ಸಮಾನತೆ, ಸಹಾನುಭೂತಿ ಭಾರತದ ಶಕ್ತಿಯಾಗಲಿ


Team Udayavani, Aug 15, 2017, 8:10 AM IST

kovind.jpg

ನವದೆಹಲಿ: “ಭಾರತವು ಸಮಾನತಾವಾದ ಮತ್ತು ಸಹಾನು ಭೂತಿಯ ಶಕ್ತಿಯಾಗಬೇಕು. ದೇಶದ ಡಿಎನ್‌ಎಗೆ ಮಾನವತೆಯ ಅಂಶವು ಬಹುಮುಖ್ಯವಾದದ್ದು.’

70ನೇ ಸ್ವಾತಂತ್ರೊತ್ಸವದ ಹಿನ್ನೆಲೆಯಲ್ಲಿ ದೇಶದ ಜನತೆಗೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ನೀಡಿರುವ ಕರೆಯಿದು. ರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಕೋವಿಂದ್‌ ಅವರು ಸೋಮವಾರ ರಾತ್ರಿ ದೇಶವನ್ನುದ್ದೇಶಿಸಿ ಸ್ವಾತಂತ್ರೊéàತ್ಸವದ ಭಾಷಣ ಮಾಡಿದರು. ರಾಣಿ ಚೆನ್ನಮ್ಮ, ಝಾನ್ಸಿ ರಾಣಿ ಲಕ್ಷ್ಮಿಬಾಯಿ, ಮಾತಂಗಿರಿ ಹಾಜ್ರಾ, ಭಗತ್‌ ಸಿಂಗ್‌, ಆಜಾದ್‌, ಅಶ್ಫಾಕುಲ್ಲಾ ಖಾನ್‌, ಮಹಾತ್ಮ ಗಾಂಧಿ, ಬೋಸ್‌ ಮತ್ತಿತರರು ದೇಶಕ್ಕಾಗಿ ಪ್ರಾಣ ತ್ಯಾಗಿ ಮಾಡಿದ್ದು, ಅವರನ್ನೇ ಸ್ಫೂರ್ತಿಯಾಗಿಟ್ಟುಕೊಂಡು ನಾವು ನವಭಾರತವನ್ನು ಕಟ್ಟಬೇಕಿದೆ ಎಂದರು. ಪಂಡಿತ್‌ ಜವಾಹರ್‌ಲಾಲ್‌ ನೆಹರೂರನ್ನೂ ಸ್ಮರಿಸಿದ ರಾಷ್ಟ್ರಪತಿ ಕೋವಿಂದ್‌, “ಭಾರತದ ಪ್ರಾಚೀನ ಪರಂಪರೆ ಮತ್ತು ಸಂಪ್ರದಾಯಗಳನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಸಮ್ಮಿಳಿತಗೊಳಿಸಿ ಸಾಗಬೇಕು ಎಂದಿದ್ದರು. ಅದನ್ನು ಅನುಸರಿ ಸಬೇಕು’ ಎಂದೂ ಹೇಳಿದರು. ಇದೇ ವೇಳೆ, ಜಎಸ್‌ಟಿ ಜಾರಿ, ಸ್ವತ್ಛ ಭಾರತ, ನೋಟುಗಳ ಅಮಾನ್ಯ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ಕೋವಿಂದ್‌ ಶ್ಲಾ ಸಿದರು.

ಮೂವರು ಯೋಧರಿಗೆ “ಕೀರ್ತಿ ಚಕ್ರ’ದ ಗರಿಮೆ
ಉಗ್ರರ ವಿರುದ್ಧ ಹೋರಾಡಿ ಪ್ರಾಣತೆತ್ತ ಇಬ್ಬರು ಯೋಧರು ಸೇರಿದಂತೆ ಭದ್ರತಾ ಪಡೆಯ ಐವರು ಪ್ರಸಕ್ತ ವರ್ಷದ ಕೀರ್ತಿ ಚಕ್ರಕ್ಕೆ ಭಾಜನರಾಗಿದ್ದಾರೆ. ಹವಿಲ್ದಾರ್‌ ಗಿರೀಶ್‌ ಗುರುಂಗ್‌, ಮೇಜರ್‌ ಡೇವಿಡ್‌ಮನುÉನ್‌, ಪ್ರಮೋದ್‌ ಕುಮಾರ್‌ ಅವರಿಗೆ ಮರಣೋತ್ತರ ಕೀರ್ತಿ ಚಕ್ರ ದೊರೆತರೆ, ಮೇಜರ್‌ ಪ್ರೀತಂ ಸಿಂಗ್‌ ಕುನ್ವಾರ್‌, ಚೇತನ್‌ಕುಮಾರ್‌ ಗೀತಾ ಅವರ ಮುಡಿಗೂ ಎರಡನೇ ಅತ್ಯುನ್ನತ ಶೌರ್ಯ ಪ್ರಶಸ್ತಿಯಾದ ಕೀರ್ತಿ ಚಕ್ರದ ಗೌರವ ಸಂದಲಿದೆ. ವಿಶೇಷವೆಂದರೆ, ಈ ಬಾರಿ ಯಾರಿಗೂ ಅತ್ಯುನ್ನತ ಗೌರವವಾದ ಅಶೋಕ ಚಕ್ರವನ್ನು ಘೋಷಿಸಲಾಗಿಲ್ಲ. ಇದು ಹೊರತುಪಡಿಸಿದರೆ, ರಕ್ಷಣಾ ಮತ್ತು ಅರೆಸೇನಾ ಪಡೆಯ ಯೋಧರಿಗೆ ಒಟ್ಟು 112 ಶೌರ್ಯ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ನಕ್ಸಲರ ವಿರುದ್ಧ ಹೋರಾಡಿ ಹುತಾತ್ಮರಾದ ಛತ್ತೀಸ್‌ಗಢದ ಪೊಲೀಸ್‌ ಅಧಿಕಾರಿ  ಅವರಿಗೆ ದೇಶದ ಅತ್ಯುನ್ನತ ಪೊಲೀಸ್‌ ಶೌರ್ಯ ಪದಕ ಪ್ರದಾನ ಮಾಡಲಾಗುತ್ತದೆ. ಇದೇ ವೇಳೆ ಕೇಂದ್ರ ಮತ್ತು ರಾಜ್ಯಗಳ ಪೊಲೀಸ್‌ ಪಡೆಯ 989 ಸಿಬ್ಬಂದಿಗೆ ವಿವಿಧ ಸೇವಾ ಪದಕಗಳನ್ನು ನೀಡಿ ಗೌರವಿಸಲಾಗುತ್ತದೆ.

ಭಾಷಣದ ಪ್ರಮುಖಾಂಶಗಳು
–  ಸರ್ಕಾರದ ನೀತಿಗಳ ಲಾಭವು ಸಮಾಜದ ಎಲ್ಲ ವರ್ಗಗಳಿಗೂ ತಲುಪುವಂತಾಗಬೇಕು.
–  ಇದಕ್ಕೆ ಸರ್ಕಾರ ಮತ್ತು ಜನರ ಪಾಲುದಾರಿಕೆ ಬಹಳ ಅಗತ್ಯ.
– 2022ಕ್ಕೆ 75ನೇ ಸ್ವಾತಂತ್ರ್ಯ ಸಂಭ್ರಮ ಆಚರಿಸಲಿದ್ದೇವೆ. ನವ ಭಾರತದ ಮೈಲುಗಲ್ಲನ್ನು ಅಷ್ಟರಲ್ಲೇ ನಾವು ತಲುಪಿರಬೇಕು.
– ನವಭಾರತ ಎಂದರೆ ಸಹಾನುಭೂತಿಯುಳ್ಳ ಸಮಾಜ. ಅದರಲ್ಲಿ ಎಸ್‌ಸಿ, ಎಸ್ಟಿ, ಒಬಿಸಿಗಳು ಕೂಡ ರಾಷ್ಟ್ರೀಯ ಅಭಿವೃದ್ಧಿ ಪ್ರಕ್ರಿಯೆಯ ಭಾಗವಾಗಿರಬೇಕು.
– ನೋಟು ಅಮಾನ್ಯಕ್ಕೆ ನೀವು ನೀಡಿದ ಬೆಂಬಲವು ನಮ್ಮದು ಎಷ್ಟೊಂದು ಜವಾಬ್ದಾರಿಯುತ ಸಮಾಜ ಎಂಬುದು ಅರಿವಾಗುತ್ತದೆ.

ಟಾಪ್ ನ್ಯೂಸ್

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.