ತುರ್ತು ನಿರ್ಗಮನ ದ್ವಾರ ಲಾಕ್ ಆಗಿದ್ದರಿಂದ 17 ಮಂದಿಯ ಪ್ರಾಣ ಹೋಯ್ತು
Team Udayavani, Feb 12, 2019, 2:10 PM IST
ಹೊಸದಿಲ್ಲಿ : ತುರ್ತು ನಿರ್ಗಮನ ದ್ವಾರ ಕಿರಿದಾಗಿದ್ದುದು ಮತ್ತು ಲಾಕ್ ಆಗಿದ್ದ ಆಗಿದ್ದ ಕಾರಣ ಕರೋಲ್ ಬಾಗ್ನ ಅರ್ಪಿತ್ ಪ್ಯಾಲೇಸ್ ಹೊಟೇಲ್ನಲ್ಲಿ ಅಗ್ನಿ ದುರಂತದಲ್ಲಿ 17 ಮಂದಿ ಪ್ರಾಣ ಕಳೆದುಕೊಳ್ಳಬೇಕಾಯಿತು ಎಂದು ಕೇಂದ್ರದ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಖಾತೆಯ ರಾಜ್ಯ ಸಚಿವ ಕೆ.ಜೆ.ಅಲ್ಫಾನ್ಸ್ ಹೇಳಿಕೆ ನೀಡಿದ್ದಾರೆ.
ದುರಂತ ನಡೆದ ದಿಲ್ಲಿಯ ಹೊಟೇಲ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅಲ್ಫಾನ್ಸ್ ಹೊಟೇಲ್ನ ಕೊಠಡಿಗಳಲ್ಲಿ ಮರದ ಪಿಠೊಪಕರಣಗಳು ಹೆಚ್ಚಾಗಿ ಇದ್ದುದರಿಂದ ಬೆಂಕಿ ವ್ಯಾಪಿಸಿಕೊಂಡಿದೆ ಎಂದರು.
ನಾನು ತುರ್ತು ನಿರ್ಗಮನ ದ್ವಾರದ ಬಳಿ ತೆರಳಿ ಪರಿಶೀಲನೆ ನಡೆಸಿದೆ. ಅದು ಕಿರಿದಾಗಿತ್ತು ಮತ್ತು ನಿನ್ನೆ ಲಾಕ್ ಆಗಿ ಇತ್ತು.ಜನರಿಗೆ ತುರ್ತಾಗಿ ಹೊರ ಹೋಗಲು ಸಾಧ್ಯವಾಗದೆ ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿಸಿದರು.
ಮೃತರ ಕುಟುಂಬಗಳಿಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಈಗಾಗಲೇ ದೆಹಲಿ ಪೊಲೀಸರು ಐಪಿಸಿ ಸೆಕ್ಷನ್ 304 ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
13 ಮೃತ ದೇಹಗಳ ಗುರುತು ಪತ್ತೆ ಹಚ್ಚಲಾಗಿದ್ದು, ಮೂವರು ಕೇರಳದವರು, ಒರ್ವ ಗುಜರಾತ್ ಮತ್ತು ಇಬ್ಬರು ಮ್ಯಾನ್ಮಾರ್ ದೇಶದವರು ಎಂದು ತಿಳಿದು ಬಂದಿದೆ.
ಹಲವರು ಆಮ್ಲಜನಕದ ಕೊರತೆ ಉಂಟಾಗಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಗ್ನಿ ಶಾಮಕ ದಳದ ಸಿಬಂದಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ