16ನೇ ಲೋಕಸಭೆ ಅಧಿವೇಶನ ಮುಕ್ತಾಯ: 205 ಮಸೂದೆಗೆ ಅನುಮೋದನೆ


Team Udayavani, Feb 14, 2019, 12:30 AM IST

f-25.jpg

ಹೊಸದಿಲ್ಲಿ: ಪ್ರಸ್ತುತ ಅವಧಿಯ ಅಂದರೆ, 2014 ರಿಂದ 2019ರ ವರೆಗೆ ನಡೆದ 16ನೇ ಲೋಕಸಭೆ ಕಲಾಪ ಬುಧವಾರ ಮುಕ್ತಾಯವಾಗಿದೆ. ಲೋಕಸಭೆ, ರಾಜ್ಯಸಭೆ ಕಲಾಪಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. 16ನೇ ಲೋಕಸಭೆ ಹಲವು ಮಹತ್ವಗಳನ್ನೂ ಹೊಂದಿದೆ. ಈ ಅವಧಿಯಲ್ಲಿ 205 ಮಸೂದೆಗಳಿಗೆ ಅನುಮೋದನೆ ಲಭ್ಯವಾಗಿದ್ದರೆ, 45 ಅಧ್ಯಾದೇಶಗಳನ್ನು ಹೊರಡಿಸಲಾಗಿದೆ. ದೇಶದಲ್ಲಿ ರೈತರ ಸಮಸ್ಯೆ, ಹಣದುಬ್ಬರ ಮತ್ತು ವಿವಿಧ ನೈಸರ್ಗಿಕ ವಿಪತ್ತುಗಳ ಸಹಿತ ಹಲವು ಅಂಶಗಳ ಬಗ್ಗೆ ಪ್ರಮುಖವಾಗಿ ಚರ್ಚೆಯಾಗಿದೆ.

ಯುವ ಸಂಸದರೇ ಬೆಸ್ಟ್‌ !
ಮೊದಲ ಬಾರಿ ಆಯ್ಕೆಯಾದ 314 ಸಂಸದರು 311 ಪ್ರಶ್ನೆ ಕೇಳಿದ್ದಾರೆ. 72 ಚರ್ಚೆಗಳಲ್ಲಿ ಭಾಗವಹಿಸಿದ್ದಾರೆ. ಮೂರು ಬಾರಿ ಆಯ್ಕೆಯಾದವರು ಅಧಿಕ ಸಂಖ್ಯೆಯ ಅಂದರೆ 335 ಪ್ರಶ್ನೆಗಳನ್ನು ಕೇಳಿದ್ದಾರೆ. ಯುವ ಸಂಸದರ ಭಾಗವಹಿಸುವಿಕೆ ಉತ್ತಮವಾಗಿದ್ದು, 40ಕ್ಕಿಂತ ಕಡಿಮೆ ವಯಸ್ಸಿನ ಸಂಸದರು ಶೇ. 7 ರಷ್ಟಿದ್ದಾರೆ. ಇವರು ಒಟ್ಟು 344 ಪ್ರಶ್ನೆಗಳನ್ನು ಕೇಳಿದ್ದಾರೆ. 40ರಿಂದ 70 ವರ್ಷದ ಸಂಸದರು ಕೇವಲ 45 ಚರ್ಚೆಯಲ್ಲಿ ಭಾಗವಹಿಸಿದ್ದರೆ, 70ಕ್ಕಿಂತ ಹೆಚ್ಚು ವಯಸ್ಸಿನ ಸಂಸದರು ಭಾಗವಹಿಸಿದ ಚರ್ಚೆಗಳ ಸಂಖ್ಯೆ ಇನ್ನೂ ಕಡಿಮೆ ಇದೆ.

ಮುಖ್ಯಾಂಶಗಳು
1,215 ಗಂಟೆಗಳ ಕಲಾಪ
ಶೇ.20ರಷ್ಟು ಹೆಚ್ಚು ಅವಧಿ: 15ನೇ ಲೋಕಸಭೆಗೆ ಹೋಲಿಸಿದರೆ
ಶೇ. 40ರಷ್ಟು ಕಡಿಮೆ ಅವಧಿ: ಸರಾಸರಿ ಲೋಕಸಭೆ ಕಾರ್ಯನಿರ್ವಹಣೆಗೆ ಹೋಲಿಸಿದರೆ
331 ದಿನ: ಅಧಿವೇಶನ ನಡೆದ ದಿನಗಳು
ಶೇ. 16: ಗದ್ದಲಕ್ಕೆ ಕಲಾಪ ಬಲಿ
5ನೇ ಲೋಕಸಭೆಗೆ ಹೋಲಿಸಿದರೆ ಕಾರ್ಯನಿರ್ವಹಣೆಯಲ್ಲಿ ಶೇ. 37ರಷ್ಟು ಉತ್ತಮ
ಶೇ. 32ರಷ್ಟು ಮಸೂದೆಗಳ ಬಗ್ಗೆ ಲೋಕಸಭೆಯಲ್ಲಿ ಮೂರು ಗಂಟೆಗಳಿಗಿಂತಲೂ ಹೆಚ್ಚು ಕಾಲ ಚರ್ಚೆ
ಶೇ. 25ರಷ್ಟು ಮಸೂದೆಗಳು ಸಮಿತಿಗಳಿಗೆ ಶಿಫಾರಸು. 15ನೇ ಲೋಕಸಭೆಯಲ್ಲಿ ಶೇ. 75
46- ಮಸೂದೆಗಳು ರದ್ದು
ಶೇ.18- ಪ್ರಶ್ನೆಗಳಿಗೆ ಮೌಖೀಕ ಉತ್ತರ
422 ಗಂಟೆ 19 ನಿಮಿಷ- ಗದ್ದಲದಿಂದ ನಷ್ಟದ ಅವಧಿ

ಖರ್ಗೆಯೇ ಬೆಸ್ಟ್‌
ಕರ್ನಾಟಕದ ಸಂಸದರ ಪೈಕಿ ಮಲ್ಲಿಕಾರ್ಜುನ ಖರ್ಗೆ ಅತೀ ಹೆಚ್ಚು ಅಂದರೆ 155 ಚರ್ಚೆಗಳಲ್ಲಿ ಭಾಗವಹಿಸಿದ್ದರೆ, ಹಾವೇರಿ ಸಂಸದ ಶಿವಕುಮಾರ್‌ ಉದಾಸಿ 143 ಚರ್ಚೆಗಳಲ್ಲಿ ಭಾಗವಹಿಸಿದ್ದಾರೆ. ಚಾಮರಾಜನಗರ ಕ್ಷೇತ್ರದ ಧ್ರುವನಾರಾಯಣ (119), ತುಮಕೂರಿನ ಎಸ್‌.ಪಿ. ಮುದ್ದಹನುಮೇಗೌಡ (116) ಮತ್ತು ಉಡುಪಿ-ಚಿಕ್ಕಮಗಳೂರು ಶೋಭಾ ಕರಂದ್ಲಾಜೆ (111) ಚರ್ಚೆಗಳಲ್ಲಿ ಭಾಗವಹಿಸಿದ್ದಾರೆ. ಸಿ.ಎಸ್‌. ಪುಟ್ಟರಾಜು, ಎಲ್‌.ಆರ್‌.ಶಿವರಾಮೇಗೌಡ ಕೇವಲ ಒಂದು ಚರ್ಚೆಯಲ್ಲಿ ಭಾಗವಹಿಸಿದ್ದಾರೆ. ಉತ್ತರ ಕನ್ನಡ ಸಂಸದ ಅನಂತ ಕುಮಾರ ಹೆಗಡೆ 2017ರ ಆಗಸ್ಟ್‌ನಲ್ಲಿ ಸಚಿವರಾಗುವುದಕ್ಕೂ ಮೊದಲು 1 ಬಾರಿ ಚರ್ಚೆಯಲ್ಲಿ ಭಾಗವಹಿಸಿದ್ದರು. ಸಂಸದ ಧ್ರುವನಾರಾಯಣ 4 ಖಾಸಗಿ ಮಸೂದೆಯನ್ನೂ ಮಂಡಿಸಿದ್ದಾರೆ. ಇವರನ್ನು ಹೊರತುಪಡಿಸಿ ರಾಜ್ಯದ ಯಾವುದೇ ಸಂಸದರು ಖಾಸಗಿ ಮಸೂದೆಯನ್ನು ಮಂಡಿಸಿಲ್ಲ.

ಶೋಭಾ ಕರಂದ್ಲಾಜೆ ಮುಂಚೂಣಿ
ಪ್ರಶ್ನೆಗಳನ್ನು ಕೇಳಿದ ರಾಜ್ಯ ಸಂಸದರ ಪೈಕಿ ಶೋಭಾ ಕರಂದ್ಲಾಜೆ ಮುಂಚೂಣಿಯಲ್ಲಿದ್ದು, ಒಟ್ಟು 729 ಪ್ರಶ್ನೆಗಳನ್ನು ಕೇಳಿದ್ದಾರೆ. ರಾಯಚೂರಿನ ಸಂಸದ ಬಿ.ವಿ.ನಾಯಕ್‌ 685, ಮೈಸೂರು ಸಂಸದ ಪ್ರತಾಪ್‌ ಸಿಂಹ 680, ದಕ್ಷಿಣ ಕನ್ನಡದ ಸಂಸದ ನಳಿನ್‌ ಕುಮಾರ್‌ ಕಟೀಲು 682 ಪ್ರಶ್ನೆಗಳನ್ನು ಕೇಳಿದ್ದಾರೆ. ಕೋಲಾರ ಸಂಸದ ಕೆ.ಎಚ್‌.ಮುನಿಯಪ್ಪ, ಹಾಸನ ಸಂಸದ ದೇವೇಗೌಡ ಒಂದೇ ಒಂದು ಪ್ರಶ್ನೆಯನ್ನೂ ಕೇಳಿಲ್ಲ. 

ಅನುಮೋದಿತ ಮಸೂದೆ
ಜಿಎಸ್‌ಟಿ ಮಸೂದೆ    
ರೆರಾ ಕಾಯ್ದೆ
ಆರ್ಥಿಕವಾಗಿ ಮೇಲ್ವರ್ಗದವರಿಗೆ ಮೀಸಲು
ಎಸ್‌ಸಿ, ಎಸ್‌ಟಿ (ದೌರ್ಜನ್ಯ ತಡೆ) ತಿದ್ದುಪಡಿ
ಕಪ್ಪುಹಣ ತಡೆ ಮಸೂದೆ
ಬೇನಾಮಿ ಆಸ್ತಿ ಮುಟ್ಟುಗೋಲು ಮಸೂದೆ

ಅನುಮೋದನೆಗೆ ಬಾಕಿ
ಭೂಸ್ವಾಧೀನ ಕಾಯ್ದೆ    
ತ್ರಿವಳಿ ತಲಾಖ್‌
ಪೌರತ್ವ ತಿದ್ದುಪಡಿ
ಮೋಟಾರು ವಾಹನ ತಿದ್ದುಪಡಿ ಮಸೂದೆ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.