ಮತಎಣಿಕೆ; ಹಿಂಸಾಚಾರ ಭುಗಿಲೇಳಬಹುದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ; ರಾಜ್ಯಗಳಿಗೆ ಕೇಂದ್ರ
Team Udayavani, May 22, 2019, 7:53 PM IST
ನವದೆಹಲಿ:ದೇಶದ ಹೈವೋಲ್ಟೇಜ್ ಲೋಕಸಭೆ ಚುನಾವಣೆಯ ಮತಎಣಿಕೆ ಗುರುವಾರ ಬೆಳಗ್ಗೆ ನಡೆಯಲಿರುವ ಹಿನ್ನೆಲೆಯಲ್ಲಿ ಹಿಂಸಾಚಾರ, ಗಲಭೆ ನಡೆಯುವ ಸಾಧ್ಯತೆ ಇದೆ ಎಂದು ಗೃಹಸಚಿವಾಲಯ ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ಎಲ್ಲಾ ರಾಜ್ಯಗಳ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ಸಂದೇಶ ರವಾನಿಸಿರುವುದಾಗಿ ವರದಿ ತಿಳಿಸಿದೆ.
ಮತಎಣಿಕೆ ಕಾರ್ಯ ಸ್ಥಗಿತಗೊಳಿಸುವ ಹಾಗೂ ಹಿಂಸಾಚಾರ ಭುಗಿಲೇಳುವ ಸಾಧ್ಯತೆ ಇದ್ದು, ಕೇಂದ್ರಾಡಳಿ ಪ್ರದೇಶ ಹಾಗೂ ಆಯಾ ರಾಜ್ಯಗಳು ಸೂಕ್ತ ಭದ್ರತೆಯ ವ್ಯವಸ್ಥೆ ಮಾಡಬೇಕೆಂದು ಸಚಿವಾಲಯ ಹೇಳಿದೆ.
ಅಷ್ಟೇ ಅಲ್ಲ ಮತಎಣಿಕೆ ಕೇಂದ್ರದ ಸುತ್ತಮುತ್ತ, ಸ್ಟ್ರಾಂಗ್ ರೂಂ ಹಾಗೂ ಇವಿಎಂ ಇರಿಸಿದ ಸ್ಥಳಗಳಲ್ಲಿ ಸೂಕ್ತ ಭದ್ರತೆ ಏರ್ಪಡಿಸುವಂತೆ ಸಚಿವಾಲಯ ಸಂದೇಶ ರವಾನಿಸಿದೆ ಎಂದು ವರದಿ ವಿವರಿಸಿದೆ. ಉತ್ತರಪ್ರದೇಶ, ಪಶ್ಚಿಮಬಂಗಾಳ, ಬಿಹಾರ ಹಾಗೂ ತ್ರಿಪುರಾಗಳಲ್ಲಿ ಹಿಂಸಾಚಾರ ನಡೆಯುವ ಬಗ್ಗೆ ಸೆಂಟ್ರಲ್ ಸೆಕ್ಯುರಿಟಿ ಏಜೆನ್ಸಿ ಗಳು ಕೆಲವು ಮಾಹಿತಿ ಪಡೆದಿರುವುದಾಗಿ ವರದಿ ತಿಳಿಸಿದೆ.
ಮತಎಣಿಕೆಗೆ ಅವಕಾಶ ಕೊಡುವುದಿಲ್ಲ, ಹಿಂಸಾಚಾರ ನಡೆಸುತ್ತೇವೆ ಎಂದು ಕೆಲವು ಸಂಘಟನೆಗಳು ಹಾಗೂ ವೈಯಕ್ತಿಕವಾಗಿಯೂ ಹೇಳಿಕೆ ಕೊಟ್ಟಿರುವುದಾಗಿ ವರದಿ ಹೇಳಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್