Kerala: ಆಟೋ ಉರುಳಿಸಿ ಚಾಲಕನನ್ನು ಎತ್ತಿ ಬಿಸಾಡಿದ ಕಾಡಾನೆ; ತಿಂಗಳೊಳಗೆ 3ನೇ ಘಟನೆ
Team Udayavani, Feb 27, 2024, 1:34 PM IST
ಸಾಂದರ್ಭಿಕ ಚಿತ್ರ
ಕೊಚ್ಚಿ: ಕಾಡಾನೆ ದಾಳಿಗೆ ಆಟೋ ರಿಕ್ಷಾ ಚಾಲಕನೊಬ್ಬ ಬಲಿಯಾಗಿರುವ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ಪ್ರವಾಸಿ ಪಟ್ಟಣ ಮುನ್ನಾರ್ ನಲ್ಲಿ ಸೋಮವಾರ(ಫೆ.26 ರಂದು) ರಾತ್ರಿ ನಡೆದಿರುವುದು ವರದಿಯಾಗಿದೆ. ತಿಂಗಳೊಳಗೆ ಕಾಡಾನೆ ದಾಳಿಗೆ ಬಲಿಯಾದ ಮೂರನೇ ಘಟನೆ ಇದಾಗಿದೆ.
ಕನ್ನಿಮಾಲಾ ಎಸ್ಟೇಟ್ನಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಆಟೋರಿಕ್ಷಾ ಚಾಲಕ ಸುರೇಶ್ ಕುಮಾರ್ (44) ಕಾಡಾನೆ ದಾಳಿಗೆ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ಘಟನೆ ನಡೆದ ಸಂದರ್ಭದಲ್ಲಿ ಸುರೇಶ್ ಅವರು ತನ್ನ ಆಟೋದಲ್ಲಿ ನಾಲ್ವರನ್ನು ಕೂರಿಸಿಕೊಂಡು ಬಾಡಿಗೆಯೊಂದನ್ನು ಮಾಡುತ್ತಿದ್ದರು. ಒಬ್ಬ ಮಹಿಳೆ ಮತ್ತು ಆಕೆಯ ಮಗಳು ಮತ್ತು ಇಬ್ಬರು ಕಾರ್ಮಿಕರು ಆಟೋದಲ್ಲಿ ಇದ್ದರು.
ಆಟೋ ಪ್ರಯಾಣಿಸುತ್ತಿದ್ದ ವೇಳೆ ರಸ್ತೆಯಲ್ಲೇ ನಿಂತಿದ್ದ ಆನೆ ಆಟೋ ರಿಕ್ಷಾವನ್ನು ಉರುಳಿಸಿ ಜನರನ್ನು ಅದರ ಕೆಳಗೆ ಸಿಲುಕಿಸಿದೆ. ಈ ಕ್ಷಣದಲ್ಲಿ ನಾಲ್ವರು ಸ್ವಲ್ಪದರಲ್ಲೇ ಪಾರಾಗಿದ್ದು, ಚಾಲಕ ಕುಮಾರ್ ಮೇಲೆ ಕಾಡಾನೆ ದಾಳಿ ಮಾಡಿದೆ. ಆನೆಯು ತನ್ನ ಸೊಂಡಿಲಿನಿಂದ ಕುಮಾರ್ ಅವರನ್ನು ಎತ್ತಿ ಕನಿಷ್ಠ ಮೂರು ಬಾರಿ ಎಸೆದಿದೆ ಎಂದು ಬದುಕುಳಿದ ಮಹಿಳೆ ಮಾಧ್ಯಮವೊಂದಕ್ಕೆ ಹೇಳಿದ್ದಾರೆ.
ದಾಳಿಯಲ್ಲಿ ಕುಮಾರ್ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಕೇರಳದಲ್ಲಿ ಹೆಚ್ಚುತ್ತಿರುವ ಮಾನವ-ಪ್ರಾಣಿ ಸಂಘರ್ಷದ ಪ್ರಕರಣಗಳನ್ನು ಕೊನೆಗೊಳಿಸುವಂತೆ ಎಲ್ಡಿಎಫ್ ಮುಷ್ಕರಕ್ಕೆ ಕರೆ ನೀಡಿದೆ.
ಫೆಬ್ರವರಿ 10 ರಂದು ವಯನಾಡ್ನಲ್ಲಿ ಮನೆಯ ಆವರಣಕ್ಕೆ ನುಗ್ಗಿದ ಕಾಡಾನೆ 42 ವರ್ಷದ ವ್ಯಕ್ತಿಯ ಮೇಲೆ ದಾಳಿ ಮಾಡಿತ್ತು. ಪರಿಣಾಮ ಆ ವ್ಯಕ್ತಿ ಬಲಿಯಾಗಿದ್ದರು. ಇದಾದ ಬಳಿಕ ಆರು ದಿನದ ನಂತರ ಪರಿಸರ ಪ್ರವಾಸೋದ್ಯಮ ಮಾರ್ಗದರ್ಶಕ ವಿ.ಪಾಲ್ ಚೆರಿಯಮಲ ಅರಣ್ಯದಲ್ಲಿ ಆನೆಯಿಂದ ದಾಳಿಗೊಳಗಾಗಿ ಮೃತಪಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ