ಇದ್ದಿಲು ತಿಂದು ಹೊಗೆ ಬಿಡುವ ಆನೆ!
Team Udayavani, Mar 27, 2018, 6:00 AM IST
ನವದೆಹಲಿ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಆನೆಗಳು ಧೂಮವನ್ನು ಹೊರಬಿಡುವ ವಿಡಿಯೋ ಭಾರಿ ಪ್ರಚಾರ ಪಡೆದಿದೆ. 2016ರಲ್ಲಿ ವೈಲ್ಡ್ಲೈಫ್ ಕನ್ಸರ್ವೇಶನ್ ಸೊಸೈಟಿಯ ಭಾರತೀಯ ವಿಭಾಗದ ಸಹಾಯಕ ನಿರ್ದೇಶಕ ವಿನಯ್ ಕುಮಾರ್ ಸೆರೆ ಹಿಡಿದಿರುವ ವಿಡಿಯೋದಲ್ಲಿ ಆನೆಗಳ ಈ ವಿಚಿತ್ರ ಹವ್ಯಾಸ ಬಹಿರಂಗಗೊಂಡಿತ್ತು. ಮರ ಸುಟ್ಟ ಇದ್ದಿಲನ್ನು ತಿಂದುಕೊಂಡು ಆನೆಗಳು ಧೂಮವನ್ನು ಸೊಂಡಿಲಿನಿಂದ ಹೊರಹಾಕುತ್ತಿದೆ ಎಂದು ಹೇಳಲಾಗಿದ್ದು, ಇದಕ್ಕೆ ಹಲವು ರೀತಿಯ ಕಾರಣಗಳನ್ನೂ ನೀಡಲಾಗುತ್ತಿದೆ. ಇದ್ದಿಲು ವಿಷಾಂಶವನ್ನು ಹೀರಿಕೊಳ್ಳುವ ಶಕ್ತಿ ಹೊಂದಿದ್ದು, ಇದು ವನ್ಯಜೀವಿಗಳನ್ನು ಆಕರ್ಷಿಸುತ್ತದೆ. ಅಲ್ಲದೆ ಇದು ಜೀರ್ಣಶಕ್ತಿಯನ್ನು ಹೆಚ್ಚಿಸು ವುದರಿಂದ, ಕಾಡ್ಗಿಚ್ಚು ಅಥವಾ ಮಿಂಚಿನ ಸಂದರ್ಭದಲ್ಲಿ ಉಂಟಾಗುವ ಇದ್ದಿಲನ್ನು ಇವು ಸೇವಿಸುತ್ತವೆ ಎಂದು ವಿನಯ್ ಕುಮಾರ್ ಹೇಳಿದ್ದಾರೆ.
ಇಂಗಾಲಯುಕ್ತ ಇದ್ದಿಲು ಜೀರ್ಣ ಪ್ರಕ್ರಿಯೆಯಲ್ಲಿ ಧೂಮ ಉಗುಳುತ್ತದೆ ಎಂದು ವಿಜ್ಞಾನಿಗಳು ಹೇಳುತ್ತಾರೆ. 2016ರಲ್ಲೇ ಇದನ್ನು ರೆಕಾರ್ಡ್ ಮಾಡಲಾಗಿತ್ತಾದರೂ, ವೀಡಿಯೋ ಬಿಡುಗಡೆ ಮಾಡಿರಲಿಲ್ಲ. ಇತ್ತೀಚೆಗೆ ಇದನ್ನು ಬಿಡುಗಡೆ ಮಾಡಿದ ನಂತರದಲ್ಲಿ ವನ್ಯಜೀವಿ ಪ್ರಿಯರಲ್ಲಿ ಅತ್ಯಂತ ಕುತೂಹಲ ಮೂಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ