ಎನ್ಕೌಂಟರ್: ಉಗ್ರ, 3 ನಾಗರಿಕರ ಸಾವು
Team Udayavani, Mar 29, 2017, 12:15 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬದ್ಗಾಂವ್ ಜಿಲ್ಲೆಯ ಚದ್ದೂರಾ ಎಂಬಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್ಕೌಂಟರ್ನಲ್ಲಿ ಉಗ್ರನನ್ನು ಕೊಂದು ಹಾಕಲಾಗಿದೆ. ಇದಾದ ಬಳಿಕ ಸ್ಥಳೀಯರು ವಿವಿಧ ಭದ್ರತಾ ಪಡೆಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಉಂಟಾದ ಘರ್ಷಣೆಯಲ್ಲಿ ಮೂವರು ನಾಗರಿಕರು ಅಸುನೀಗಿದ್ದಾರೆ.
ಬದ್ಗಾಂವ್ನಲ್ಲಿ ಉಗ್ರನ ಇರುವಿಕೆ ಬಗ್ಗೆ ಸುಳಿವು ಸಿಕ್ಕಿದ ಕೂಡಲೇ ವಿವಿಧ ಭದ್ರತಾ ಸಂಸ್ಥೆಗಳು ಕಾರ್ಯಾಚರಣೆ ಆರಂಭಿಸಿದ್ದವು. ಮಧ್ಯಾಹ್ನ 3 ಗಂಟೆಯ ಸುಮಾರಿನ ವರೆಗೂ ಶೋಧ, ಕಾರ್ಯಾಚರಣೆ ಗುಂಡಿನ ಚಕಮಕಿ ನಡೆದಿತ್ತು. ಎನ್ಕೌಂಟರ್ ಬಳಿಕ ಸ್ಥಳೀಯರು ಭದ್ರತಾ ಸಿಬ್ಬಂದಿ ವಿರುದ್ಧವೇ ಕಲ್ಲು ತೂರಾಟ ನಡೆಸಿದರು. ಈ ವೇಳೆ ಆರ್ಪಿಎಫ್ನ 43 ಸಿಬ್ಬಂದಿ, ರಾಷ್ಟ್ರೀಯ ರೈಫಲ್ಸ್ನ ಒಬ್ಬರಿಗೆ ಗಾಯಗಳಾಗಿವೆ. ಪ್ರತಿಭಟನಾ ನಿರತ ಯುವಕರನ್ನು ಹಿಮ್ಮೆಟ್ಟಿಸುವ ಸಲುವಾಗಿ ನಡೆದ ಕಾರ್ಯಾಚರಣೆ ವೇಳೆ ಮೂವರು ಯುವಕರು ಅಸುನೀಗಿದ್ದಾರೆ. ಎನ್ಕೌಂಟರ್ ಬಳಿಕ ಸೇನಾ ಪಡೆಗಳ ವಿರುದ್ಧ ಪ್ರತಿಭಟನೆ ಮಾಡುವ ಬೆಳವಣಿಗೆ ಕಳೆದ ವರ್ಷದಿಂದ ಶುರುವಾಗಿದೆ. ಕಾಂಗ್ರೆಸ್, ಸಿಪಿಎಂ ಈ ಘಟನೆಯನ್ನು ಖಂಡಿಸಿವೆ. ಸಿಎಂ ಮೆಹಬೂಬಾ ಮುಫ್ತಿ ಮುಗ್ಧ ನಾಗರಿಕರು ಅಸುನೀಗಿದ್ದಾರೆಂದು ದುಃಖೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..