ಎನ್ಕೌಂಟರ್ ದಯಾ ನಾಯಕ್ ತಂಡದಿಂದ ತಲೆ ಮರೆಸಿಕೊಂಡಿದ್ದ ಕ್ರಿಮಿನಲ್ ಸೆರೆ
ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿ ಪಿಸ್ತೂಲ್ ಸಹಿತ ಸೆರೆ
Team Udayavani, Apr 25, 2019, 11:39 AM IST
ಮುಂಬಯಿ: ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಎನ್ಕೌಂಟರ್ ದಯಾ ನಾಯಕ್ ನೇತೃತ್ವದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಬಂಧಿತ ಆರೋಪಿಯನ್ನು ಚೇತನ್ ಚಂದು ಪಾಟೀಲ್ (29) ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿಯನ್ನು ಪಡೆದ ದಯಾ ನಾಯಕ್ ನೇತೃತ್ವದ ತಂಡವು ಆರೋಪಿಯನ್ನು ಪಶ್ಚಿಮ ವಿಭಾಗದ ಖಾರ್ ರೈಲ್ವೇ ನಿಲ್ದಾಣದ ಸಮೀಪದಲ್ಲಿ ಬಂಧಿಸಿದೆ.
ಆರೋಪಿಯಿಂದ ಅಕ್ರಮವಾಗಿ ಸಾಗಿಸುತ್ತಿದ್ದ 2 ದೇಶಿ ನಿರ್ಮಿತ ಪಿಸ್ತೂಲ್, 6 ಜೀವಂತ ಕಾಡತೂಸುಗಳನ್ನು ಪೊಲೀಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬೊರಿವಲಿ ಪೂರ್ವದ ಕಾಜುಪಾಡಾ, ಅಂಬೆಮಾತಾ ಮಂದಿರ ಸಮೀಪದ, ಜಮುನ್ದಾಸ್ ಬುಡಿಯಾ ಚಾಳ್ ನಿವಾಸಿಯಾಗಿರುವ ಆರೋಪಿಯನ್ನು ಪೊಲೀಸರು ಹೆಚ್ಚಿನ ತನಿಖೆಗೊಳಪಡಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಜತೆ ಸಿಪಿ ವಿನಯ್ ಚುಬೆ, ಅಡಿಷನಲ್ ಕಮಿಷನರ್ ಮನೋಜ್ ಕುಮಾರ್ ಶರ್ಮಾ, ವಲಯದ ಡಿಸಿಪಿ ಪರಮ್ಜಿತ್ ಸಿಂಗ್ ದಹೀಯಾ, ಎಸಿಪಿ ದಿಲೀಪ್ ಕಾಲೆ ಮೊದಲಾದವರಿದ್ದರು. ಮುಂಬಯಿಯಲ್ಲಿ 4ನೇ ಹಂತದ ಚುನಾವಣೆಯು ಎ 29ರಂದು ನಡೆಯಲಿರುವುದರಿಂದ ಕಾನೂನುಬಾಹಿರ ಚಟುವಟಿಕೆಗಳು ಹಾಗೂ ಅಪರಾಧಗಳನ್ನು ತಡೆಗಟ್ಟುವ ದೃಷ್ಟಿಯಿಂದ ನಗರ ಪೊಲೀಸರು ಹದ್ದಿನಗಣ್ಣಿಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ