ಆನೆಗಳ ಹಿಂಡಿನ ದಾಳಿಯಿಂದ ಪುಟ್ಟ ಬಾಲಕಿಯನ್ನು ರಕ್ಷಿಸಿದ ಆನೆ!


Team Udayavani, Feb 22, 2019, 10:08 AM IST

elephant.jpg

ಪಶ್ಚಿಮಬಂಗಾಳ(ಜಲ್ಪೈಗುರಿ): ಹಿಂಡು, ಹಿಂಡು ಆನೆಗಳು ಎದುರಾದಾಗ ಅವುಗಳು ದಾಳಿ ನಡೆಸುವುದೇ ಹೆಚ್ಚು. ದಟ್ಟ ಕಾಡಿನಲ್ಲಿ ಆನೆಗಳ ದಾಳಿಗೆ ಮನುಷ್ಯರು ಬಲಿಯಾದ ಘಟನೆ ಬಗ್ಗೆ ಓದಿದ್ದೀರಿ. ಆದರೆ ಪಶ್ಚಿಮಬಂಗಾಳದ ಜಲ್ಪೈಗುರಿಯಲ್ಲಿ ಆನೆಯೊಂದು ನಾಲ್ಕು ವರ್ಷದ ಪುಟ್ಟ ಮಗುವನ್ನು ರಕ್ಷಿಸಿದ ಅಪರೂಪದ ಪ್ರಸಂಗ ನಡೆದಿದೆ.

ಏನಿದು ಘಟನೆ:

ರಾಷ್ಟ್ರೀಯ ಹೆದ್ದಾರಿ 31ರ ಸಮೀಪದ ಗಾರುಮಾರಾ ಅರಣ್ಯದೊಳಗಿನ ದೇವಸ್ಥಾನದಲ್ಲಿ ಉದ್ಯಮಿ ನಿತು ಘೋಷ್, ಪತ್ನಿ ಟಿಟ್ಲಿ ಮತ್ತು ನಾಲ್ಕು ವರ್ಷದ ಮಗಳು ಅಹಾನಾ ಪೂಜೆ ಮುಗಿಸಿ ಬೈಕ್ ನಲ್ಲಿ ಲಾಟಾಗುರಿಗೆ ವಾಪಸ್ ಆಗುತ್ತಿದ್ದರು. ಈ ಸಂದರ್ಭದಲ್ಲಿ ಆನೆಗಳ ಹಿಂಡು ರಸ್ತೆ ದಾಟುತ್ತಿರುವುದನ್ನು ಗಮನಿಸಿದ್ದರು.

ಸ್ವಲ್ಪ ಸಮಯದ ನಂತರ ಆನೆಗಳ ಹಿಂಡು ಮತ್ತೊಂದು ದಾರಿಯಲ್ಲಿ ಕಾಡಿನೊಳಗೆ ಹೊರಟಿರುವುದನ್ನು ಗಮನಿಸಿ ಘೋಷ್ ಅವರು ಬೈಕ್ ನಲ್ಲಿ ತಮ್ಮ ಪ್ರಯಾಣ ಮುಂದುವರಿಸಿದ್ದರು. ಏತನ್ಮಧ್ಯೆ ಏಕಾಏಕಿ ಮತ್ತಷ್ಟು ಆನೆಗಳು ಬರುತ್ತಿರುವುದನ್ನು ಗಮನಿಸಿದ ಘೋಷ್ ಬೈಕ್ ನ ಬ್ರೇಕ್ ಹಾಕಿದ್ದರು. ಈ ಸಂದರ್ಭದಲ್ಲಿ ಮೂವರು ಬೈಕ್ ನಿಂದ ಕೆಳಕ್ಕೆ ಬಿದ್ದಿದ್ದರು.

ಆತಂಕದಲ್ಲಿ ಬಿದ್ದಿದ್ದ ದಂಪತಿಗೆ ಅಚ್ಚರಿ ಎಂಬಂತೆ ದಿಢೀರ್ ಒಂದು ಆನೆ ನುಗ್ಗಿ ಬಂದು ನಾಲ್ಕು ವರ್ಷದ ಪುಟ್ಟ ಮಗುವನ್ನು ತನ್ನ ಕಾಲುಗಳ ಮಧ್ಯೆ ಇರಿಸಿಕೊಂಡು ನಿಂತುಬಿಟ್ಟಿತ್ತು!. ಉಳಿದ ಆನೆಗಳು ತಮ್ಮ ಪಾಡಿಗೆ ಕಾಡಿನೊಳಗೆ ಪ್ರಯಾಣ ಮುಂದುವರಿಸಿದ್ದವು.

ಕೆಲ ಹೊತ್ತಿನ ನಂತರ ತನ್ನ ಹಿಂಡಿನ ಆನೆಗಳು ಕಾಡಿನೊಳಗೆ ಹೋದ ಮೇಲೆ ಕಾಲಿನ ನಡುವೆ ಸುರಕ್ಷಿತವಾಗಿ ಇರಿಸಿಕೊಂಡಿದ್ದ ಮಗು ಅಹಾನಾಳನ್ನು ಬಿಟ್ಟು ಈ ಆನೆ ಕೂಡಾ ಕಾಡಿನ ಹಾದಿ ಹಿಡಿದಿತ್ತು. ಮಗು ಪೋಷಕರ ಮಡಿಲು ಸೇರಿತ್ತು. ಈ ವೇಳೆ ಸ್ಕೂಟರ್ ಅನ್ನು ನೋಡಿ ಯಾರೋ ಅಪಾಯದಲ್ಲಿದ್ದಾರೆಂದು ಊಹಿಸಿದ ಲಾರಿ ಚಾಲಕನೊಬ್ಬ ಜೋರಾಗಿ ಹಾರ್ನ್ ಮೊಳಗಿಸುವ ಮೂಲಕ ಸ್ಥಳಕ್ಕೆ ಬಂದಿದ್ದ.

ಕೂಡಲೇ ಮೂವರನ್ನು ಲಾಟಗುರಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಿದ್ದ. ಮಗುವಿಗೆ ಯಾವುದೇ ದೊಡ್ಡ ಗಾಯವಾಗಿಲ್ಲ, ಆದರೆ ಮಾನಸಿಕವಾಗಿ ಆಘಾತಕ್ಕೊಳಗಾಗಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಕೆಲವು ತಿಂಗಳುಗಳ ಹಿಂದೆ ಆನೆಗಳು ಪ್ರವಾಸಿಗರನ್ನು ಕೊಂದಿರುವ ಹಾಗೂ ಹಲವರ ಮೇಲೆ ದಾಳಿ ನಡೆಸಿದ ಪರಿಣಾಮ ಗಾಯಗೊಂಡಿರುವ ಘಟನೆ ನಡೆದಿತ್ತು

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.