“ಹಣದುಬ್ಬರ ಬಗ್ಗೆ ಚಿಂತನೆ ಅಗತ್ಯ’ : ದತ್ತಾತ್ರೆಯ ಹೊಸಬಾಳೆ
Team Udayavani, Jul 24, 2022, 10:26 PM IST
ನವದೆಹಲಿ: ದೇಶದಲ್ಲಿ ಹಣದುಬ್ಬರದಿಂದ ಆಹಾರ ಧಾನ್ಯಗಳ ಬೆಲೆ ಹೆಚ್ಚಾಗಿದ್ದು ಈವೆರಡರ ನಂಟಿನ ಬಗ್ಗೆ ಗಂಭೀರವಾಗಿ ಆಲೋಚಿಸುವ ತುರ್ತು ಅವಶ್ಯಕತೆಯಿದೆ ಎಂದು ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೆಯ ಹೊಸಬಾಳೆ ಅಭಿಪ್ರಾಯಪಟ್ಟಿದ್ದಾರೆ.
ಕೃಷಿ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು ಜೀವನಕ್ಕೆ ಅತ್ಯಗತ್ಯವಾಗಿ ಬೇಕಿರುವ ಸಾಮಗ್ರಿಗಳು ಕೈಗೆಟಕುವ ಬೆಲೆಯಲ್ಲಿ ಎಲ್ಲರಿಗೂ ಸಿಗುವಂತಾದರೆ ರೈತರ ಬವಣೆಗೆ ಪರಿಹಾರ ಸಿಗಬಹುದು ಎಂದರು. ಈ ಎರಡರ ನಡುವಿನ ನಂಟಿನ ಬಗ್ಗೆ ಸರ್ಕಾರ ತೀವ್ರವಾಗಿ ಆಲೋಚಿಸಬೇಕಿದೆ ಎಂದು ತಿಳಿಸಿದರು.