E.D ಮುಖ್ಯಸ್ಥರ ಮೂರನೇ ಬಾರಿ ಅಧಿಕಾರ ವಿಸ್ತರಣೆ ಕಾನೂನು ಬಾಹಿರ: ಸುಪ್ರೀಂ ಚಾಟಿ


Team Udayavani, Jul 11, 2023, 3:23 PM IST

Enforcement Directorate

ಹೊಸದಿಲ್ಲಿ: ಜಾರಿ ನಿರ್ದೇಶನಾಲಯದ (ಇಡಿ) ಹಾಲಿ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಅವರ ಅಧಿಕಾರಾವಧಿಯನ್ನು ವಿಸ್ತರಿಸುವ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ. ವಿಸ್ತರಣೆಯು ಸುಪ್ರೀಂ ಕೋರ್ಟ್‌ನ 2021 ರ ತೀರ್ಪಿನ ಉಲ್ಲಂಘನೆಯಾಗಿದೆ ಎಂದು ನ್ಯಾಯಾಲಯ ಹೇಳಿದೆ.

ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ವಿಕ್ರಮ್ ನಾಥ್ ಮತ್ತು ಸಂಜಯ್ ಕರೋಲ್ ಅವರಿದ್ದ ಪೀಠವು ಸಂಜಯ್ ಕುಮಾರ್ ಮಿಶ್ರಾ ಅವರ ಅಧಿಕಾರಾವಧಿ ವಿಸ್ತರಣೆಗೆ ತಡೆ ನೀಡಿದೆ. ನವೆಂಬರ್ 2021 ರ ನಂತರ ವಿಸ್ತರಣೆಗಳನ್ನು ಹೊಂದದಂತೆ ಮಿಶ್ರಾ ಅವರನ್ನು ತಡೆಯುವ ಆದೇಶವನ್ನು ನ್ಯಾಯಾಲಯವು ನೀಡಿತ್ತು.

ಆದರೆ ಮಿಶ್ರಾ ಜುಲೈ 31ರವರೆಗೆ ತಮ್ಮ ಹುದ್ದೆಯಲ್ಲಿ ಮುಂದುವರಿಯಬಹುದು ಎಂದು ಕೋರ್ಟ್ ಹೇಳಿದೆ.

ಇ.ಡಿ ನಿರ್ದೇಶಕರ ಅಧಿಕಾರಾವಧಿಯನ್ನು ವಿಸ್ತರಿಸಲು ಅವಕಾಶ ನೀಡುವ ಕಾನೂನನ್ನು ಜಾರಿಗೊಳಿಸಲು ಶಾಸಕಾಂಗಕ್ಕೆ ಅಧಿಕಾರವಿದ್ದರೂ, ಮಿಶ್ರಾ ವಿರುದ್ಧ 2021 ರ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‌ನಿಂದ ನಿರ್ದಿಷ್ಟ ಆದೇಶವಿರುವುದರಿಂದ ಅದು ಮಿಶ್ರಾ ಅವರ ರಕ್ಷಣೆಗೆ ಬರುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಜಾರಿ ನಿರ್ದೇಶನಾಲಯದ (ಇಡಿ) ಹಾಲಿ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಅವರ ಅಧಿಕಾರಾವಧಿ ವಿಸ್ತರಣೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಬ್ಯಾಚ್‌ನಲ್ಲಿ ಈ ತೀರ್ಪು ಬಂದಿದೆ.

ಮಿಶ್ರಾ ಅವರು ನವೆಂಬರ್ 2018 ರಲ್ಲಿ ಎರಡು ವರ್ಷಗಳ ಅವಧಿಗೆ ಇ.ಡಿ ನಿರ್ದೇಶಕರಾಗಿ ನೇಮಕಗೊಂಡರು. ಈ ಅವಧಿಯು ನವೆಂಬರ್ 2020 ರಲ್ಲಿ ಮುಕ್ತಾಯವಾಯಿತು. ಮೇ 2020 ರಲ್ಲಿ, ಅವರು 60 ರ ನಿವೃತ್ತಿ ವಯಸ್ಸನ್ನು ತಲುಪಿದರು.

ಆದಾಗ್ಯೂ, ನವೆಂಬರ್ 13, 2020 ರಂದು, ಕೇಂದ್ರ ಸರ್ಕಾರವು ಕಚೇರಿಯ ಆದೇಶವನ್ನು ಹೊರಡಿಸಿದ್ದು, ರಾಷ್ಟ್ರಪತಿಗಳು 2018 ರ ಆದೇಶವನ್ನು ಮಾರ್ಪಡಿಸಿದ್ದಾರೆ ಎಂದು ತಿಳಿಸಿದ್ದು, ‘ಎರಡು ವರ್ಷಗಳ’ ಸಮಯವನ್ನು ‘ಮೂರು ವರ್ಷಗಳ’ ಅವಧಿಗೆ ಬದಲಾಯಿಸಲಾಗಿತ್ತು. ಇದನ್ನು ಎನ್‌ಜಿಒ ಕಾಮನ್ ಕಾಸ್ ಸುಪ್ರೀಂ ಕೋರ್ಟ್‌ ನಲ್ಲಿ ಪ್ರಶ್ನಿಸಿತ್ತು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.