ಪೊಲೀಸ್ ಅಧಿಕಾರಿಯನ್ನು ಕೊಂದ ಉಗ್ರರ ಸದೆಬಡಿದ ಭದ್ರತಾ ಪಡೆ: ಓರ್ವ ಉಗ್ರನ ಹತ್ಯೆ, ಓರ್ವನ ಬಂಧನ
Team Udayavani, Oct 20, 2020, 9:13 AM IST
ಶ್ರೀನಗರ: ಜಮ್ಮು ಕಾಶ್ಮೀರದ ಶೋಫಿಯಾನ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಭಧ್ರತಾ ಪಡೆಗಳು ಓರ್ವ ಉಗ್ರನನ್ನು ಸದೆಬಡೆಯುವಲ್ಲಿ ಯಶಸ್ವಿಯಾಗಿದೆ.
ಇದೇ ವೇಳೆ ಓರ್ವ ಉಗ್ರ ಗಾಯಗೊಂಡಿದ್ದು, ಆತನನ್ನು ಅನಂತನಾಗ್ ಜಿಲ್ಲೆಯಲ್ಲಿ ಸೆರೆ ಹಿಡಿಯಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ಮಾಹಿತಿ ನೀಡಿದ್ದಾರೆ.
ಇದಕ್ಕೂ ಮೊದಲು ಉಗ್ರರು ಪೊಲೀಸ್ ಅಧಿಕಾರಿಯೋರ್ವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಅನಂತನಾಗ್ ಪೊಲೀಸ್ ಅಧಿಕಾರಿಯು ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಘಟನೆಯಲ್ಲಿ ಗಾಯಗೊಂಡಿದ್ದ ಇನ್ ಸ್ಪೆಕ್ಟರ್ ಮೊಹಮ್ಮದ್ ಅಶ್ರಫ್ ಭಟ್ ಅವರನ್ನು ಬಿಜ್ ಬೆಹ್ರಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಯಶಸ್ವಿಯಾಗಲಿಲ್ಲ. ಇದಾಗಿ ಒಂದು ಗಂಟೆಯಲ್ಲಿ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಕೊಂದು, ಓರ್ವನನ್ನು ಸೆರೆ ಹಿಡಿದಿವೆ.
ಇದನ್ನೂ ಓದಿ:ನಟಿಯರಿಗೆ ಜಾಮೀನು ಕೊಡದಿದ್ದರೆ ಸ್ಫೋಟ, ಕೊಲೆ!; ನ್ಯಾಯಾಧೀಶರಿಗೇ ಡಿಟೋನೇಟರ್ ಇರಿಸಿ ಪತ್ರ
ಮೊಹಮ್ಮದ್ ಅಶ್ರಫ್ ಭಟ್ ಅವರು ಪ್ರಸ್ತುತ ಪುಲ್ವಾಮಾ ಜಿಲ್ಲೆಯ ಲೆಥ್ಪೊರಾದ ಪೊಲೀಸ್ ತರಬೇತಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅನಂತ್ನಾಗ್ನ ಬಿಜ್ಬೆಹರಾದ ಸುಂಡ್ಪೋರಾ ಕನೆಲ್ವಾನ್ ಪ್ರದೇಶದ ಅವರ ನಿವಾಸದ ಬಳಿ ಇನ್ಸ್ಪೆಕ್ಟರ್ ಭಟ್ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ.
ಘಟನಾ ಸ್ಥಳವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?