ಭೀಮಾ ಕೊರೆಗಾಂವ್ ಪ್ರಕರಣ : ವರವರ ರಾವ್ ಗೆ ಬಾಂಬೆ ಹೈಕೋರ್ಟ್ ಜಾಮೀನು..!
ಎನ್ ಐ ಎ ನ್ಯಾಯಾಲಯದ ವ್ಯಾಪ್ತಿಯಲ್ಲಿ ಕೆಲವು ಷರತ್ತುಗಳನ್ನು ವಿಧಿಸಿದ ಬಾಂಬೆ ಕೋರ್ಟ್
Team Udayavani, Feb 22, 2021, 1:25 PM IST
ನವ ದೆಹಲಿ : ಭೀಮಾ ಕೊರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧನಕ್ಕೆ ಒಳಪಟ್ಟ ಕವಿ ವರವರ ರಾವ್ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
2017 ಡಿಸೆಂಬರ್ 31 ರಂದು ಪುಣೆಯ ಎಲ್ಗರ್ ಸಮಾವೇಶ ನಡೆದ ಭೀಮಾ ಕೊರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 82 ವರ್ಷದ ವರವರ ರಾವ್ ಆರೋಪಿ ಆಗಿದ್ದರು. ವಿಚಾರಣೆಗಾಗಿ ಕಾಯುತ್ತಿದ್ದ ಅವರು ಆಗಸ್ಟ್ 28, 2018 ರಿಂದ ಬಂಧನದಲ್ಲಿದ್ದರು.
ಸದ್ಯ, ಬಾಂಬೆ ಹೈಕೋರ್ಟ್ ಅವರ ಆರೋಗ್ಯ ಸ್ಥಿತಿಯನ್ನು ಪರಿಗಣಿಸಿ ಜಾಮೀನು ನೀಡಿದೆ.
ಓದಿ: ಮಧ್ಯ ಪ್ರದೇಶದ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ : ಆರೋಪಿಗಳಲ್ಲೊಬ್ಬ ಬಿಜೆಪಿ ಮುಖಂಡ..!
ವರವರ ರಾವ್ ಉಸಿರಾಟದ ಸಮಸ್ಯೆಗೆ ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಉಸಿರಾಟ ಸಮಸ್ಯೆಯ ಬಗ್ಗೆ ಹೇಳಿಕೊಂಡ ವರವರ ರಾವ್, ಬಾಂಬೆ ಹೈಕೋರ್ಟ್ ನ ಮಧ್ಯಂತರ ಆದೇಶದ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದರು.
ರಾವ್ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಿದ ನಂತರ ತಕ್ಷಣ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ನ್ಯಾಯಮೂರ್ತಿಗಳಾದ ಎಸ್ ಎಸ್ ಶಿಂಧೆ ಮತ್ತು ಮನೀಶ್ ಪಿಟಾಲೆ ಅವರ ನ್ಯಾಯಪೀಠ ನಿರ್ದೇಶಿಸಿತ್ತು.
ವರವರ ರಾವ್ ಅವರಿಗೆ ಮೆಡಿಕಲ್ ಜಾಮೀನು ನೀಡದಿದ್ದರೇ, ಮಾನವನ ಮೂಲಭೂತ ಹಕ್ಕುಗಳಾದ ಜೀವನ ಹಾಗೂ ಆರೋಗ್ಯ ರಕ್ಷಣೆ ನೀಡುವುದನ್ನು ಉಲ್ಲಂಘನೆ ಮಾಡಿದಂತಾಗುತ್ತದೆ ಎಂದು ಬಾಂಬೆ ಹೈಕೋರ್ಟ್ ಪ್ರತಿಪಾದಿಸಿದೆ.
ಓದಿ: ಪುದುಚೇರಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್, ಸಿಎಂ ನಾರಾಯಣಸ್ವಾಮಿ ರಾಜೀನಾಮೆ
ನ್ಯಾಯಾಲವು ಜಾಮೀನನ್ನು ಅನುಮತಿಸುವಾಗ, ಎನ್ ಐ ಎ ನ್ಯಾಯಾಲಯದ ವ್ಯಾಪ್ತಿಯಲ್ಲಿ ಕೆಲವು ಷರತ್ತುಗಳನ್ನು ವಿಧಿಸಿದೆ. ರಾವ್ ತಮ್ಮ ಪಾಸ್ ಪೋರ್ಟ್ ನ್ನು ಎನ್ ಐ ಎ ನ್ಯಾಯಾಲಕ್ಕೆ ಸಲ್ಲಿಸಬೇಕು ಹಾಗೂ ಭೀಮಾ ಕೊರೆಗಾಂವ್ ಪರಕರಣದ ಯಾವುದೇ ಆರೋಪಿಗಳನ್ನು ಸಂಪರ್ಕಿಸುವಂತಿಲ್ಲ ಎಂದು ಹೇಳಿದೆ.
ವರವರ ರಾವ್ 50,000 ರೂ ಮೊತ್ತದ ವೈಯಕ್ತಿಕ ಬಾಂಡ್ ನ್ನು ಸಲ್ಲಿಸಬೇಕು ಹಾಗೂ ಅಷ್ಟೇ ಮೊತ್ತದ ಎರಡು ಜಾಮೀನುಗಳನ್ನು ಸಲ್ಲಿಸಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!