ಉಗ್ರರ ಶೋಧಕ್ಕಾಗಿ ಕಮಾಂಡೋಗಳ ಏರ್‌ಡ್ರಾಪ್‌!

ಗಾಂದರ್‌ಬಲ್‌ ಅರಣ್ಯದಲ್ಲಿ ಅವಿತಿರುವ ಉಗ್ರ ಸಮೂಹ;ರಸ್ತೆ ಇಲ್ಲದ್ದರಿಂದ ಯೋಧರ ನಿಯೋಜನೆಗೆ ವಿಮಾನ ಬಳಕೆ

Team Udayavani, Oct 7, 2019, 6:15 AM IST

aaaa

ಜಮ್ಮು: ಜಮ್ಮು ಮತ್ತು ಕಾಶ್ಮೀರದ ದಟ್ಟಾರಣ್ಯವೊಂದರಲ್ಲಿ ಅವಿತಿರುವ ಉಗ್ರರ ಪತ್ತೆಗೆ ದೊಡ್ಡ ಮಟ್ಟದ ಕಾರ್ಯಾಚರಣೆ ನಡೆಯುತ್ತಿದ್ದು, ಇದರ ಮತ್ತೂಂದು ಹಂತವಾಗಿ ರವಿವಾರ ಭಾರತೀಯ ಸೇನೆಯ ಕಮಾಂಡೋಗಳನ್ನು ವಿಮಾನಗಳ ಮೂಲಕ ಪರ್ವತಪ್ರದೇಶದಲ್ಲಿ ಕೆಳಕ್ಕಿಳಿಸಲಾಗಿದೆ.

ಬಂಡಿಪೋರಾ ಜಿಲ್ಲೆಯ ಗುರೇಜ್‌ ಪ್ರದೇಶದಿಂದ ಎಲ್‌ಒಸಿ ದಾಟಿ ನುಸುಳಿರುವ ಉಗ್ರರ ಒಂದು ದೊಡ್ಡ ಸಮೂಹವು ಜಮ್ಮುವಿನ ಗಾಂದರ್‌ಬಲ್‌ ಅರಣ್ಯ ಪ್ರದೇಶದಲ್ಲಿ ಅವಿತಿರುವ ಸುಳಿವು ಸಿಕ್ಕಿದ್ದು, 10 ದಿನಗಳಿಂದ ಭದ್ರತಾ ಪಡೆಗಳು ಶೋಧ ಕಾರ್ಯ ನಡೆಸುತ್ತಿವೆ. ಕೆಲವು ಉಗ್ರರ ಚಲನವಲನದ ಬಗ್ಗೆ ರವಿವಾರ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಕಮಾಂಡೋಗಳನ್ನು ಏರ್‌ಡ್ರಾಪ್‌ ಮಾಡಲಾಗಿದೆ.

ಗುರೇಜ್‌ನ ಎಲ್‌ಒಸಿಯಿಂದ ಗಾಂದರ್‌ಬಲ್‌ಗೆ ತೆರಳ ಬೇಕೆಂದರೆ ಅನೇಕ ಪರ್ವತಗಳನ್ನು ಏರಿಯೇ ಸಾಗಬೇಕಾಗು ತ್ತದೆ. ಇಲ್ಲಿ ರಸ್ತೆಗಳೇ ಇಲ್ಲ. ಉಗ್ರರು ಇದೇ ದಾರಿಯ ಮೂಲಕ ಭಾರತ ಪ್ರವೇಶಿಸಿರುವ ಸಾಧ್ಯತೆಯಿರುವ ಕಾರಣ ಅವರ ಶೋಧಕ್ಕಾಗಿ ಕಮಾಂಡೋಗಳನ್ನು ಬಳಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಉಗ್ರರು ಪಾಕಿಸ್ಥಾನದಿಂದ ಎಲ್‌ಒಸಿ ದಾಟಿ ದೇಶ ದೊಳಕ್ಕೆ ನುಸುಳಿದ್ದು, ದಕ್ಷಿಣ ಕಾಶ್ಮೀರದ ತ್ರಾಲ್‌ನತ್ತ ಹೊರಟಿದ್ದಾರೆ ಎಂದು ಅಂದಾಜಿಸಲಾಗಿದೆ.

ಇಬ್ಬರ ಹತ್ಯೆ ಬಳಿಕ ಕಾರ್ಯಾಚರಣೆ ತೀವ್ರ
ಸೆ.27ರಂದು ಗಾಂದರ್‌ಬಲ್‌ನಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿತ್ತು. ಇವರು ಕೂಡ ಇದೇ ಮಾರ್ಗವಾಗಿ ಒಳನುಸುಳಿದ್ದರು. ಇದಾದ ಬಳಿಕ ಉಗ್ರರ ಗುಂಪೊಂದು ಅರಣ್ಯದಲ್ಲಿ ಅವಿತಿರುವ ಸುಳಿವು ದೊರೆಯುತ್ತಲೇ ಅತಿದೊಡ್ಡ ಉಗ್ರ ನಿಗ್ರಹ ಕಾರ್ಯಾಚರಣೆಗೆ ಸೇನೆ ಇಳಿದಿದೆ.

200ರಿಂದ 300 ಉಗ್ರರು ಸಕ್ರಿಯ
ಜಮ್ಮು ಮತ್ತು ಕಾಶ್ಮೀರದಲ್ಲಿ 200ರಿಂದ 300 ಉಗ್ರರು ಸಕ್ರಿಯರಾಗಿದ್ದಾರೆ ಎಂದು ಕಾಶ್ಮೀರ ರಾಜ್ಯದ ಪೊಲೀಸ್‌ ಮುಖ್ಯಸ್ಥ ದಿಲ್‌ಬಾಗ್‌ ಸಿಂಗ್‌ ಅವರು ತಿಳಿಸಿದ್ದಾರೆ.
ಮುಂದಿನ ಚಳಿಗಾಲದ ಒಳಗೆ ಇನ್ನಷ್ಟು ಉಗ್ರರನ್ನು ಗಡಿಯೊಳಗೆ ನುಸುಳಿಸುವ ಯತ್ನವಾಗಿ ಪಾಕ್‌ ಗಡಿಯಲ್ಲಿ ಗುಂಡಿನ ದಾಳಿಯನ್ನು ಹೆಚ್ಚಿಸಿದೆ ಎಂದು ಅವರು ಹೇಳಿದರು. ಪಾಕ್‌ನ ಈ ಕುತಂತ್ರವನ್ನು ತಡೆಯಲು ಗಡಿಯಲ್ಲಿ ಹೆಚ್ಚಿನ ಸಿಬಂದಿಯನ್ನು ನಿಯೋಜಿಸಿ ಕಣ್ಗಾವಲು ಬಿಗಿಗೊಳಿಸಲಾಗಿದೆ ಎಂದು ಅವರು ವಿವರಿಸಿದರು.

650 ಬಾರಿ ಶೋಧ ಕಾರ್ಯ
ಆ. 5ರಿಂದೀಚೆಗೆ ಅಲ್ಲಲ್ಲಿ ಉಗ್ರರು ಕಣ್ಣಿಗೆ ಬೀಳುತ್ತಿದ್ದಾರೆ. ಆದರೆ ವಸತಿ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಲು ಸೇನೆಗೆ ಸಾಧ್ಯವಾಗುತ್ತಿಲ್ಲ. ಪೊಲೀಸ್‌ ಮೂಲಗಳ ಪ್ರಕಾರ ಸುಮಾರು 450 ಬಾರಿ ಉಗ್ರರು ಇಲ್ಲಿನವರ ಕಣ್ಣಿಗೆ ಬಿದ್ದಿದ್ದು, 650 ಬಾರಿ ಶೋಧ ಕಾರ್ಯ ಕೈಗೊಳ್ಳಲಾಗಿದೆ. ಈ ಪೈಕಿ ಮೂರು ಕಾರ್ಯಾಚರಣೆಗಳಲ್ಲಿ ಗುಂಡಿನ ಚಕಮಕಿ ನಡೆದು, ಉಗ್ರರನ್ನು ಹೊಡೆದುರುಳಿಸಲಾಗಿದೆ. ಕಳೆದ 2 ತಿಂಗಳಲ್ಲಿ ಕನಿಷ್ಠ 60 ಉಗ್ರರು ಕಣಿವೆ ರಾಜ್ಯಕ್ಕೆ ನುಸುಳಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.