ಅಬಕಾರಿ ಹಗರಣ: 76 ಕೋಟಿ ರೂ ಜಪ್ತಿ ಮಾಡಿದ ಜಾರಿ ನಿರ್ದೇಶನಾಲಯ
Team Udayavani, Jan 25, 2023, 6:20 PM IST
ನವದೆಹಲಿ: ದೆಹಲಿಯ ಅಬಕಾರಿ ನೀತಿ ಹಗರಣದ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಗುರಿಯಾದ ನಾಯಕರ ಸಹವರ್ತಿಗಳಿಗೆ ಸಂಬಂಧಿಸಿದಂತೆ ನವದೆಹಲಿ ಮತ್ತು ಮುಂಬೈನಲ್ಲಿರುವ 76.54 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿಗೊಳಿಸಿರುವುದಾಗಿ ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ತಿಳಿಸಿದೆ.
ಅಕ್ರಮ ಹಣವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅನ್ವಯ ತಾತ್ಕಾಲಿಕ ಜಪ್ತಿ ಆದೇಶವನ್ನು ಇಡಿ ಹೊರಡಿಸಿ, ಆಸ್ತಿ ಮುಟ್ಟುಗೋಲು ಹಾಕಿದೆ. ದೆಹಲಿ ಉಪ ಮುಖ್ಯಮಂತ್ರಿ ಮನಿಷ ಸಿಸೋಡಿಯಾ ಅವರ ನಿಕಟವರ್ತಿ ಎನ್ನಲಾಗಿದ್ದ ಆಪ್ನ ಸಂವಹನ ಉಸ್ತುವಾರಿ ವಿಜಯ್ ನಾಯರ್ ಹಾಗೂ ಉದ್ಯಮಿ ದಿನೇಶ್ ಅರೋರಾ ಹಾಗೂ ಅಮಿತ್ ಅರೋರಾ ಅವರ ಆಸ್ತಿಯನ್ನು ಜಪ್ತಿ ಮಾಡಲಾಗಿದೆ.
ಅಲ್ಲದೇ, ತೆಲಂಗಾಣ ಮುಖ್ಯಮಂತ್ರಿಗಳ ಪುತ್ರಿ ಎಂಎಲ್ಸಿ ಕವಿತಾ ಅವರ ಸಂಸ್ಥೆಯ ಪಾಲುದಾರರಾಗಿದ್ದ ಹೈದರಾಬಾದ್ ಮೂಲದ ಮದ್ಯ ಉದ್ಯಮಿ ಅರುಣ್ ಪಿಳ್ಳೆ, ಮತ್ತೂಬ್ಬ ಮದ್ಯ ಉದ್ಯಮಿ ಸಮೀರ್ ಮಹಂದೂರು ಮತ್ತು ಪತ್ನಿ ಗೀತಾ ಮಹಂದೂರು ಅವರ ಒಡೆತನದ ಆಸ್ತಿಗಳನ್ನು ಮುಟ್ಟುಗೋಲು ಹಾಕಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಡಿ ವಶಪಡಿಸಿಕೊಂಡಿರುವ 76.54 ಕೋಟಿ ರೂ.ಮೊತ್ತದ ಆಸ್ತಿಯಲ್ಲಿ, ಸಮೀರ್ ಹಾಗೂ ಗೀತಾ ದಂಪತಿಯ ಒಡೆತನದ 35
ರೂ.ಮೌಲ್ಯದ ವಸತಿ ಆಸ್ತಿ, 10.23 ಕೋಟಿ ರೂ. ಮೌಲ್ಯದ 50 ವಾಹನಗಳು ಸೇರಿವೆ. ಜತೆಗೆ ಅಮಿತ್ಗೆ ಸಂಬಂಧಿಸಿದ 7.68 ಕೋಟ ರೂ, ವಿಜಯ್ನ 4.95 ಕೋಟಿ ರೂ. ದಿನೇಶ್ಗೆ ಸಂಬಂಧಿಸಿದ 2.25 ಕೋಟಿ ರೂ ಹಾಗೂ ಅರುಣ್ ಪಿಲ್ಲೆ„ನ 14.39 ಕೋಟಿ ರೂ. ಮೌಲ್ಯದ ಆಸ್ತಿ ಸೇರಿದೆ.
ಇದನ್ನೂ ಓದಿ: ಶತಕ ಬಾರಿಸಿದರೂ ತಂದೆಗೆ ಖುಷಿ ಆಗಿರಲಿಕ್ಕಿಲ್ಲ: ಶುಭಮನ್ ಗಿಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !