ಅಂತೂ ಇಂತೂ ಪೂರಮ್ಗೆ ಬಂದ ರಾಮಚಂದ್ರನ್
Team Udayavani, May 13, 2019, 6:00 AM IST
ತಿರುವನಂತಪುರ: ಕೇರಳದ ತೃಶ್ಶೂರ್ನ ಅತ್ಯಂತ ಜನಪ್ರಿಯ ಪೂರಮ್ ಹಬ್ಬ ಈ ಬಾರಿಯೂ ಆನೆ ರಾಮಚಂದ್ರನ್ನೊಂದಿಗೆ ಸುಸೂತ್ರವಾಗಿ ನಡೆಯಿತು. ಇಡೀ ಹಬ್ಬದ ಪ್ರಮುಖ ಆಕರ್ಷಣೆಯಾಗಿದ್ದ 54 ವರ್ಷದ ಒಕ್ಕಣ್ಣ ಆನೆ ತೆಚ್ಚಿಕೊಟ್ಟುಕಾವು ರಾಮಚಂದ್ರನ್, ಬೆಳಗ್ಗೆ 10.30ಕ್ಕೆ ಸರಿಯಾಗಿ ವಡಕ್ಕುಮ್ನಾಥನ್ ದೇಗುಲದ ಬಾಗಿಲನ್ನು ತೆರೆದಾಗ ಅಲ್ಲಿ ಸೇರಿದ್ದ 10 ಸಾವಿರಕ್ಕೂ ಹೆಚ್ಚು ಜನರ ಸಂಭ್ರಮ ನೂರ್ಮಡಿಸಿತ್ತು.
ಆನೆ ಭಾಗವಹಿಸಲು ಆರಂಭದಲ್ಲಿ ಸ್ಥಳೀಯ ಆಡಳಿತ ಅನುಮತಿ ನೀಡದಿರುವುದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಅಲ್ಲಲ್ಲಿ ಪ್ರತಿಭಟನೆಗಳೂ ಆರಂಭವಾಗಿದ್ದವು. ಆದರೆ ವೈದ್ಯರು ಆನೆಯನ್ನು ಪರಿಶೀಲಿಸಿ ಅನುಮತಿ ನೀಡಿದ ಅನಂತರ, ಜಿಲ್ಲಾಡಳಿತವೂ ಅಸ್ತು ಎಂದಿತ್ತು. ಆದರೆ ಕೇವಲ ದೇವಸ್ಥಾನದ ಬಾಗಿಲನ್ನು ತೆರೆದ ಆನೆ ಹೆಚ್ಚು ಹೊತ್ತು ಅಲ್ಲಿ ನಿಲ್ಲದೇ ವಾಪಸಾಯಿತು. ಹಬ್ಬದ ಪೂರ್ಣ ಕಾರ್ಯಕ್ರಮದಲ್ಲಿ ಭಾಗಿಯಾಗದೇ ಸುಮಾರು ಒಂದು ಗಂಟೆಯಷ್ಟೇ ದೇಗುಲದ ಬಳಿ ಇತ್ತು. ಹೀಗಾಗಿ ಮೊದಲೇ ವಾಪಸಾಗಿದ್ದಕ್ಕೆ ಜನರು ಬೇಸರ ವ್ಯಕ್ತಪಡಿಸಿದ್ದು ಕಂಡುಬಂತು. ಆನೆ ಸಹಜವಾಗಿಯೇ ವರ್ತಿಸುತ್ತಿತ್ತು. ಸ್ಥಳೀಯಾಡಳಿತವು ಎಲ್ಲ ವಿಧಿವಿಧಾನಗಳನ್ನೂ ಆನೆ ಪೂರೈಸುವುದಕ್ಕೆ ಅವಕಾಶ ನೀಡಬೇಕಿತ್ತು ಎಂದು ಜನರು ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ