ಎನ್ಕೌಂಟರ್: ಸೇನಾ ಮೇಜರ್ ಹುತಾತ್ಮ, 3 ಯೋಧರಿಗೆ ಗಾಯ
Team Udayavani, Jun 18, 2019, 5:00 AM IST
ಶ್ರೀನಗರ: ದಕ್ಷಿಣ ಕಾಶ್ಮೀರದಲ್ಲಿ ಸೋಮವಾರ ನಡೆದ ಎನ್ಕೌಂಟರ್ವೊಂದರಲ್ಲಿ ಸೇನೆಯ ಮೇಜರ್ವೊಬ್ಬರು ಹುತಾತ್ಮರಾಗಿ, ಮತ್ತೂಬ್ಬ ಅಧಿಕಾರಿ ಹಾಗೂ ಇಬ್ಬರು ಯೋಧರು ಗಾಯಗೊಂಡ ಘಟನೆ ನಡೆದಿದೆ. ಕಾರ್ಯಾಚರಣೆಯಲ್ಲಿ ಒಬ್ಬ ಉಗ್ರನನ್ನು ಹೊಡೆದುರುಳಿಸಲಾಗಿದೆ.
ಅನಂತ್ನಾಗ್ ಜಿಲ್ಲೆಯ ಅಚಬಾಲ್ ಪ್ರದೇಶದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿ ವೇಳೆ ಇವರು ಪ್ರಾಣತೆತ್ತಿದ್ದಾರೆ. ಈ ಪ್ರದೇಶದಲ್ಲಿ ಉಗ್ರರು ಅವಿತಿರುವ ಖಚಿತ ಸುಳಿವಿನ ಮೇರೆಗೆ ಭದ್ರತಾ ಪಡೆ ಸೋಮವಾರ ಬೆಳಗ್ಗೆ ಶೋಧ ಕಾರ್ಯ ಆರಂಭಿಸಿತ್ತು. ಈ ವೇಳೆ, ಅವಿತಿದ್ದ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸತೊಡಗಿದರು. ಕೂಡಲೇ ಭದ್ರತಾ ಪಡೆ ಕೂಡ ಪ್ರತಿದಾಳಿ ನಡೆಸಿತು.
ಕೆಲ ಗಂಟೆಗಳ ಕಾಲ ಎರಡೂ ಕಡೆ ಗುಂಡಿನ ಚಕಮಕಿ ನಡೆದಿದ್ದು, ಕಾರ್ಯಾ ಚರಣೆಯಲ್ಲಿ ಸೇನೆಯ ಮೇಜರ್ವೊಬ್ಬರು ಮೃತಪಟ್ಟಿದ್ದಾರೆ. ಮತ್ತೂಬ್ಬರು ಮೇಜರ್ ಹಾಗೂ ಇಬ್ಬರು ಯೋಧರು ಗಾಯಗೊಂಡಿದ್ದು, ಅವರನ್ನು ಶ್ರೀನಗರದ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯೋಧನಿಗೆ ಗಾಯ: ಜಮ್ಮು-ಕಾಶ್ಮೀರದ ಪೂಂಛ… ಜಿಲ್ಲೆಯ ಎಲ್ಒಸಿಯಲ್ಲಿ ಪಾಕಿ ಸ್ತಾನ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಿಂದಾಗಿ ಯೋಧರೊಬ್ಬರು ಗಾಯಗೊಂಡಿದ್ದಾರೆ. ಜತೆಗೆ, 11 ವರ್ಷದ ಬಾಲಕಿಗೂ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೇನೆ ಗುರಿಯಾಗಿಸಿ ಐಇಡಿ ಸ್ಫೋಟ
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸೋಮವಾರ ಸೇನಾ ಬೆಂಗಾವಲನ್ನು ಗುರಿಯಾಗಿಸಿಕೊಂಡು ಉಗ್ರರು ಸುಧಾರಿತ ಸ್ಫೋಟಕಗಳನ್ನು ಸ್ಫೋಟಿಸಿದ್ದಾರೆ. ಪರಿಣಾಮ, 9 ಯೋಧರು, ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ. ಅರಿಹಾಲ್-ಲಸ್ಸಿಪೋರಾ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಫೆ.14ರಂದು 40 ಸಿಆರ್ಪಿಎಫ್ ಯೋಧರನ್ನು ಬಲಿತೆಗೆದು ಕೊಂಡ ಪುಲ್ವಾಮಾದ ಜಮ್ಮು- ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಯಿಂದ 27 ಕಿ.ಮೀ. ದೂರದಲ್ಲಿ ಈ ಸ್ಫೋಟ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ