ ಟೈಟ್ ಫೈಟ್
Team Udayavani, Dec 8, 2022, 9:14 AM IST

ಹೊಸದಿಲ್ಲಿ: ಬಿಜೆಪಿಯ ಪ್ರತಿಷ್ಠೆಯ ಕಣವಾಗಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ನಿರೀಕ್ಷೆಯಂತೆಯೇ ಗುಜರಾತ್ ನಲ್ಲಿ ಭಾರತೀಯ ಜನತಾ ಪಾರ್ಟಿ ಮುನ್ನಡೆ ಸಾಧಿಸಿದೆ.
ಪ್ರಾಥಮಿಕ ವರದಿಯ ಪ್ರಕಾರ ಗುಜರಾತ್ ನಲ್ಲಿ ಬಿಜೆಪಿಯು 127 ಮತ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 51 ಕ್ಷೇತ್ರಗಳಲ್ಲಿ ಲೀಡ್ ನಲ್ಲಿದೆ. ದೊಡ್ಡ ಮ್ಯಾಜಿಕ್ ಮಾಡುವ ನಿರೀಕ್ಷೆ ಹುಟ್ಟಿಸಿದ್ದ ಅರವಿಂದ ಕೇಜ್ರೀವಾಲ್ ರ ಆಮ್ ಆದ್ಮಿ ಪಕ್ಷ ಸದ್ಯಕ್ಕೆ ಎರಡು ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಇತರರು ಎರಡು ಕ್ಷೇತ್ರಗಳಲ್ಲಿ ಲೀಡ್ ನಲ್ಲಿದ್ದಾರೆ.
ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ತವರು ರಾಜ್ಯ ಹಿಮಾಚಲ ಪ್ರದೇಶ ಚುನಾವಣೆಯು ಅತ್ಯಂತ ಪ್ರತಿಷ್ಠೆಯ ಕಣವಾಗಿದೆ. 68 ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಸ್ಪರ್ಧೆಯಿದೆ. ಮೊದಲ ಹಂತದಲ್ಲಿ ಬಿಜೆಪಿ 34 ಕ್ಷೇತ್ರಗಳು ಮತ್ತು ಕಾಂಗ್ರೆಸ್ 33 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಒಂದು ಕ್ಷೇತ್ರಗಳಲ್ಲಿ ಇತರರು ಲೀಡ್ ನಲ್ಲಿದ್ದಾರೆ.
ಇದನ್ನೂ ಓದಿ:ಸಿ.ಟಿ.ರವಿ ಲೂಟಿಕೋರ ಆಗಿರದಿದ್ದರೆ ಕ್ಷೇತ್ರದ ಜನ ‘ಲೂಟಿ ರವಿ’ ಎನ್ನಲು ಸಾಧ್ಯವೆ? ದಿನೇಶ್ ಗುಂಡೂರಾವ್ ಪ್ರಶ್ನೆ
ಗುಜರಾತ್ ನಲ್ಲಿ ಕಳೆದ 27 ವರ್ಷಗಳಿಂದ ಬಿಜೆಪಿ ಆಡಳಿತ ನಡೆಸುತ್ತಿದ್ದು, ಈ ಬಾರಿಯೂ ರಾಜ್ಯದಲ್ಲಿ ಬಹುಮತ ಗಳಿಸುವ ವಿಶ್ವಾಸವಿದೆ. ಪ್ರತಿ ಐದು ವರ್ಷಕ್ಕೊಮ್ಮೆ ಸರ್ಕಾರ ಬದಲಾಗುವ ಹಿಮಾಚಲ ಪ್ರದೇಶದಲ್ಲಿ ಈ ಬಾರಿ ಮತ್ತೆ ಅಧಿಕಾರ ಹಿಡಿದು ಇತಿಹಾಸ ನಿರ್ಮಿಸುವ ಇರಾದೆಯಲ್ಲಿದೆ ಕಮಲ ಪಾಳಯ. ಆದರೆ ಐದು ವರ್ಷಗಳ ಬಳಿಕ ಅಧಿಕಾರ ಪಡೆಯಲು ಕಾಂಗ್ರೆಸ್ ಲೆಕ್ಕಾಚಾರ ರೂಪಿಸಿದ್ದು, ಮತದಾರ ಏನು ನಿರ್ಧರಿಸಿದ್ದಾನೆ ಎನ್ನುವುದು ಇಂದು ತೀರ್ಮಾನವಾಗಲಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಭಾರತೀಯರಿಗೆ ದಾಖಲೆ ವೀಸಾ ವಿತರಣೆಗೆ ಅಮೆರಿಕ ಸಜ್ಜು

ಜನ ಸಂಕಲ್ಪಯಾತ್ರೆ: ಅಮಿತ್ ಶಾ ಬರುತ್ತಿದ್ದಂತೆ ಮೊಳಗಿದ ಜಯಘೋಷ

ಹಲವು ವಿಸ್ಮಯಗಳ ಆಗರ ನೆಲ್ಲಿತೀರ್ಥ- ವರ್ಷದಲ್ಲಿ ಆರು ತಿಂಗಳು ಮಾತ್ರ ಭೇಟಿಗೆ ಅವಕಾಶ…

ತೆಕ್ಕಟ್ಟೆ: ಕಾರಿಗೆ ಟ್ಯಾಂಕರ್ ಲಾರಿ ಢಿಕ್ಕಿ ; ನಾಲ್ವರು ವಿದ್ಯಾರ್ಥಿಗಳು ಪಾರು !

ಪತ್ರಕರ್ತನನ್ನು ಮರಕ್ಕೆ ಕಟ್ಟಿ ಥಳಿಸಿದ ಕಿಡಿಗೇಡಿಗಳು: ಆರು ಮಂದಿಯ ಬಂಧನ