ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ 6 ಮಂದಿಯಿಂದ ಗ್ಯಾಂಗ್ರೇಪ್
Team Udayavani, Jan 8, 2019, 6:21 AM IST
ರೂರ್ಕೆಲಾ: 22 ರ ಹರೆಯದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ 6 ಮಂದಿ ಕಾಮುಕರು 2 ದಿನಗಳ ಕಾಲ ಗ್ಯಾಂಗ್ ರೇಪ್ ನಡೆಸಿದ ಹೇಯ ಘಟನೆ ಜಾರ್ಖಂಡ್ನ ಚಕ್ರಧರಪುರ್ನ ಅರಣ್ಯದಲ್ಲಿ ಡಿಸೆಂಬರ್ 30 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಒಡಿಶಾದ ರೂರ್ಕೆಲಾದಾ ರೈಲ್ವೇ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ರೈಲು ನಿಲ್ದಾಣದಿಂದ ವಿದ್ಯಾರ್ಥಿನಿಯನ್ನು ಆಕೆಯ ಸಹೋದರನ ಸ್ನೇಹಿತ ಡ್ರಾಪ್ ಕೊಡುವ ನೆಪದಲ್ಲಿ ಮನೆಗೆ ಕರೆದೊಯ್ದು ಬಳಿಕ ಸ್ನೇಹಿತರನ್ನು ಕರೆಸಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿ ಕಾಡಿನಲ್ಲಿ ಎಸೆದು ಹೋಗಿದ್ದಾರೆ.
ಜನವರಿ 1 ರಂದು ಈ ಘಟನೆ ನಡೆದಿದ್ದು ಇದುವರೆಗೆ ಯಾವೊಬ್ಬ ಆರೋಪಿಯನ್ನೂ ಬಂಧಿಸಲಾಗಿಲ್ಲ.
ಸದ್ಯ ವಿದ್ಯಾರ್ಥಿನಿಗೆ ರೂರ್ಕೆಲಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಸಹೋದರ ಮಾಧ್ಯಮಗಳಿಗೆ ತಿಳಿಸಿದ್ದಾನೆ.
ಪೊಲೀಸರು ಆರೋಪಿಗಳ ಬಂಧನಕ್ಕಾಗಿ 2 ತಂಡಗಳನ್ನು ರಚಿಸಿದ್ದಾರೆ.
2 ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಒಡಿಶಾದಲ್ಲಿ ನವೀನ್ ಪಟ್ನಾಯಕ್ ಸರಕಾರ ಮಹಿಳೆಯರ ಸುರಕ್ಷತೆಗೆ ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದ್ದರು.
ಕಚೇರಿಗಳ ದಾಖಲೆಯಂತೆ ಒಡಿಶಾದಲ್ಲಿ 2014 ರಿಂದ 2017 ರ ವರೆಗೆ 5,422 ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ರೇಪ್ ಪ್ರಕರಣಗಳು ದಾಖಲಾಗಿದ್ದು, 671 ಗ್ಯಾಂಗ್ರೇಪ್ಗ್ಳು ದಾಖಲಾಗಿವೆ.135 ಜನರಿಗೆ ಶಿಕ್ಷೆಯಾಗಿದೆ.
ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಮನೇಕಾ ಗಾಂಧಿ ಅವರು ಪಟ್ನಾಯಕ್ ಅವರಿಗೆ ಪತ್ರ ಬರೆದು ಆರೋಪಿಗಳನ್ನು ಶೀಘ್ರವಾಗಿ ಬಂಧಿಸಲು ಸಾಧ್ಯವಗಲು ಪೊಲೀಸರಿಗೆ ತರಬೇತಿ ನೀಡಲು ಸಲಹೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ